ನೀತಿ ನಿರೂಪಣಾ ಸಮಿತಿಗೆ ಧಿಕ್ಕಾರ ಪ್ರಕರಣ?


Team Udayavani, Mar 5, 2020, 3:08 AM IST

neeti-nirupa

ವಿಧಾನ ಪರಿಷತ್ತು: ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌.ದೊರೆಸ್ವಾಮಿ ವಿರುದ್ಧ ಆಡಳಿತ ಪಕ್ಷದ ಸದಸ್ಯ ರವಿಕುಮಾರ್‌ ಕೂಗಿದ “ಧಿಕ್ಕಾರ’ ಕೂಗು ಬುಧವಾರ ಕೂಡ ಮೇಲ್ಮನೆಯಲ್ಲಿ ಪ್ರತಿಧ್ವನಿಸಿತು. ಅವರು ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸದ ಹಿನ್ನೆಲೆಯಲ್ಲಿ ಪ್ರಕರಣವನ್ನು ನೀತಿ-ನಿರೂಪಣಾ ಸಮಿತಿಗೆ ವರ್ಗಾಯಿಸುವಂತೆ ಪ್ರತಿಪಕ್ಷಗಳು ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿಗೆ ಮನವಿ ಸಲ್ಲಿಸಿದವು.

ಪ್ರಕರಣವು ಸಮಿತಿಗೆ ವರ್ಗಾಯಿಸಲು ಸೂಕ್ತವೇ ಎಂಬುದನ್ನು ಪರಿಶೀಲಿಸಿ, ತೀರ್ಮಾನ ಕೈಗೊಳ್ಳುವುದಾಗಿ ಸಭಾಪತಿಗಳು ಪ್ರತಿಕ್ರಿಯಿಸಿದರು. ಹಾಗೊಂದು ವೇಳೆ ಪ್ರಕರಣ ವರ್ಗಾವಣೆಯಾದರೆ, ನೀತಿ-ನಿರೂಪಣಾ ಸಮಿತಿಯು ರವಿಕುಮಾರ್‌ ಅವರ ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಬಾವಿಗಿಳಿದು ಪ್ರತಿಭಟನೆ: ಬುಧವಾರ ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷ ಸದಸ್ಯರು, ರವಿ ಕುಮಾರ್‌ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸುವಂತೆ ಬಾವಿ ಗಿಳಿದು ಪ್ರತಿಭ ಟಿಸಿದರು. ಸರ್ಕಾರದ ಮೊಂಡು ತನದ ಧೋರಣೆ ಇದೇ ರೀತಿ ಮುಂದುವರಿದರೆ, ಬಜೆಟ್‌ ಅಧಿವೇಶನ ಮುಗಿಯುವವರೆಗೂ ಪ್ರತಿಪಕ್ಷ ಗಳು ಸಭೆಯಲ್ಲಿ ಪಾಲ್ಗೊಳ್ಳುವುದಿಲ್ಲ. ಸಾಕಷ್ಟು ಗಂಭೀರ ವಿಷಯಗಳ ಬಗ್ಗೆ ಚರ್ಚೆ ನಡೆಯಬೇಕಿದ್ದು, ಕೂಡಲೇ ಗೊಂದಲ ಇತ್ಯರ್ಥಪಡಿಸಬೇಕು ಎಂದು ಒತ್ತಾಯಿಸಿದರು.

ಆಗ ಸಭಾಪತಿಗಳ ಸೂಚನೆಯಂತೆ ರವಿಕುಮಾರ್‌ ಅವರು, ವೀರ ಸಾವರ್ಕರ್‌ ಅವರ ಹೋರಾಟದ ಹಿನ್ನೆಲೆಯೊಂದಿಗೆ ಸ್ಪಷ್ಟೀಕರಣ ನೀಡಲು ಮುಂದಾದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸದಸ್ಯರು, ಆಡಳಿತ ಪಕ್ಷದ ವಿರುದ್ಧ “ಧಿಕ್ಕಾರ’ ಕೂಗಿದರು. ಇದಕ್ಕೆ ಪ್ರತಿಯಾಗಿ ಆಡಳಿತ ಪಕ್ಷದ ಸದಸ್ಯರು, ಅಭಿವ್ಯಕ್ತಿ ಸ್ವಾತಂತ್ರ್ಯ ವಿರೋಧಿಗಳಿಗೆ “ಧಿಕ್ಕಾರ’ ಎಂದು ಘೋಷಣೆ ಹಾಕಿದರು. ಇದರಿಂದ ಸದನ ಗೊಂದಲದ ಗೂಡಾಯಿತು.

