ರೋಹಿಣಿಗೆ ನನ್ನ ಅವಧಿಯಲ್ಲಿ ಕೆಲಸ ಮಾಡುವಾಗ ತಪ್ಪುಗಳನ್ನ ತಿದ್ದಿ ತಿಳಿ ಹೇಳಿದ್ದೆ : ಎ ಮಂಜು
Team Udayavani, Jun 5, 2021, 2:02 PM IST
ಬೆಂಗಳೂರು : ಅಧಿಕಾರಿಗಳನ್ನ ಜಿಲ್ಲಾ ಉಸ್ತುವಾರಿ ಸಚಿವರು, ಸರ್ಕಾರ ಕಂಟ್ರೋಲ್ ಗೆ ತೆಗೆದುಕೊಳ್ಳಬಹುದು. ರೋಹಿಣಿ ಸಿಂಧೂರಿ ನಾನು ಸಚಿವನಾಗಿದ್ದ ಸಂದರ್ಭದಲ್ಲಿ ಕೆಲಸ ಮಾಡಿದ್ದಾರೆ. ಮಹಾಮಸ್ತಕಾಭಿಷೇಕ ಉತ್ಸವದಲ್ಲಿ ಸಂದರ್ಭದಲ್ಲಿ ನಾನು ನೋಡಿದ್ದೇನೆ. ನಿರ್ವಹಣೆ ಮಾಡುವ ಸಂದರ್ಭದಲ್ಲಿ ಜನಪ್ರತಿನಿಧಿಗಳನ್ನ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕು ಎಂದು ಶಿಲ್ಪನಾಗ್-ರೋಹಿಣಿ ಸಿಂಧೂರಿ ಜಟಾಪಟಿ ವಿಚಾರವಾಗಿ ಮಾಜಿ ಸಚಿವ ಎ. ಮಂಜು ಪ್ರತಿಕ್ರಿಯೆ ನೀಡಿದ್ದಾರೆ.
ಡಿಸಿ ಅಂದ್ರೆ ಜಿಲ್ಲೆಯ ಮೊದಲ ಸೇವಕರು. ಎಲ್ಲ ಅಧಿಕಾರಿಗಳು ಇಷ್ಟ ಬಂದಹಾಗೆ ಕೆಲಸ ಮಾಡಲು ಅವಕಾಶವಿಲ್ಲ. ನನ್ನ ಅವಧಿಯಲ್ಲಿ ಕೆಲಸ ಮಾಡುವಾಗ ಕೆಲವು ತಪ್ಪುಗಳನ್ನ ತಿದ್ದಿ ತಿಳಿ ಹೇಳಿದ್ದೆ. ಜನರು ಬರುವಾಗ ಕಾಲ ಮೇಲೆ ಕಾಲು ಹಾಕಿ ಕುಳಿತುಕೊಳ್ಳುವುದು ಬೇಡ ಗೌರವ ಕೊಡಬೇಕು ಎಂದು ಹೇಳಿದ್ದೆ ಎಂದರು.
ಈ ಬಗ್ಗೆ ಚೀಫ್ ಸೆಕರೇಟರಿ, ಸಿಎಂ ಗಮನಕ್ಕೂ ತಂದಿದ್ದೆ. ಹಾಸನಕ್ಕೆ ಸಿಎಂ ಸಿದ್ದರಾಮಯ್ಯ ಬಂದಿದ್ದಾಗ ಅವರನ್ನ ಆಹ್ವಾನ ಮಾಡಲು ಪ್ರೋಟೋಕಾಲ್ ಪ್ರಕಾರ ಡಿಸಿ ಅವರು ಬರಬೇಕಿತ್ತು, ಆದ್ರೆ ರೋಹಿಣಿ ಸಿಂಧೂರಿ ಬರಲಿಲ್ಲ, ಆಗ ಸಿದ್ದರಾಮಯ್ಯಗೆ ವರ್ಗಾವಣೆ ಮಾಡುವಂತೆ ಹೇಳಿದ್ದೆ. ನಂತರದ ಚುನಾವಣೆಯಲ್ಲಿ ನಾನು ಸೋತೆ, ಅವರ ಪರ ಯಾರಿದ್ದಾರೋ ಅವ್ರೇ ಅವರನ್ನ ವರ್ಗಾವಣೆ ಮಾಡುವಂತೆ ಒತ್ತಾಯಿಸಲು ಮುಂದಾದರು ಎಂದರು.
ಚುನಾಯಿತ ಪ್ರತಿನಿಧಿಗಳೊಂದಿಗೆ ಅಗೌರವದೊಂದಿಗೆ ನಡೆದುಕೊಳ್ಳುವುದು ಸರಿಯಿಲ್ಲ. ಎಲ್ಲವೂ ನನಗೆ ಗೊತ್ತಿದೆ,ನಾನ್ ಹೇಳಿದ್ದೆ ಆಗಬೇಕು ಅನ್ನೋದು ಸರಿಯಲ್ಲ. ಕೊರೊನ ಸಂಕಷ್ಟದಲ್ಲಿ ಸ್ವಿಮ್ಮಿಂಗ್ ಪೂಲ್ ಅವಶ್ಯಕತೆ ಇತ್ತ..? ರಾಜ್ಯದಲ್ಲಿ 20 ಏರಿಟೇಜ್ ಸಿಟಿಗಳಿವೆ, ಈ ಪೈಕಿ ಮೈಸೂರು ಒಂದು. ಈ ವಿಚಾರ ಚರ್ಚೆಗೆ ಬಂದಮೇಲೆ ಸರ್ಕಾರ ಕೇಳಬೇಕಿತ್ತು, ಮೈಸೂರಿನಲ್ಲಿ ಮಾಜಿ ಸಚಿವ ಎ. ಮಂಜು ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