ತಾಯಿ – ಮಗ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್‌ ಡಿಕ್ಕಿ : ಬಾಲಕ ಮೃತ್ಯು


Team Udayavani, Mar 24, 2023, 6:26 PM IST

mangalore acc

ಮಂಗಳೂರು: ನಗರ‌ ದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮತ್ತೊಂದು ಸಾವು ಸಂಭವಿಸಿದೆ. ಸ್ಕೂಟಿಯಲ್ಲಿ ಸಂಚರಿಸುತ್ತಿದ್ದ ತಾಯಿ -ಮಗನಿಗೆ ಬಸ್‌ ಢಿಕ್ಕಿಯಾಗಿ ತಾಯಿಯ ಎದುರೇ ಬಸ್‌ ಟೈರಿನಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ.

ಬೆಂದೂರ್‌ವೆಲ್‌ ಜಂಕ್ಷನ್‌ ಬಳಿ ಈ ಘಟನೆ ನಡೆದಿದ್ದು, ಬಾಲಕ ಹಾರ್ದಿಕ್‌ ಕುಮಾರ್‌ (11) ಮೃತಪಟ್ಟವನು. ತಾಯಿ ಸ್ವಾತಿ ಪ್ರಮೋದ್‌ (33) ಗಾಯಗೊಂಡಿದ್ದಾರೆ.

ತಾಯಿ -ಮಗ ಇಬ್ಬರೂ ಅಪರಾಹ್ನ 3ರ ವೇಳೆಗೆ ಸ್ಕೂಟಿಯಲ್ಲಿ ಕಂಕನಾಡಿ ಕಡೆಯಿಂದ ನಂತೂರು ಕಡೆಗೆ ಸಂಚರಿ ಸುತ್ತಿದ್ದರು. ಬೆಂದೂರುವೆಲ್‌ ಬಸ್‌ ತಂಗುದಾಣದಲ್ಲಿ ಬಸ್‌ ನಿಂತಿದ್ದ ಕಾರಣ ಮಹಿಳೆ ಸ್ಕೂಟಿಯನ್ನು ಬಲಕ್ಕೆ ತಿರುಗಿಸುವ ಯತ್ನದಲ್ಲಿದ್ದಾಗ ಹಿಂದಿ ನಿಂದ ಬಂದ ಖಾಸಗಿ ಸರ್ವಿಸ್‌ ಬಸ್‌ ಚಾಲಕನ ಅಜಾಗರೂಕತೆಯ ಚಾಲನೆ ಯಿಂದ ಸ್ಕೂಟಿಯ ಹ್ಯಾಂಡಲ್‌ಗೆ ತಾಗಿದೆ. ಸ್ಕೂಟಿ ರಸ್ತೆಗೆ ಬಿದ್ದಿದ್ದು, ಬಾಲಕ ಹಾರ್ದಿಕ್‌ ಬಲ ಭಾಗಕ್ಕೆ ಎಸೆಯಲ್ಪಟ್ಟ.

ಚಾಲಕ ಏಕಾಏಕಿ ಬಸ್‌ ಚಲಾಯಿಸಿ ಕೊಂಡು ಮುಂದೆ ಹೋದ ವೇಳೆ ರಸ್ತೆಗೆ ಬಿದ್ದಿದ್ದ ಬಾಲಕನ ಕಿಬ್ಬೊಟ್ಟೆ, ಕಾಲು, ತಲೆಯನ್ನು ಉಜ್ಜಿಕೊಂಡು ಟೈರ್‌ ಹೋಗಿದೆ. ತಾಯಿ ಹೆಲ್ಮೆಟ್‌ ಹಾಕಿದ್ದರೆ, ಮಗ ಕೂಡ ಸೈಕಲ್‌ ಹೆಲ್ಮೆಟ್‌ ಧರಿಸಿದ್ದ, ಆದರೆ ಅದು ಬಿದ್ದು ಹೋಗಿತ್ತು. ತೀವ್ರ ಗಾಯಗೊಂಡ ಬಾಲಕನ ಕಿವಿಯಿಂದ ರಕ್ತ ಬಂದಿದ್ದು, ತತ್‌ಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಹಾರ್ದಿಕ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಹಾರ್ದಿಕ್‌ನ ಉಪನಯನ ಕೆಲವು ತಿಂಗಳ ಹಿಂದೆಯಷ್ಟೇ ನಡೆದಿತ್ತು ಎಂದು ತಿಳಿದುಬಂದಿದೆ.