ಆಗ, ಪ್ರತಿಪಕ್ಷ ನಾಯಕರಾದ ಎಸ್‌.ಆರ್‌. ಪಾಟೀಲ್‌ ಮತ್ತು ಬಸವರಾಜ ಹೊರಟ್ಟಿ, 242ಬಿ ಅಡಿ ನೀತಿ-ನಿರೂಪಣಾ ಸಮಿತಿಗೆ ಪ್ರಕರಣವನ್ನು ವರ್ಗಾಯಿಸುವಂತೆ ಕೋರಿದರು. ಉದ್ದೇಶಿತ ಈ ಪ್ರಕರಣವನ್ನು ನೀತಿ- ನಿರೂಪಣಾ ಸಮಿತಿಗೆ ವರ್ಗಾಯಿಸಲು ಬರುವು ದಿಲ್ಲ ಎಂದು ಸಭಾನಾಯಕ ಕೋಟಾ ಶ್ರೀನಿವಾಸ ಪೂಜಾರಿ ಮತ್ತು ಸದಸ್ಯ ಅರುಣ ಶಹಾಪುರ ಸಮಜಾಯಿಷಿ ನೀಡಲು ಮುಂದಾದರು. ಆಗ, “ಪ್ರಕರಣ ವರ್ಗಾವಣೆಗೆ ಸೂಕ್ತವಾಗಿದೆಯೇ ಇಲ್ಲವೇ ಎಂಬುದನ್ನು ನಾನು ಪರಿಶೀಲಿಸಿ ತೀರ್ಮಾನ ಕೈಗೊಳ್ಳುತ್ತೇನೆ’ ಎಂದು ಸಭಾಪತಿ ಸ್ಪಷ್ಟಪಡಿಸಿದರು.

ಈ ಗೊಂದಲದ ನಡುವೆ ರವಿಕುಮಾರ್‌ ಅವರು, “ದೊರೆಸ್ವಾಮಿ ಅವರಿಗೆ ನಾಚಿಕೆ ಆಗ ಬೇಕು’ ಎಂದು ಪುನರುತ್ಛರಿಸಿದರು. ಇದು ಕಲಾಪದಲ್ಲಿ ಮತ್ತೆ ಕೋಲಾಹಲಕ್ಕೆ ಕಾರಣವಾ ಯಿತು. ಪ್ರತಿಪಕ್ಷದ ಸದಸ್ಯರಾದ ಎಚ್‌.ಎಂ.ರೇವಣ್ಣ, ಬೋಜೇಗೌಡ, ಶ್ರೀಕಂಠೇಗೌಡ, ಟಿ.ಎ.ಶರವಣ ಮತ್ತಿತರರು ರವಿಕುಮಾರ್‌ ಅವರನ್ನು ತರಾಟೆಗೆ ತೆಗೆದುಕೊಂಡರು.

ಸಮಿತಿ ಏನು ಹೇಳುತ್ತೆ?: ಪರಿಷತ್ತಿನ ಸದಸ್ಯರು ಸದನದ ಒಳಗೆ ಮತ್ತು ಹೊರಗೆ ಹೇಗೆ ನಡೆದುಕೊಳ್ಳ ಬೇಕು ಎಂಬುದನ್ನು ನಿಯಮ “242ಬಿ’ ದಡಿ ಸ್ಪಷ್ಟಪಡಿಸಲಾಗಿದೆ. ಸದಸ್ಯರು ಸದನದ ನಿಯಮಕ್ಕೆ ವ್ಯತಿರಿಕ್ತವಾಗಿ ನಡೆದುಕೊಂಡಾಗ, ಆ ಪ್ರಕರಣವನ್ನು ನೀತಿ-ನಿರೂಪಣಾ ಸಮಿತಿಗೆ ವಹಿಸಬಹುದು. ಈ ಸಮಿತಿಗೆ ಉಪ ಸಭಾಪತಿ ಅಧ್ಯಕ್ಷರಾಗಿರುತ್ತಾರೆ ಹಾಗೂ ವಿವಿಧ ಪಕ್ಷಗಳ ಸದಸ್ಯರು ಇರುತ್ತಾರೆ. ವಿಚಾರಣೆ ನಡೆಸಿ, ಸಮಿತಿಯು ಸದನಕ್ಕೆ ಶಿಫಾರಸು ಮಾಡುತ್ತದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.