Sullia: ಸುಣ್ಣವೆಂದು ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವ್ಯಕ್ತಿ ಸಾವು
Team Udayavani, Jan 4, 2024, 11:45 PM IST
ಸುಳ್ಯ: ಸುಣ್ಣವೆಂದು ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವ್ಯಕ್ತಿಯೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಜ. 2ರಂದು ಸಂಭವಿಸಿದೆ.
ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಮೊರಂಗಲ್ಲು ಲೀಲಾವತಿ ಅವರ ಪುತ್ರ ಅಶೋಕ (28) ಮೃತಪಟ್ಟವರು. ಅವರಿಗೆ 8 ವರ್ಷಗಳ ಹಿಂದೆ ವಿವಾಹವಾಗಿದ್ದು ಪತ್ನಿ, ಮಕ್ಕಳೊಂದಿಗೆ ಮೊರಂಗಲ್ಲಿನಲ್ಲಿ ವಾಸವಾಗಿದ್ದರು. ಡಿ. 28ರಂದು ಮದ್ಯ ಸೇವಿಸಿ ಅಮಲಿನಲ್ಲಿ ಇಲಿ ಪಾಷಾಣ ಟ್ಯೂಬ್ನಲ್ಲಿದ್ದ ಜೆಲ್ ಅನ್ನು ಸುಣ್ಣವೆಂದು ಭಾವಿಸಿ ಎಲೆ ಅಡಿಕೆಗೆ ಹಾಕಿ ತಿಂದಿದ್ದರು. ಅಸ್ವಸ್ಥಗೊಂಡ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತಂದು ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