ಹಾರ್ದಿಕ್‌ ನಗರದ ಕೊಡಿಯಾಲ್‌ಬೈಲ್‌ನ ಖಾಸಗಿ ಪ್ರೌಢಶಾಲೆಯ ಐದನೇ ತರಗತಿ ವಿದ್ಯಾರ್ಥಿಯಾಗಿದ್ದು, ಕಲಿಕೆಯಲ್ಲಿ ಮುಂಚೂಣಿಯಲ್ಲಿದ್ದ. ತಾಯಿ ಸ್ವಾತಿ ಪ್ರಮೋದ್‌ ಅವರೂ ಶಿಕ್ಷಕಿ ಎಂದು ತಿಳಿದುಬಂದಿದೆ.

ಅಪಾಯಕಾರಿ ಜಂಕ್ಷನ್‌
ಬೆಂದೂರುವೆಲ್‌ ಜಂಕ್ಷನ್‌ ಅತ್ಯಧಿಕ ವಾಹನಗಳು ಸಂಚರಿಸುವ ಪ್ರದೇಶ ವಾಗಿದ್ದು, ಇಲ್ಲಿ ರಸ್ತೆಗಳು ಅಗಲ ಕಿರಿದಾಗಿ ಇರುವುದರಿಂದ ವಾಹನಗಳ ಧಾವಂತ ಅಧಿಕ. ವಾಹನಗಳಿಗೆ ಓವರ್‌ಟೇಕ್‌ ಮಾಡುವಷ್ಟು ರಸ್ತೆ ವಿಶಾಲ ಇಲ್ಲದಿರುವುದೂ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತದೆ. ಇದರ ನಡುವೆ ವಾಹನ ಚಾಲಕರ ಅಜಾಗರೂಕತೆಯ ಚಾಲನೆ ಸಮಸ್ಯೆಯನ್ನು ಇನ್ನಷ್ಟು ತೀವ್ರಗೊಳಿಸಿದೆ.

ಕಾಸರಗೋಡು, ಪುತ್ತೂರು, ಧರ್ಮಸ್ಥಳ ಕಡೆಗೆ ತೆರಳುವ, ಮಂಗಳಾದೇವಿ, ನಂತೂರು, ಹಂಪನ ಕಟ್ಟೆಗೆ ಹೋಗುವ ವಾಹನಗಳೂ ಇದೇ ಜಂಕ್ಷನ್‌ ಮೂಲಕ ಹೋಗುತ್ತವೆ. ಹಾಗಾಗಿ ಇಲ್ಲಿ ವಾಹನ ದಟ್ಟಣೆ ಜಾಸ್ತಿ.

ಶುಕ್ರವಾರದ ಅಪಘಾತದಲ್ಲಿ ಖಾಸಗಿ ಬಸ್‌ ಚಾಲಕ ಬಸ್‌ ನಿಲ್ಲುವ ಜಾಗದಲ್ಲಿ ಯಾರೂ ಇಳಿಯುವವರಿಲ್ಲ ಎಂಬ ಕಾರಣಕ್ಕೆ ಎಡಕ್ಕೆ ಬಾರದೆ ನೇರವಾಗಿ ಅತೀ ವೇಗದಿಂದ ಚಲಾಯಿಸಿಕೊಂಡು ಹೋಗಿ ಸ್ಕೂಟರ್‌ಗೆ ಢಿಕ್ಕಿಯಾಗಿರುವುದು ಬಾಲಕನ ಜೀವಕ್ಕೆ ಎರವಾಗಿದೆ.

ಟಾಪ್ ನ್ಯೂಸ್

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.