ಒಂದೇ ಅಧಿವೇಶನ; ಇಬ್ಬರು ಸಿಎಂ, ಇಬ್ಬರು ಸ್ಪೀಕರ್‌


Team Udayavani, Aug 1, 2019, 3:08 AM IST

onde-adhi

ಬೆಂಗಳೂರು: ಪಕ್ಷದ ಆಂತರಿಕ ಬಂಡಾಯ ಲೆಕ್ಕಿಸದೇ ಬಜೆಟ್‌ ಅನುಮೋದನೆಗೆ ಕರೆದ ಅಧಿವೇಶನ ಸರ್ಕಾರದ ಅದಲು ಬದಲಿಗೆ ಸಾಕ್ಷಿಯಾಗಿದ್ದು, ವಿಶ್ವಾಸ ಮತ ಯಾಚನೆಗೆ ಮುಂದಾಗಿ ಕುಮಾರಸ್ವಾಮಿ ಪ್ರತಿಪಕ್ಷದಲ್ಲಿ ಕೂಡುವಂತಾಯಿತು. ಒಂದು ತಿಂಗಳಲ್ಲಿ ರಾಜ್ಯ ರಾಜಕೀಯ ಚಿತ್ರಣವೇ ಬದಲಾಗಿ ಹೋಯಿತು.

ಕಳೆದ ಆರು ತಿಂಗಳಿಂದಲೂ ಮೈತ್ರಿ ಸರ್ಕಾರದ ವಿರುದ್ಧ ನಿರಂತರ ಬಂಡಾಯದ ಮಾತುಗಳು ಕೇಳಿ ಬರುತ್ತಿದ್ದರಿಂದ ಅಧಿವೇಶನಕ್ಕೂ ಮುಂಚೆ ಕೇಳಿ ಬಂದಿದ್ದ ಬಂಡಾಯವನ್ನೂ ಮೈತ್ರಿ ಪಕ್ಷಗಳ ನಾಯಕರು ನಿರ್ಲಕ್ಷ್ಯ ಮಾಡಿದ್ದು, ಮುಖ್ಯಮಂತ್ರಿ ಪ್ರತಿಪಕ್ಷದವರನ್ನು ಕೇಳದೇ ಸದನದ ವಿಶ್ವಾಸ ಪಡೆಯಲು ಹೋಗಿ ಅಧಿಕಾರ ತ್ಯಾಗ ಮಾಡಿ ಹೋಗುವಂತಾಯಿತು.

ಮುನ್ಸೂಚನೆ: ಜು. 12 ರಿಂದ 26ರ ವರೆಗೆ ಬಜೆಟ್‌ನ ಮುಂದುವರಿದ ಅಧಿವೇಶನ ಕರೆದು ಇಲಾಖಾವಾರು ಚರ್ಚೆಗೆ ಅವಕಾಶ ನೀಡಲು ತೀರ್ಮಾನಿಸಿದ್ದ ಮೈತ್ರಿ ಪಕ್ಷಗಳ ನಾಯಕರಿಗೆ ಅಧಿವೇಶನ ಆರಂಭಕ್ಕೂ ಮುನ್ನವೇ ಆನಂದ್‌ಸಿಂಗ್‌ ರಾಜೀನಾಮೆ ಮೂಲಕ ಸರ್ಕಾರದ ಅವನತಿ ಆರಂಭದ ಮುನ್ಸೂಚನೆ ನೀಡಿದರು.

ಕಲಾಪದ ಲೆಕ್ಕಾಚಾರ: ಆನಂದ್‌ ಸಿಂಗ್‌ ರಾಜೀನಾಮೆ ನೀಡಿದ ದಿನವೇ ಪ್ರತಿಪಕ್ಷದ ನಾಯಕರಾಗಿದ್ದ ಬಿ.ಎಸ್‌.ಯಡಿಯೂರಪ್ಪ ಅಧಿವೇಶನ ನಡೆಯುವುದೂ ಅನುಮಾನ ಎಂದು ಪ್ರತಿಕಾಗೋಷ್ಠಿ ಕರೆದು ಹೇಳಿದಾಗಲೂ ಮೈತ್ರಿ ಪಕ್ಷಗಳ ನಾಯಕರು ಅದನ್ನು ಗಂಭೀರವಾಗಿ ಪರಿಗಣಿಸದೇ ಏನೂ ಆಗುವುದಿಲ್ಲ ಎನ್ನುವಂತೆ ಸುಗಮ ಕಲಾಪ ನಡೆಸುವ ಲೆಕ್ಕಾಚಾರದಲ್ಲಿ ಮುಳುಗಿದರು.

