Karnataka: ಸುಳ್ಳಿಗೆ ಗುದ್ದು- ಸುಳ್ಳು ಸುದ್ದಿ ಪ್ರಸಾರ ಕಟ್ಟಿ ಹಾಕಲು ಚೌಕಟ್ಟು

- ರಾಜ್ಯ ಸರಕಾರದಿಂದ ಮಹತ್ವದ ನಿರ್ಧಾರ

Team Udayavani, Sep 14, 2023, 9:24 PM IST

fake news

ಬೆಂಗಳೂರು: ಸುಳ್ಳು ಸುದ್ದಿ ನಿಯಂತ್ರಣಕ್ಕಾಗಿ ರಾಜ್ಯ ಸರಕಾರ ಕಾನೂನು ಚೌಕಟ್ಟು ರೂಪಿಸಲು ಮುಂದಾಗಿದ್ದು, ಈ ಸಂಬಂಧ ಮೂರು ಹಂತದ ಸಮಿತಿ ರಚಿಸಲು ನಿರ್ಧರಿಸಿದೆ. ಐಟಿಬಿಟಿ ಇಲಾಖೆಯ ಈ ಪ್ರಸ್ತಾವಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ| ಪರಮೇಶ್ವರ ಅವರಿಂದ ತಾತ್ತಿ$Ìಕ ಒಪ್ಪಿಗೆ ಲಭಿಸಿದ್ದು, ಆದಷ್ಟು ಶೀಘ್ರ ಜಾರಿಯಾಗಲಿದೆ.

ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಈ ಬಗ್ಗೆ ಐಟಿಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಸುದೀರ್ಘ‌ ವಿವರಣೆ ನೀಡಿದರು. ರಾಜಕೀಯ ದ್ವೇಷ ಸಾಧನೆ ಅಥವಾ ಮಾಧ್ಯಮವನ್ನು ಕಟ್ಟಿಹಾಕುವ ಉದ್ದೇಶದಿಂದ ನಾವು ಈ ಚೌಕಟ್ಟು ರೂಪಿಸುತ್ತಿಲ್ಲ. ಸುಳ್ಳು ಸುದ್ದಿ ಪ್ರಸಾರದಿಂದ ಸಮಾಜದ ಮೇಲೆ ಆಗುತ್ತಿರುವ ಒಟ್ಟು ದುಷ್ಪರಿಣಾಮವನ್ನು ಕಡಿಮೆ ಮಾಡುವುದಕ್ಕಾಗಿ ಈ ಪ್ರಯತ್ನ. ಪ್ರಚಾರ, ಅಪಪ್ರಚಾರ ಎರಡನ್ನೂ ಪರಿಶೀಲನೆ ಮಾಡುವ ಗುರುತರ ಜವಾಬ್ದಾರಿ ಇದಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸುಳ್ಳು ಸುದ್ದಿಗಳಿಂದ ಸಾಮಾಜಿಕ ಸ್ವಾಸ್ಥ್ಯದ ಮೇಲಾಗುವ ಪರಿಣಾಮದ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌, ಪ್ರಧಾನಿ ನರೇಂದ್ರ ಮೋದಿ, ಎಡಿಟರ್ ಗಿಲ್ಡ್‌ ಸಹಿತ ಎಲ್ಲ ಪ್ರಾತಿನಿಧಿಕ ಸಂಸ್ಥೆ ಮತ್ತು ವ್ಯಕ್ತಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ಮಾಹಿತಿ ಹಂಚಿಕೊಳ್ಳುವ ಮುನ್ನ ಫ್ಯಾಕ್ಟ್ ಚೆಕ್‌ ಮಾಡುವುದು ನಮ್ಮ ಜವಾಬ್ದಾರಿ ಎಂದು ಖುದ್ದು ಪ್ರಧಾನಿ ಕಚೇರಿಯಂದಲೇ ಟ್ವೀಟ್‌ ಮಾಡಲಾಗಿತ್ತು. ನಾನು ನಮ್ಮ ಪ್ರಧಾನಿಗಳ ಆದೇಶವನ್ನು ಪಾಲನೆ ಮಾಡುತ್ತಿದ್ದೇನೆ. ಈ ಕಾರಣಕ್ಕೆ ಬಿಜೆಪಿಯವರು ನನ್ನ ಮೇಲೆ ಸಿಟ್ಟಾಗುವುದೇಕೆ ಎಂದು ವ್ಯಂಗ್ಯವಾಡಿದರು.

