ದೇವಿಕ್ಯಾಂಪ್‌ನಲ್ಲಿ ಅಂದ-ಚೆಂದದ ಸಿಆರ್ಪಿ ಕ್ಲಸ್ಟರ್


Team Udayavani, Apr 6, 2022, 9:58 AM IST

1CRP

ಸಿಂಧನೂರು: ಸಾರ್ವಜನಿಕ ವಂತಿಗೆ, ದೇಣಿಗೆ ಸಂಗ್ರಹಿಸಿ ಅನೇಕ ಕಾರ್ಯ ಮಾಡುವುದನ್ನು ನೋಡಿದ್ದೇವೆ. ಆದರೆ ಇಲ್ಲಿ ಶಿಕ್ಷಣ ಇಲಾಖೆಯ ನೌಕರರೇ ಕೈಲಾದಷ್ಟು ನೆರವಿನ ಹಸ್ತ ಚಾಚುವ ಮೂಲಕ ಮಾದರಿ ಸಮೂಹ ಸಂಪನ್ಮೂಲ ಕೇಂದ್ರ (ಸಿಆರ್‌ಪಿ ಕ್ಲಸ್ಟರ್‌) ಸೃಜಿಸಿಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ.

ತಾಲೂಕಿನ ದೇವಿಕ್ಯಾಂಪ್‌ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರು-ಸಮೂಹ ಸಂಪನ್ಮೂಲ ವ್ಯಕ್ತಿಯ ಪರಿಶ್ರಮದಿಂದಲೇ ಶಿಕ್ಷಕರನ್ನು ಹೊಸ ಯೋಜನೆಗಳ ಅನುಷ್ಠಾನಕ್ಕೆ ತಕ್ಕಂತೆ ತರಬೇತಿಗೊಳಿಸಲು ಕೇಂದ್ರ ಸಜ್ಜುಗೊಳಿಸಲಾಗಿದೆ. ಸಾರ್ವಜನಿಕ ಶಿಕ್ಷಣ ಅಭಿಯಾನ (ಎಸ್‌ ಎಸ್‌ಎ) ಯೋಜನೆ ಚಾಲ್ತಿಯಲ್ಲಿದ್ದಾಗ ಸಕ್ರಿಯವಾಗಿದ್ದಾಗ ಚಟುವಟಿಕೆ ಕೇಂದ್ರವಾಗಿದ್ದ ಸಮೂಹ ಸಂಪನ್ಮೂಲ ಕೇಂದ್ರಗಳು ಅನುದಾನ ಕಡಿತವಾದ ಬಳಿಕ ಸಪ್ಪೆಯಾಗಿವೆ. ಅವುಗಳಿಗೆ ಚೈತನ್ಯ ತುಂಬುವ ನಿಟ್ಟಿನಲ್ಲಿ ಶಿಕ್ಷಕರ ಸ್ವಯಂ ಪ್ರೇರಿತ ಪ್ರಯತ್ನಗಳು ಇಲ್ಲಿ ಯಶಸ್ವಿ ಕಂಡಿವೆ.

ಏನಿದು ಮಾದರಿ ಕೇಂದ್ರ?

ಪ್ರತಿ ಕ್ಲಸ್ಟರ್‌ ಗಳು 10-12 ಗ್ರಾಮದ ಸರ್ಕಾರಿ, ಶಾಲೆಗಳನ್ನು ಒಳಗೊಂಡಿರುತ್ತವೆ. ಅಲ್ಲಿ ಇಡೀ ಕ್ಲಸ್ಟರ್‌ನ ಶಿಕ್ಷಕರ ಸಂಖ್ಯೆ, ಹಾಜರಾತಿ, ಮಕ್ಕಳ ಸಂಖ್ಯೆಯ ವಿವರ ಲಭ್ಯವಾದಾಗ ಆಯಾ ವ್ಯಾಪ್ತಿಯಲ್ಲಿ ಸರ್ಕಾರಿ ಶಿಕ್ಷಣ ಸಬಲೀಕರಣಗೊಳಿಸುವುದಕ್ಕೆ ಸಮೂಹ ಸಂಪನ್ಮೂಲ ವ್ಯಕ್ತಿಗೆ ಸುಲಭವಾಗುತ್ತದೆ. ಆ ನಿಟ್ಟಿನಲ್ಲಿ ಗಿರೀಶ ವಿ.ಬಿ.ಪ್ರಯತ್ನದ ಫಲವಾಗಿ ಶಿಕ್ಷಕರು ಸಾತ್‌ ಕೊಟ್ಟ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯಲ್ಲಿ ಲಭ್ಯ ಕೊಠಡಿಯನ್ನು ಶಿಕ್ಷಕರನ್ನು ಹೊಸ ಸರ್ಕಾರಿ ಯೋಜನೆಗಳ ಅನುಷ್ಠಾನಕ್ಕೆ ತಕ್ಕಂತೆ ಸಜ್ಜುಗೊಳಿಸುವ ಕೇಂದ್ರವನ್ನು ಇಲ್ಲಿ ತೆರೆಯಲಾಗಿದೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು, ನಾಡಿನ ಮಹನೀಯರು ಒಳಗೊಂಡಂತೆ ಎಲ್ಲರ ಭಾವಚಿತ್ರಗಳನ್ನು ಇಲ್ಲಿ ಅಳವಡಿಸಲಾಗಿದೆ. ಕ್ಲಸ್ಟರ್‌ ಕೇಂದ್ರವೇ 12 ಶಾಲೆಗಳ ಸಮಗ್ರ ಚಿತ್ರಣವನ್ನು ಸಾರಿ ಹೇಳುವಂತೆ ರೂಪಿಸಲಾಗಿದೆ. ಶಿಕ್ಷಕರು, ಮಕ್ಕಳು, ಜಾತಿವಾರು ಸಂಖ್ಯೆ ಸೇರಿದಂತೆ ಎಲ್ಲ ವಿವರ ಇಲ್ಲಿ ಅಂಗೈನಲ್ಲೇ ಎಂಬಂತೆ ಚಿತ್ರೀಕರಿಸಲಾಗಿದೆ.