ರಮೇಶ್‌ ಜಾರಕಿಹೊಳಿ ಜೊತೆಗೆ ನಾಲ್ಕೈದು ಜನ ಶಾಸಕರು ಹೋಗುವುದರಿಂದ ಸರ್ಕಾರಕ್ಕೆ ಯಾವುದೇ ಧಕ್ಕೆಯಿಲ್ಲ ಎನ್ನುವ ಆತ್ಮವಿಶ್ವಾಸದಲ್ಲಿ ಅಧಿವೇಶನ ನಡೆಸಲು ಮುಂದಾದರು. ಆದರೆ, ಜುಲೈ 6 ರಂದು ಏಕಾ ಏಕಿ 12 ಜನ ಶಾಸಕರು ರಾಜೀನಾಮೆ ನೀಡಿದಾಗಲೇ ಮೈತ್ರಿ ಸರ್ಕಾರ ಅಂತಿಮ ದಿನಗಳನ್ನು ಎಣಿಕೆ ಶುರುವಾಯಿತು. ಆ ನಂತರ ಡಾ.ಸುಧಾಕರ್‌ ಹಾಗೂ ಸಚಿವರಾಗಿದ್ದ ಎಂ.ಟಿ.ಬಿ. ನಾಗರಾಜ್‌ ರಾಜೀನಾಮೆ ನೀಡಿದಾಗ ಕಾಂಗ್ರೆಸ್‌ ನಾಯಕರು ಸರ್ಕಾರ ಉಳಿಯುವ ವಿಶ್ವಾಸ ಕಳೆದುಕೊಂಡಿದ್ದರು.

ದೀರ್ಘ‌ ಕಲಾಪ: ವಿಶ್ವಾಸ ಮತ ಯಾಚನೆಯ ಮೇಲಿನ ಚರ್ಚೆ ಆರಂಭವಾದ ಮೇಲೆ ರಾಜ್ಯಪಾಲರು ಒಂದೇ ದಿನದಲ್ಲಿ ಬಹುಮತ ಸಾಬೀತು ಪಡೆಸುವಂತೆ ಸೂಚಿಸಿದರೂ, ಕ್ರಿಯಾಲೋಪದ ಹೆಸರಿನಲ್ಲಿ ವಿಳಂಬ ಧೋರಣೆ ಅನುಸರಿಸಿದರು. ಬಿಜೆಪಿ ಶಾಸಕರನ್ನು ಕೆಣಕಿ ಗಲಾಟೆ ಮಾಡಿಸಿ, ಸದನದಿಂದ ಅಮಾನತು ಮಾಡಿಸುವ ತಂತ್ರವನ್ನೂ ಹೆಣೆದುಕೊಂಡಿದ್ದರು. ಆದರೆ, ಸರ್ಕಾರವನ್ನು ಶತಾಯಗತಾಯ ಬದಲಾಯಿಸಲೇಬೇಕೆಂದಿದ್ದ ಬಿಜೆಪಿ ನಾಯಕರು, ಶಾಸಕರಿಗೆ ಮೌನವೊಂದೆ ಮಂತ್ರ ಎನ್ನುವ ಪಾಠ ಕಲಿಸಿ, ಯಾವುದಕ್ಕೂ ಪ್ರತಿಕ್ರಿಯೆ ನೀಡದಂತೆ ನೋಡಿಕೊಳ್ಳುವಲ್ಲಿ ಯಶಸ್ವಿಯಾದರು.

ಕಡೆಗೂ ಪತನಗೊಂಡ ಸರ್ಕಾರ: ರಾಜೀನಾಮೆ ಸಲ್ಲಿಸಿ ