Tesla: ಮಸ್ಕ್ ಮಾಲೀಕತ್ವದ ಟೆಸ್ಲಾದಲ್ಲಿ ಎಂಜಿನಿಯರ್‌ ಮೇಲೆ ದಾಳಿ ಮಾಡಿದ್ದ ರೋಬೋಟ್‌

ಘಟನೆಯಲ್ಲಿ ಎಂಜಿನಿಯರ್‌ಗೆ ಭಾರೀ ಗಾಯ - ಎರಡು ವರ್ಷದ ಹಿಂದಿನ ಘಟನೆ ಈಗ ಬೆಳಕಿಗೆ

Team Udayavani, Dec 28, 2023, 8:44 PM IST

tesla musk

ವಾಷಿಂಗ್ಟನ್‌: ಖ್ಯಾತ ಉದ್ಯಮಿ ಎಲಾನ್‌ ಮಸ್ಕ್ ಅವರ ಒಡೆತನದ ಟೆಸ್ಲಾ ಸಂಸ್ಥೆಯಲ್ಲಿ ರೊಬೋಟ್‌ ಒಂದು ಇಂಜಿನಿಯರ್‌ ಮೇಲೆ ದಾಳಿ ನಡೆಸಿ, ರಕ್ತಸಿಕ್ತಗೊಳಿಸಿರುವ ಘಟನೆ ವರದಿಯಾಗಿದೆ. ಕೃತಕ ಬುದ್ಧಿಮತ್ತೆ (ಎ.ಐ.) ತಂತ್ರಜ್ಞಾನದ ಅಪಾಯಗಳ ಬಗ್ಗೆ ಆಗಾಗ ಉದ್ಯಮಿ ಎಲಾನ್‌ ಮಸ್ಕ್ ಕಳವಳ ವ್ಯಕ್ತ ಪಡಿಸುತ್ತಿರುವ ನಡುವೆಯೇ ಅವರದ್ದೇ ಸಂಸ್ಥೆಯಲ್ಲಿ ಈ ಘಟನೆ ಬೆಳಕಿಗೆ ಬಂದಿರುವುದು ಮಹತ್ವ ಪಡೆದುಕೊಂಡಿದೆ. 2 ವರ್ಷದ ಹಿಂದೆಯೇ ಈ ಘಟನೆ ನಡೆದಿದ್ದು, ಈಗ ಬಹಿರಂಗಗೊಂಡಿರುವುದು ಅಚ್ಚರಿ ಮೂಡಿಸಿದೆ.

ಟೆಸ್ಲಾದಲ್ಲಿ ಅಲ್ಯೂಮಿನಿಯಂ ಎಕರಹೊಯ್ದ ಬಳಿಕ ತಯಾರಾಗುವ ಕಾರಿನ ಬಿಡಿಭಾಗಗಳನ್ನು ಕತ್ತರಿಸಿ ಅವುಗಳನ್ನು ಸಾಗಿಸುವ ಕೆಲಸಕ್ಕೆಂದೇ ರೊಬೋಟ್‌ಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಅದರ ಕಾರ್ಯಕ್ಕಾಗಿ ರೊಬೋಟ್‌ಗಳನ್ನು ಓರ್ವ ಇಂಜಿನಿಯರ್‌ ಪ್ರೋಗ್ರಾಮಿಂಗ್‌ ಮಾಡುತ್ತಿದ್ದರು. ಈ ವೇಳೆ ಎರಡು ರೊಬೋಟ್‌ಗಳನ್ನು ಕೆಲಸ ಮುಗಿದ ಬಳಿಕ ನಿಷ್ಕ್ರಿಯಗೊಳಿಸಿದ್ದಾರೆ. ಆದರೆ, ಮೂರನೇ ರೊಬೋಟ್‌ ಅನ್ನು ಅಜಾಗರೂಕತೆಯಿಂದ ನಿಷ್ಕ್ರಿಯಗೊಳಿಸುವುದನ್ನು ತಪ್ಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಕ್ರಿಯವಾಗೇ ಉಳಿದಿದ್ದ ರೊಬೋಟ್‌ ಇಂಜಿನಿಯರ್‌ ಮೇಲೆ ದಾಳಿ ನಡೆಸಿದ್ದು, ಅವರು ರಕ್ತದ ಮಡುವಿನಲ್ಲಿ ಬೀಳುವಂತೆ ಮಾಡಿದೆ. ಈ ಘಟನೆ ನಡೆದಿರುವುದು 2021ರಲ್ಲಿ. ಆ ಬಳಿಕ ಇಂಜಿನಿಯರ್‌ ಅನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿಸಲಾಗಿದೆ.

ಅಮೆರಿಕದ ಉದ್ಯೋಗ ಸುರಕ್ಷತೆ ಮತ್ತು ಆರೋಗ್ಯ ಸಚಿವಾಲಯಕ್ಕೆ ಕಂಪನಿ ವರದಿ ಸಲ್ಲಿಸುವ ವೇಳೆ 2021ರಲ್ಲಿ ಘಟನೆ ನಡೆದಿರುವುದನ್ನು ಉಲ್ಲೇಖೀಸಿರುವುದು ಬಹಿರಂಗಗೊಂಡಿದೆ. ಇನ್ನು 2021 ಮತ್ತು 2022ರಲ್ಲಿ ರೊಬೋಟ್‌ ಸಂಬಂಧಿತ ಯಾವುದೇ ಅವಘಡಗಳು ಸಂಸ್ಥೆಯಲ್ಲಿ ವರದಿ ಆಗಿಲ್ಲ.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.