ಶಿಕ್ಷಕರ ಉದಾರ ನೀತಿ

ಹೊಸ ಕ್ಲಸ್ಟರ್‌ ಕೇಂದ್ರಕ್ಕೆ ಸರಕಾರದಿಂದ ನಯಾ ಪೈಸೆ ಅನುದಾನ ಕೊಡಲಾಗಿಲ್ಲ. ಆದರೆ ಕ್ಲಸ್ಟರ್‌ ವ್ಯಾಪ್ತಿಗೆ ಒಳಪಡುವ ಚಿರತನಾಳ, ದೇವರಗುಡಿ, ಬೊಮ್ಮನಾಳ, ಕುನ್ನಟಗಿ, ಉರ್ದುಶಾಲೆ ಕುನ್ನಟಗಿ, ದುಗಮ್ಮನ ಗುಂಡಾ, ಗೀತಾ ಕ್ಯಾಂಪ್‌, ಕುನ್ನಟಗಿ ಕ್ಯಾಂಪಿನ ಸರ್ಕಾರಿ ಶಾಲೆಗಳು ಹಾಗೂ 3 ಖಾಸಗಿ ಶಾಲೆಯ ಶಿಕ್ಷಕರು ಈ ಕೇಂದ್ರವನ್ನು ರೂಪಿಸಲು ವೈಯಕ್ತಿಕವಾಗಿ ನೆರವು ನೀಡಿದ್ದಾರೆ.

ಶಿಕ್ಷಕರು ಸ್ಪರ್ಧೆಗೆ ಬಿದ್ದವರಂತೆ ಕೈಲಾದಷ್ಟು ನೆರವು ನೀಡಿದ ಪರಿಣಾಮ ಅಂದ-ಚೆಂದ ಕ್ಲಸ್ಟರ್‌ ರೂಪುಗೊಂಡಿದೆ. ಈ ಕೇಂದ್ರವನ್ನು ನೋಡುತ್ತಿದ್ದಂತೆ ಶಿಕ್ಷಣ ಇಲಾಖೆಯ ಸಮಗ್ರ ಯೋಜನೆಗಳು, ಸೌಲಭ್ಯಗಳು, ಅಲ್ಲಿನ ಸ್ಥಿತಿಗತಿಯ ಸಮಗ್ರ ನೋಟ ಕಣ್ಮುಂದೆ ಬರುತ್ತದೆ.

ಅಡುಗೆ ಕೆಲಸಗಾರರಿಗೂ ಪ್ರೋತ್ಸಾಹ

ಅಕ್ಷರ ದಾಸೋಹ ಯೋಜನೆಯಡಿ ಕೆಲಸ ನಿರ್ವಹಿಸುವ ಬಿಸಿಯೂಟ ಕೆಲಸಗಾರರನ್ನು ಕೂಡ ಕ್ಲಸ್ಟರ್‌ ವ್ಯಾಪ್ತಿಯಲ್ಲಿ ತೊಡಗಿಸಿಕೊಂಡು ಅವರ ವಿಶ್ವಾಸ ಗಳಿಸಲಾಗಿದೆ. ಇದಕ್ಕೆ ಪೂರಕವೆಂಬಂತೆ ಕೆಲವು ದಿನಗಳ ಹಿಂದೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಂದರ್ಭ ಅವರಿಗೆ ಸೀರೆಗಳನ್ನು ಕೊಡಿಸಿ, ಸನ್ಮಾನಿಸಿ ಗೌರವಿಸಲಾಗಿದೆ. ಸರ್ಕಾರಿ ಶಾಲೆಗಳನ್ನು ಸದೃಢಗೊಳಿಸಿ, ಅಲ್ಲಿ ವಿಶ್ವಾಸದ ವಾತಾವರಣ ಮೂಡಿಸುವುದಕ್ಕೆ ಶಿಕ್ಷಕರು ಕೂಡ ಕೈ ಜೋಡಿಸಿದ್ದರಿಂದ ಮಾದರಿ ಕೇಂದ್ರ ತಲೆ ಎತ್ತಿದೆ.

ನಮ್ಮ ಕ್ಲಸ್ಟರ್‌ ವ್ಯಾಪ್ತಿಯ ಎಲ್ಲ ಸಿಬ್ಬಂದಿಯೂ ಕೂಡ ಕೈ ಜೋಡಿಸಿದ್ದರಿಂದ ಸಮೂಹ ಸಂಪನ್ಮೂಲ ಕೇಂದ್ರ ಸ್ಥಾಪಿಸಿ, ಶೈಕ್ಷಣಿಕ ಚಟುವಟಿಕೆ ಕೈಗೊಳ್ಳಲು ಸಾಧ್ಯವಾಗಿದೆ. ಇದು ನನ್ನ ಯಶಸ್ಸು ಅಲ್ಲ. ಕ್ಲಸ್ಟರ್‌ ವ್ಯಾಪ್ತಿಯ 12 ಶಾಲೆಗಳ ಸರ್ವ ಸಿಬ್ಬಂದಿಯ ಸಹಕಾರವೇ ಕಾರಣ. ಗಿರೀಶ್ವಿ.ಬಿ., ಸಮೂಹ ಸಂಪನ್ಮೂಲ ವ್ಯಕ್ತಿ, ದೇವಿಕ್ಯಾಂಪ್ಕ್ಲಸ್ಟರ್

ಯಮನಪ್ಪ ಪವಾರ

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.