ಆ್ಯಪ್‌ ಗಳ ಹಾವಳಿ ತಡೆಗೆ ಶಾಶ್ವತ ಪರಿಹಾರ ಅಗತ್ಯ


Team Udayavani, Feb 6, 2023, 6:00 AM IST

ಆ್ಯಪ್‌ ಗಳ ಹಾವಳಿ ತಡೆಗೆ ಶಾಶ್ವತ ಪರಿಹಾರ ಅಗತ್ಯ

ಚೀನ ಸಹಿತ ವಿದೇಶಗಳ 200ಕ್ಕೂ ಅಧಿಕ ಸಾಲ ನೀಡಿಕೆ ಮತ್ತು ಬೆಟ್ಟಿಂಗ್‌ ಆ್ಯಪ್‌ ಗಳನ್ನು ನಿಷೇಧಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದ್ದು ಈ ಮೂಲಕ ದೇಶದಲ್ಲಿ ಅಮಾಯಕರ ರಕ್ಷಣೆಗೆ ಅಗತ್ಯ ಕ್ರಮ ಕೈಗೊಂಡಿದೆ. ವಿದೇಶಿ ಮೂಲದ ಈ ಆ್ಯಪ್‌ ಗಳಿಂದ ಜನರು ವಂಚನೆಗೊಳಗಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ಪರಿಶೀಲನೆಯ ಬಳಿಕ 138 ಬೆಟ್ಟಿಂಗ್‌ ಮತ್ತು 94 ಸಾಲ ನೀಡಿಕೆ ಆ್ಯಪ್‌ ಗಳನ್ನು ನಿಷೇಧಿಸುವಂತೆ ಕೇಂದ್ರ ಗೃಹ ಸಚಿವಾಲಯ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಗೆ ನಿರ್ದೇಶ ನೀಡಿದೆ. ನಿಷೇಧಿತ ಆ್ಯಪ್‌ ಗಳನ್ನು ದೇಶದಲ್ಲಿ ಬ್ಲಾಕ್‌ ಮಾಡುವ ಪ್ರಕ್ರಿಯೆಯನ್ನು ಇಲಾಖೆ ಈಗಾಗಲೇ ಕೈಗೆತ್ತಿಕೊಂಡಿದೆ.

ಚೀನ ಮೂಲದ ವ್ಯಕ್ತಿಗಳಿಂದ ಹೆಚ್ಚಿನ ಆ್ಯಪ್‌ ಗಳನ್ನು ಅಭಿವೃದ್ಧಿಪಡಿಸಲಾಗಿದ್ದು ಭಾರತದಲ್ಲಿ ಈ ಆ್ಯಪ್‌ ಗಳ ಕಾರ್ಯಾಚರ ಣೆಗೆ ಅನುಕೂಲವಾಗುವಂತೆ ಭಾರತೀಯ ಮೂಲದವರನ್ನು ಪ್ರಮುಖ ಹುದ್ದೆಗಳಿಗೆ ನೇಮಿಸಿಕೊಳ್ಳಲಾಗುತ್ತಿರುವುದು ಗೃಹ ಇಲಾಖೆಯ ಪರಿಶೀಲನೆಯ ವೇಳೆ ದೃಢಪಟ್ಟಿದೆ. ಸಾಲ ನೀಡಿಕೆ ಆ್ಯಪ್‌ ಗಳ ವಂಚನಾ ಜಾಲಕ್ಕೆ ಸಿಲುಕಿ ಸಾಲಗಾರರು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳು ದೇಶದೆಲ್ಲೆಡೆಯಿಂದ ವರದಿಯಾಗುತ್ತಲೇ ಇವೆ. ಇದೇ ಮಾದರಿಯಲ್ಲಿ ಜೂಜು ಮತ್ತು ಬೆಟ್ಟಿಂಗ್‌ ಆ್ಯಪ್‌ ಗಳೂ ಕಾರ್ಯನಿರ್ವಹಿಸುತ್ತಿದ್ದು ಇವುಗಳ ಗೀಳಿಗೆ ತುತ್ತಾದ ಜನರು ಇದರಿಂದ ಹೊರಬರಲಾಗದೆ ಸಾಲಗಾರರಾಗಿಯೋ, ಮರ್ಯಾದೆಗೆ ಅಂಜಿಯೋ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ದೇಶದ ವಿವಿಧೆಡೆಗಳಲ್ಲಿ ನಡೆದಿವೆ.

