ಶತಮಾನ ಕಳೆದರೂ ಮಾದರಿಯಾಗದ ಶಾಸಕರ ಮಾದರಿ ಶಾಲೆ

ಸರಕಾರಿ ಹೈಸ್ಕೂಲ್‌ ತೆರೆಯುವುದಕ್ಕೆ ಶಿಕ್ಷಣ ಇಲಾಖೆ ಹಿಂದೇಟು ಹಾಕುತ್ತಿರುವುದೇಕೆ

Team Udayavani, Oct 17, 2022, 3:36 PM IST

ಶತಮಾನ ಕಳೆದರೂ ಮಾದರಿಯಾಗದ ಶಾಸಕರ ಮಾದರಿ ಶಾಲೆ

ತೆಲಸಂಗ: ಈಗಿನ ಆಂಗ್ಲ ಮಾಧ್ಯಮ ಶಾಲೆಗಳ ಆಕರ್ಷಣೆಯ ನಡುವೆಯೂ ಬ್ರಿಟಿಷರ ಕಾಲದಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಗ್ರಾಮದ ನಮ್ಮೂರ ಸರಕಾರಿ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ 151 ವರ್ಷ ತುಂಬಿದರೂ ಶತಮಾನೋತ್ಸವದ ಸಂಭ್ರಮ ಕಾಣದೇ ಅನಾಥವಾಗಿದೆ.

ಸರಕಾರ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಶತಮಾನ ಕಂಡ ರಾಜ್ಯದ 143 ಸರಕಾರಿ ಶಾಲೆಗಳಿಗೆ 20 ಕೋಟಿ ಅನುದಾನ ಬಿಡುಗಡೆ ಮಾಡಿತ್ತು. ಬೆಳಗಾವಿ ಜಿಲ್ಲೆಯ 5 ಶಾಲೆಗಳನ್ನು ಅನುದಾನಕ್ಕಾಗಿ ಆಯ್ಕೆ ಮಾಡಲಾಗಿದೆ. ಆದರೆ ಚಿಕ್ಕೋಡಿ ಶೆ„ಕ್ಷಣಿಕ ಜಿಲ್ಲೆಯಲ್ಲಿನ ತೆಲಸಂಗದಲ್ಲಿನ 151 ವರ್ಷದ ಹಳೆಯ ಶಾಲೆ ಅಭಿವೃದ್ಧಿಗಾಗಿ ಬಾಯೆ¤ರೆದು ನಿಂತಿದ್ದರೂ ಪಟ್ಟಿಯಿಂದ ಹೆಸರು ಕೈ ಬಿಟ್ಟಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.1871ರಲ್ಲಿ ಪ್ರಾರಂಭವಾದ ಜಿಲ್ಲೆಯಲ್ಲಿಯೇ
ಅತ್ಯಂತ ಹಿರಿಯದಾದ ಸರಕಾರಿ ಶಾಲೆ ಇದು. ಇಂದು ದಯನೀಯ ಸ್ಥಿತಿ ತಲುಪಿದ್ದು, ಇಲ್ಲಗಳ ಸರಮಾಲೆಗೆ ಈ ಕನ್ನಡ ಶಾಲೆ ನಲುಗಿ ಹೋಗಿದೆ. ಹೆಸರಿಗೆ ಮಾತ್ರ ಶಾಸಕರ ಮಾದರಿ ಶಾಲೆ ಇದಾಗಿದೆ ಎಂದು ಜನ ದೂರುತ್ತಿದ್ದಾರೆ.