ವಾಕ್‌ ಸ್ವಾತಂತ್ರ್ಯಕ್ಕೆ ತೊಂದರೆ ಇಲ್ಲ

ಸುಳ್ಳು ಸುದ್ದಿ ನಿಯಂತ್ರಣಕ್ಕೆ ಸಿದ್ದಪಡಿಸುವ ಈ ಚೌಕಟ್ಟಿನ ಮೂಲಕ ತಪ್ಪು ಮಾಹಿತಿ, ದುರುದ್ದೇಶ ಪೂರಿತ ತಪ್ಪು ಮಾಹಿತಿ, ದ್ವೇಷ ಸಮಾಚಾರ ಹರಡುವಿಕೆಗೆ ಕಡಿವಾಣ ಹಾಕಲು ನಿರ್ಧರಿಸಿದ್ದೇವೆ. ಇದರಿಂದ ವಾಕ್‌ ಸ್ವಾತಂತ್ರ್ಯ ಅಥವಾ ಪತ್ರಿಕಾ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುವುದಿಲ್ಲ. ಸಾರ್ವಜನಿಕ ಅಭಿಪ್ರಾಯವನ್ನು ಸೃಷ್ಟಿಸುವ ವಿಧಾನದಲ್ಲಿ ಸರಿ-ತಪ್ಪು; ಇದೆಯೋ, ಇಲ್ಲವೋ ಎಂಬುದು ಮುಖ್ಯವಾಗುತ್ತದೆ. ಇತ್ತೀಚೆಗಿನ ದಿನಗಳಲ್ಲಿ ಕೆಲವು ರಾಜಕೀಯ ಪಕ್ಷ ಹಾಗೂ ಸಂಸ್ಥೆಗಳು ಅಪಪ್ರಚಾರ ಮಾಡುವುದನ್ನೇ ತಮ್ಮ ಉದ್ದೇಶವಾಗಿಸಿಕೊಂಡಿವೆ ಎಂದು ಕಳವಳ ವ್ಯಕ್ತಪಡಿಸಿದರು.

