ಕರಾವಳಿಯ ಧಾರ್ಮಿಕ, ಪ್ರವಾಸಿ ತಾಣ: ರವಿವಾರವೂ ಎಲ್ಲೆಡೆ ಕಿಕ್ಕಿರಿದ ಜನಸಂದಣಿ


Team Udayavani, Apr 18, 2022, 6:10 AM IST

ಕರಾವಳಿಯ ಧಾರ್ಮಿಕ, ಪ್ರವಾಸಿ ತಾಣ: ರವಿವಾರವೂ ಎಲ್ಲೆಡೆ ಕಿಕ್ಕಿರಿದ ಜನಸಂದಣಿ

ಮಂಗಳೂರು/ ಉಡುಪಿ:ನಾಲ್ಕು ದಿನಗಳ ಸರಣಿ ರಜೆಯ ಹಿನ್ನೆಲೆಯಲ್ಲಿ ರವಿವಾರ ಕರಾವಳಿಯ ಧಾರ್ಮಿಕ ಕ್ಷೇತ್ರಗಳು, ಪ್ರವಾಸಿ ತಾಣಗಳಲ್ಲಿ ಜನಸಂದಣಿ ಉತ್ತುಂಗದಲ್ಲಿತ್ತು. ಹೊರಜಿಲ್ಲೆ, ಹೊರ ರಾಜ್ಯಗಳ ಪ್ರವಾಸಿರ ಜತೆಗೆ ರವಿವಾರವಾದ್ದರಿಂದ ಸ್ಥಳೀಯರೂ ಸೇರಿದ್ದು, ಅಪಾರ ಜನಸ್ತೋಮ ಕಂಡುಬಂತು.

ಕುಕ್ಕೆ: ಅಧಿಕ ಭಕ್ತರ ಭೇಟಿ
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ನಿರಂತರ ಮೂರ್ನಾಲ್ಕು ದಿನಗಳಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಹೊರ ಜಿಲ್ಲೆ, ರಾಜ್ಯಗಳಿಂದ ಭೇಟಿ ನೀಡುತ್ತಿದ್ದಾರೆ. ರವಿವಾರವೂ ಹೆಚ್ಚಿನ ಸಂಖ್ಯೆಯ ಭಕ್ತರ ಸಂದಣಿ ಕಂಡುಬಂದಿದೆ. ಪಾರ್ಕಿಂಗ್‌ ಸ್ಥಳ, ವಸತಿ ಗೃಹಗಳಲ್ಲಿ ಕೊಠಡಿಗಳು ಭರ್ತಿಯಾಗಿದ್ದವು.

ಕಳೆದ ವರ್ಷ ಈ ಸಮಯದಲ್ಲಿ ಕೊರೊನಾ ಲಾಕ್‌ಡೌನ್‌ ಇದ್ದುದರಿಂದ ಕ್ಷೇತ್ರದಾದ್ಯಂತ ಖಾಲಿ ಖಾಲಿಯಾಗಿದ್ದ ರಸ್ತೆ, ಪೇಟೆ ಈ ವರ್ಷ ಭಕ್ತರು, ವಾಹನಗಳಿಂದ ತುಂಬಿದೆ. ಈ ಬಗ್ಗೆ ಫೋಟೋ, ವೀಡಿಯೋಗಳು ವೈರಲ್‌ ಆಗಿವೆ. ಈಗ ಪರೀಕ್ಷೆಗಳು ಮುಗಿದು ಬೇಸಗೆ ರಜೆ ಆರಂಭಗೊಂಡಿದ್ದು, ಭಕ್ತರು ಮಕ್ಕಳ ಸಹಿತ ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ.

ಧರ್ಮಸ್ಥಳ: ಭಕ್ತಸಂದಣಿ
ಬೆಳ್ತಂಗಡಿ: ಒಂದೆಡೆ ವಿಷು ಜಾತ್ರೆ ಜತೆಗೆ ಸರಕಾರಿ ರಜೆಯಾದ್ದರಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆಯಲು ರವಿವಾರ ನಾಡಿನೆಲ್ಲೆಡೆಯಿಂದ ಸಾವಿರಾರು ಭಕ್ತರು ಆಗಮಿಸಿದ್ದರು.

ವಿಷು ಜಾತ್ರೆಯ ಪ್ರಯುಕ್ತ ದೇವರ ಬಲಿ ಉತ್ಸವ ಸಹಿತ ಇತರ ವಿಧಿವಿಧಾನ ನೆರವೇರುವುದರಿಂದ ಎ. 24ರ ವರೆಗೆ ಕ್ಷೇತ್ರದಲ್ಲಿ ಮುಂಜಾನೆ 8.30ರ ಬಳಿಕ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಕ್ಕಳಿಗೆ ರಜೆಯ ಹಿನ್ನೆಲೆ ಪ್ರವಾಸಿಗರು ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಸೌತಡ್ಕ, ಸುರ್ಯ ದೇವಸ್ಥಾನಗಳಿಗೆ ನಿರಂತರ ಭೇಟಿ ನೀಡುತ್ತಿದ್ದಾರೆ.

ಮಲ್ಪೆ: ಟ್ರಾಫಿಕ್‌ ಜಾಮ್‌ ಸಮಸ್ಯೆ
ಮಲ್ಪೆ: ಇಲ್ಲಿನ ಕಡಲ ಕಿನಾರೆಗೆ ರವಿವಾರ ಜನಸಾಗರವೇ ಹರಿದು ಬಂದಿದೆ. ಮಲ್ಪೆ ಬೀಚ್‌ ಮತ್ತು ಸೀವಾಕ್‌ ವೇಯಲ್ಲಿ ವಿಪರೀತ ಜನಜಂಗುಳಿ ಉಂಟಾಗಿತ್ತು. ಸಂಜೆಯಾಗುತ್ತಿದ್ದಂತೆ ಮಲ್ಪೆ ಮಾರ್ಗದಲ್ಲಿ ಸಂಚಾರ ದಟ್ಟಣೆ ಉಂಟಾಯಿತು.

 

 

 

ಟಾಪ್ ನ್ಯೂಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.