2 ಎಕರೆ ಜಾಗದಲ್ಲಿ ಬ್ರಿಟಿಷ ಕಾಲದ ಕೆಲ ಕಟ್ಟಡಗಳನ್ನು ಬೀಳಿಸಿ ಕಟ್ಟಲಾಗಿದ್ದು, ಕೆಲ ಕೊಠಡಿಗಳ ನವೀಕರಣದ ಅವಶ್ಯಕತೆ ಇದೆ. 20 ಸಾವಿರ ಜನಸಂಖ್ಯೆಯ ಗ್ರಾಮದಲ್ಲಿ 151 ವರ್ಷ ಹಳೆಯ ಶಾಲೆ ಇದ್ದರೂ ಹೆ„ಟೆಕ್‌ ಸ್ಪರ್ಷ ಇಲ್ಲ, ಸಾವಿರಾರು ಮಕ್ಕಳು ಓದುತ್ತಿದ್ದ ಶಾಲೆಯಲ್ಲೀಗ ಕೇವಲ 317 ಮಕ್ಕಳು ಓದುತ್ತಿದ್ದು, 11 ಜನ ಶಿಕ್ಷಕರಿದ್ದಾರೆ. ಸೌಲಭ್ಯಗಳಿಲ್ಲದೇ ಮಕ್ಕಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿದೆ.

ಪ್ರೌಢಶಾಲೆಗೆ ಹಿಂದೇಟು ಏಕೆ?; ಸುಮಾರು 20 ಸಾವಿರ ಜನಸಂಖ್ಯೆ ಹೊಂದಿದ ತೆಲಸಂಗ ಹೋಬಳಿಯೂ ಹೌದು. ಆದರೆ ಇಲ್ಲಿ ಇನ್ನುವರೆಗೂ ಸರಕಾರಿ ಪ್ರೌಢಶಾಲೆ ಇಲ್ಲದಿರುವುದು ವಿಪರ್ಯಾಸದ ಸಂಗತಿ. ಒಣ ಬೇಸಾಯದ ಬಡ ಕೂಲಿ ಕಾರ್ಮಿಕರನ್ನೇ ಹೆಚ್ಚು ಹೊಂದಿದ ಈ ಗ್ರಾಮದಲ್ಲಿ 10ನೇ ತರಗತಿ ವರೆಗೆ ವರ್ಗಗಳ ವಿಸ್ತರಣೆ ಹಾಗೂ ಪಿಯು ಕಾಲೇಜು ತೆರಯುವ ಅವಶ್ಯಕತೆ ಇದೆ. ಇಷ್ಟೊಂದು ದೊಡ್ಡ ಗ್ರಾಮದಲ್ಲಿ ಸರಕಾರಿ ಹೈಸ್ಕೂಲ್‌ ತೆರೆಯುವುದಕ್ಕೆ ಶಿಕ್ಷಣ ಇಲಾಖೆ ಹಿಂದೇಟು ಹಾಕುತ್ತಿರುವುದೇಕೆ ಎನ್ನುವ ಅನುಮಾನ ಗ್ರಾಮಸ್ಥರನ್ನು ಕಾಡುತ್ತಿದೆ.

ಶಾಸಕರ ಮಾದರಿ ಶಾಲೆಗೆ ಬೇಕಿದೆ ಅನುದಾನ: ವಿದ್ಯಾರ್ಥಿಗಳು ಕೂಡ್ರಲು ಕೊಠಡಿಗಳಲ್ಲಿ ಬೆಂಚ್‌ ಗಳಿಲ್ಲ. ನೆಲದ ಮೇಲೆ ಕುಳಿತು ಪಾಠ ಕೇಳಬೇಕು. ಸ್ಮಾರ್ಟ್‌ ಕ್ಲಾಸ್‌ ಇಲ್ಲ. ಗ್ರಂಥಾಲಯ ಕೊಠಡಿ, ಕ್ರೀಡಾ ಕೊಠಡಿ, ಸಭಾ ಭವನ, ಸಿಸಿ ಕ್ಯಾಮೆರಾ, ಗಣಕಯಂತ್ರದ ಕೊಠಡಿ, ಶುದ್ಧ ಕುಡಿಯುವ ನೀರು ಘಟಕ, ಡೈನಿಂಗ್‌ ಹಾಲ್‌ ಇಲ್ಲ. ಇದು ಶಾಸಕರ ಮಾದರಿ ಶಾಲೆಯಾಗಿರುವುದರಿಂದ ಅವರೇ ಆಸಕ್ತಿ ವಹಿಸಿ ಶಾಲೆ ಅಭಿವೃದ್ಧಿಗೆ ಮುಂದಾಗಬೇಕಿದೆ. ಶಿಕ್ಷಣ ಇಲಾಖೆಯು ಮುತುವರ್ಜಿ ವಹಿಸಿ ಶತಮಾನೋತ್ಸವದ ಹೆಸರಲ್ಲಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌ ನೀಡಬೇಕಿದೆ