ತಿರುಚುವ ಸುದ್ದಿಗಳ ಮೇಲೆ ನಿಗಾ

ಎಂದೋ ಹೇಳಿದ ಮಾತುಗಳನ್ನು ಇನ್ಯಾವುದೋ ಸಂದರ್ಭ ಅಥವಾ ಘಟನೆಯ ಜತೆಗೆ ಜೋಡಿಸಿ ತಪ್ಪು ಸಂದೇಶ ರವಾನೆ ಮಾಡುವುದು, ಸಂಬಂಧ ಇಲ್ಲದ ವಿಚಾರಗಳನ್ನು ಪ್ರಚಾರ ಮಾಡುವುದು ಹೆಚ್ಚುತ್ತಿದೆ. ಕೆಲವೊಮ್ಮೆ ಅಚಾತುರ್ಯದಿಂದ ಆದ ಘಟನೆಗಳಿಗೆ ಏನನ್ನೂ ಮಾಡಲು ಸಾಧ್ಯವಿಲ್ಲ. ಆದರೆ ನಾವು ಮೂರು ಹಂತದಲ್ಲಿ ರಚನೆ ಮಾಡುವ ಸಮಿತಿ ಇದೆಲ್ಲದರ ಬಗ್ಗೆ ನಿಗಾ ವಹಿಸುತ್ತದೆ. ಇದು ಸುಳ್ಳು ಸುದ್ದಿ ಪ್ರಸಾರದ ವಿರುದ್ಧ ನಡೆಸುವ ನಿರ್ಣಾಯಕ ಯುದ್ಧವಾಗಬೇಕೆಂದು ನಾವು ಬಯಸುತ್ತೇವೆ. ಇದಕ್ಕಾಗಿ ರಾಜ್ಯ ಸರಕಾರ ಯಾವುದೇ ನೀತಿ ಅಥವಾ ಕಾನೂನು ತಿದ್ದುಪಡಿ ಮಾಡುವುದಿಲ್ಲ. ಇರುವ ವ್ಯವಸ್ಥೆಯೊಳಗೆ ಚೌಕಟ್ಟು ರೂಪಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ಇದಕ್ಕಾಗಿ ರಾಜ್ಯಮಟ್ಟದ ಸಮಿತಿ ರಚಿಸುತ್ತೇವೆ. ಇದರ ಅಡಿಯಲ್ಲಿ ಪರಿಶೀಲನ ಸಮಿತಿ ಹಾಗೂ ನೋಡಲ್‌ ಅಧಿಕಾರಿಗಳು ಇರುತ್ತಾರೆ. ಫಾಕ್ಟ್ ಚೆಕ್‌ ಹಂತದಲ್ಲಿ ಹಂಚಿಕೆಯಾದ ಮಾಹಿತಿಯ ಸರಿ-ತಪ್ಪುಗಳ ಪರಿಶೀಲನೆ ನಡೆಯುತ್ತದೆ. ಆ ಬಳಿಕ ತಾಂತ್ರಿಕ ಪರಿಣತರನ್ನು ಒಳಗೊಂಡ ವಿಶ್ಲೇಷಕ ಮಂಡಳಿ ಇರುತ್ತದೆ. ಜತೆಗೆ ಸಾಮರ್ಥ್ಯ ವರ್ಧನೆಗೆ ವ್ಯವಸ್ಥೆ ರೂಪಿಸುತ್ತೇವೆ ಎಂದು ವಿವರಿಸಿದರು.

ಸಮಿತಿಯಲ್ಲಿ ಯಾರಿರುತ್ತಾರೆ?

ಈ ಸಮಿತಿಯಲ್ಲಿ ಎಡಿಜಿಪಿ ಸಿಐಡಿ ಅಥವಾ ಅದೇ ದರ್ಜೆಯ ಪೊಲೀಸ್‌ ಅಧಿಕಾರಿ, ಮಾಹಿತಿ ಮತ್ತು ಸಾರ್ವಜನಿಕ ಪ್ರಚಾರ ಇಲಾಖೆಯಿಂದ ಒಬ್ಬ ಪ್ರತಿನಿಧಿ, ಐಟಿಬಿಟಿ ಇಲಾಖೆ, ಐಐಟಿ-ಡೀನ್‌, ಸೈಬರ್‌ ಸೆಕ್ಯುರಿಟಿ ಕೇಂದ್ರದ ಒಬ್ಬ ಪ್ರತಿನಿಧಿ, ಜತೆಗೆ ನಾಗರಿಕ ಸಮಾಜದ ಪ್ರತಿನಿಧಿಗಳನ್ನು ಈ ಸಮಿತಿಯ ಸದಸ್ಯರನ್ನಾಗಿ ಮಾಡುತ್ತೇವೆ. ಮಾಧ್ಯಮ ಕ್ಷೇತ್ರದ ಪ್ರತಿನಿಧಿಗಳಿಗೂ ಅವಕಾಶ ನೀಡುತ್ತೇವೆ ಎಂದು ಪ್ರಿಯಾಂಕ್‌ ಖರ್ಗೆ ಹೇಳಿದರು.

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.