ಲಾಠಿ ಹಿಡಿವ ಕೈ ಕೊಳಲು ಹಿಡಿದಾಗ…
Team Udayavani, May 18, 2020, 5:40 AM IST
ಮಂಗಳೂರು: ನಗರದ ಕದ್ರಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಮನೋಜ್ ಗಟ್ಟಿ ಅವರ ಕೊಳಲು ವಾದನ ಪ್ರತಿಭೆ ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್ ಆಗಿದೆ.
ಲಾಠಿ ಹಿಡಿಯುವ ಕೈ ಕೆಲವೊಮ್ಮೆ ಕೊಳಲು ಹಿಡಿದು ನುಡಿಸುವಾಗ ಸುಮಧುರ ಸಂಗೀತ ಮಾಧುರ್ಯ ಪಸರಿಸುತ್ತದೆ. ಲಾಠಿಯು ಜನರಿಗೆ ಭಯ ಮತ್ತು ರಕ್ಷಣೆಯನ್ನು ಒದಗಿಸುತ್ತಿದ್ದರೆ ಕೊಳಲಿನ ಧ್ವನಿ ಜನರನ್ನು ತನ್ನತ್ತ ಆಕರ್ಷಿಸುತ್ತದೆ.
ಮನೋಜ್ 29 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿದ್ದು, ಮೂಲ್ಕಿ, ಮಂಗಳೂರು ಗ್ರಾಮಾಂತರ ಠಾಣೆ, ಬರ್ಕೆ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಕದ್ರಿ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಬಾಲ್ಯದಿಂದಲೂ ಕೊಳಲು ಆಸಕ್ತಿ ರೂಢಿಸಿಕೊಂಡಿದ್ದಾರೆ. ಕೆಲವು ಸಭೆ, ಸಮಾರಂಭ, ಕಾರ್ಯಕ್ರಮಗಳಲ್ಲಿ ಕೊಳಲು ವಾದನ ಕಛೇರಿ ನೀಡಿದ್ದಾರೆ.
ಬಾಲ್ಯದಲ್ಲಿ ಜಾತ್ರೆಯ ಸಂತೆಯಲ್ಲಿ ಮಾರಾಟಕ್ಕೆ ಇರಿಸಿದ್ದ ಕೊಳಲುಗಳನ್ನು ನೋಡಿ ಆಕರ್ಷಿತನಾಗಿದ್ದೆ. ಹಾಗೆ ಅಲ್ಲಿಂದ ಕೊಳಲು ಖರೀದಿಸಿಕೊಂಡು ಬಂದು ಅದನ್ನು ನುಡಿಸಲು ಅಭ್ಯಾಸ ಮಾಡುತ್ತಿದ್ದೆ. ಈ ಮೂಲಕ ಕೊಳಲು ವಾದನದ ಬಗ್ಗೆ ನನಗೆ ಅಭಿ ರುಚಿ ಹುಟ್ಟಿತ್ತು ಎನ್ನುತ್ತಾರೆ ಹೆಡ್ ಕಾನ್ಸ್ಟೇಬಲ್ ಮನೋಜ್ ಗಟ್ಟಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