ಎಂ.ಎಲ್‌.ಎ.,ಎಂಪಿ, ಎಂಎಲ್‌ಸಿ ಗಳು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ವಿಶೇಷ ಅನುದಾನ ನೀಡುತ್ತಾರೆ. ಬಡ ಮಕ್ಕಳು ಓದುವ ಸರಕಾರಿ ಶಾಲೆಗೇಕೆ ನೀಡುತ್ತಿಲ್ಲ?ಗ್ರಾಮ 20 ಸಾವಿರ ಜನಸಂಖ್ಯೆ ಹೊಂದಿದರೂ ಪ್ರೌಢಶಾಲೆಯನ್ನಾಗಿ ಮೇಲ್ದರ್ಜೆಗೇರಿಸಿಲ್ಲ. ಅಧಿ ಕಾರಿ ಹಾಗೂ ಜನಪ್ರತಿನಿ ಧಿಗಳ ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲಿನ ಪ್ರೀತಿಗೆ ಶತಮಾನ ಕಂಡ ಶಾಲೆ ಬಡವಾಗಿದೆ. ಬಡ ಮಕ್ಕಳು ಪರದೇಶಿಗಳಂತಾಗಿದ್ದಾರೆ. ಬಡವರ ಮನವಿಗೆ ಯಾರೊಬ್ಬರೂ ಕಿವಿಗೊಡುತ್ತಿಲ್ಲ.
ಅಪ್ಪು ಜಮಾದರ, ತೆಲಸಂಗ ಬ್ಲಾಕ್‌ ಕಾಂಗ್ರೆಸ್‌ ಅಲ್ಪಸಂಖ್ಯಾತರ ಘಟಕ ಅಧ್ಯಕ್ಷ

ಇಲ್ಲಿಯ ಹಳೆಯ ವಿದ್ಯಾರ್ಥಿಗಳೆಲ್ಲ ಸೇರಿ ಶತಮಾನೋತ್ಸವ ಆಚರಿಸಲು ಸಭೆ ಸೇರಿ ಸಿದ್ದತೆಯನ್ನೂ ನಡೆಸಿದ್ದರು. ಆದರೆ ಅಭಿವೃದ್ಧಿ ಹೊಂದಿರದ ಶಾಲೆಯಲ್ಲಿ ಬೃಹತ್‌ ಕಾರ್ಯಕ್ರಮ ಹಮ್ಮಿಕೊಂಡರೆ ಅಪಮಾನವಾಗುತ್ತದೆ. ಹೀಗಾಗಿ ಮೊದಲು ಅಭಿವೃದ್ಧಿ ಪಡಿಸೋಣ. ನಂತರ ಶತಮಾನೋತ್ಸವ ಆಚರಿಸೋಣ ಎಂದು ತೀರ್ಮಾನಿಸಲಾಯಿತು. ಈಗ 151 ವರ್ಷ ಕಳೆದರೂ ಮತ್ತೆ ಯಾರೊಬ್ಬರೂ ಈ ಬಗ್ಗೆ ತಲೆ ಕೆಡಿಸಿಕೊಳ್ಳಲಿಲ್ಲ.

ಬಿ.ಎಚ್‌.ಶೆಲ್ಲೆಪ್ಪಗೋಳ, ಮುಖ್ಯಶಿಕ್ಷಕ ತೆಲಸಂಗ.

*ಜೆ.ಎಮ್‌.ಖೊಬ್ರಿ

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.