ವಿವಿಧ ರಾಜ್ಯ ಸರಕಾರಗಳು ಮತ್ತು ಗುಪ್ತಚರ ಸಂಸ್ಥೆಗಳು ಇಂತಹ ಆ್ಯಪ್‌ ಗಳ ವಿರುದ್ಧ ಕಾನೂನು ಕ್ರಮ ಜರಗಿಸುವಂತೆ ಕೇಂದ್ರ ಸರಕಾರವನ್ನು ಆಗ್ರಹಿಸಿದ್ದವು. ಅದರಂತೆ ಕೇಂದ್ರ ಗೃಹ ಖಾತೆ ವಿದೇಶಿ ಮೂಲದ ಕೆಲವೊಂದು ನಿರ್ದಿಷ್ಟ ಆ್ಯಪ್‌ಗ್ಳನ್ನು ತೀವ್ರ ಪರಿಶೀಲನೆಗೊಳಪಡಿಸಿದಾಗ ಇವು ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆಗೆ ಧಕ್ಕೆಯುಂಟು ಮಾಡುತ್ತಿರುವುದು ಸಾಬೀತಾಗಿತ್ತು. ನಿಷೇಧಿತ ಆ್ಯಪ್‌ಗ್ಳಲ್ಲಿ ಬಹುತೇಕವು ಥರ್ಡ್‌ ಪಾರ್ಟಿ ಮೂಲಕ ದೇಶದಲ್ಲಿ ಕಾರ್ಯಾಚರಿಸುತ್ತಿರುವುದು ತನಿಖೆಯ ವೇಳೆ ದೃಢಪಟ್ಟಿದೆ. ಇದು ದೇಶದಲ್ಲಿ ಜಾರಿಯಲ್ಲಿರುವ ಐಟಿ ಕಾಯಿದೆಯ ಸೆಕ್ಷನ್‌ 69ರ ಸ್ಪಷ್ಟ ಉಲ್ಲಂಘನೆಯಾದ್ದರಿಂದ ಇವುಗಳನ್ನು ನಿಷೇಧಿಸುವಂತೆ ಐಟಿ ಸಚಿವಾಲಯಕ್ಕೆ ನಿರ್ದೇಶ ನೀಡಿತ್ತು.

ಎರಡು ವರ್ಷಗಳ ಹಿಂದೆಯೂ ಕೇಂದ್ರ ಸರಕಾರ ದೇಶದ ಸಮಗ್ರತೆಗೆ ಅಪಾಯ ಉಂಟುಮಾಡುವಂತಹ ಚೀನದ ಹಲವು ಆ್ಯಪ್‌ ಗಳನ್ನು ನಿಷೇಧಿಸಿತ್ತು. ಈವರೆಗೆ 200ಕ್ಕೂ ಅಧಿಕ ಆ್ಯಪ್‌ ಗಳಿಗೆ ದೇಶದಲ್ಲಿ ನಿರ್ಬಂಧ ಹೇರಲಾಗಿದೆ. ಇದೀಗ ಕೇಂದ್ರ ಸರಕಾರ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ದೇಶದ ಜನರನ್ನು ತನ್ನ ವಂಚನಾಜಾಲದಲ್ಲಿ ಸಿಲುಕುವಂತೆ ಮಾಡಿ ಅವರನ್ನು ಇನ್ನಿಲ್ಲದ ಸಂಕಷ್ಟಕ್ಕೆ ಗುರಿ ಮಾಡುತ್ತಿರುವ ಮತ್ತು ದೇಶದ ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತಿರುವ ಆ್ಯಪ್‌ಗ್ಳಿಗೆ ನಿರ್ಬಂಧ ಹೇರಿದೆ.

ಆದರೆ ಇಂತಹ ಆ್ಯಪ್‌ ಗಳು ಹೊಸಹೊಸ ಅವತಾರದಲ್ಲಿ ಕಾಣಿಸಿಕೊಳ್ಳುವು­ದರಿಂದ ಈ ನಿಷೇಧದ ಪರಿಣಾಮಗಳು ತಾತ್ಕಾಲಿಕವಾಗಬಹುದೇ ವಿನಾ ಶಾಶ್ವತ ಪರಿಹಾರ ಎಂದೆನಿಸಲಾರದು. ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ದೇಶದ ಜನರಿಗೆ ಇಂತಹ ವಂಚನೆ, ನಕಲಿ, ಅಕ್ರಮ ಆ್ಯಪ್‌ ಗಳು ಯಾವ ಮೂಲದಿಂದಲೂ ಲಭ್ಯವಾಗದಂತೆ ಕಟ್ಟುನಿಟ್ಟಿನ ಕಾನೂನು ಒಂದನ್ನು ಜಾರಿಗೆ ತರಲೇಬೇಕಿದೆ. ಮಾಹಿತಿ, ತಂತ್ರಜ್ಞಾನ ಕ್ಷೇತ್ರದಲ್ಲಿ ಕ್ಷಿಪ್ರಗತಿಯಲ್ಲಿ ಭಾರೀ ಬೆಳವಣಿಗೆಗಳಾಗು ತ್ತಿರುವ ಹಿನ್ನೆಲೆಯಲ್ಲಿ ಸರಕಾರ ಈ ಸಮಸ್ಯೆಗೆ ಸೂಕ್ತ ಪರಿಹಾರೋಪಾಯವನ್ನು ಕಂಡುಹುಡುಕುವ ಅಗತ್ಯವಿದೆ. ಪ್ರತಿಯೊಂದೂ ಆ್ಯಪ್‌ ಅನ್ನು ಅದರ ಮೂಲದಲ್ಲಿಯೇ ಜರಡಿ ಹಿಡಿದು ಅದರ ಒಳಿತು-ಕೆಡುಕುಗಳ ಬಗೆಗೆ ಪರಾಮರ್ಶೆ ನಡೆಸಿದ ಬಳಿಕವಷ್ಟೆ ಅದು ದೇಶದಲ್ಲಿ ಜನರಿಗೆ ಲಭ್ಯವಾಗುವಂತೆ ಮತ್ತು ಆ ಬಳಿಕವೂ ಈ ಆ್ಯಪ್‌ ಗಳ ಮೇಲೆ ಕಣ್ಗಾವಲು ಇರಿಸುವ ಕಾರ್ಯ ಸರಕಾರದಿಂದಾಗಬೇಕು.

ಟಾಪ್ ನ್ಯೂಸ್

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.