![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಬೈಕಿನೊಂದಿಗೆ ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದ ವ್ಯಕ್ತಿ ಸಾವು
Team Udayavani, May 24, 2024, 11:12 PM IST
![ಬೈಕಿನೊಂದಿಗೆ ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದ ವ್ಯಕ್ತಿ ಸಾವು](https://www.udayavani.com/wp-content/uploads/2024/05/ban-8-620x413.jpg)
ಕಡಬ/ಕಾಣಿಯೂರು: ಕಾಣಿಯೂರು ಸಮೀಪದ ದೋಳ್ಪಾಡಿ ಗ್ರಾಮದ ಕೊಜಂಬೇಡಿ ಎಂಬಲ್ಲಿ ಬೈಕ್ ಸಮೇತ ಸೇತುವೆಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ತಡರಾತ್ರಿ ಸಾವನ್ನಪ್ಪಿದ್ದಾರೆ.
ದೋಳ್ಪಾಡಿ ಗ್ರಾಮದ ಅಜ್ಜಿನಡ್ಕ ನಿವಾಸಿ ಬಾಬು ಅವರ ಪುತ್ರ ವಸಂತ ಮೃತಪಟ್ಟವರು. ವಸಂತ ಅವರು ಮೇ 13 ರಂದು ಬೆಳಗ್ಗೆ ಕೂಲಿ ಕೆಲಸಕ್ಕೆಂದು ತನ್ನ ಮೋಟಾರ್ ಬೈಕ್ನಲ್ಲಿ ಎಡಮಂಗಲಕ್ಕೆ ಹೋಗಿ ವಾಪಸು ಮನೆಗೆ ಅದೇ ಬೈಕಿನಲ್ಲಿ ಬರುತ್ತಿರುವಾಗ ಕೊಜಂಬೇಡಿ ಎಂಬಲ್ಲಿರುವ ಸೇತುವೆ ಬಳಿ ನಿಯಂತ್ರಣ ತಪ್ಪಿ ಬೈಕ್ ಸಮೇತ ಸೇತುವೆಯಿಂದ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದರು.
ಅವರನ್ನು ತತ್ಕ್ಷಣ ಕಾಣಿಯೂರು ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮಂಗಳವಾರ ಮೃತಪಟ್ಟಿದ್ದಾರೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.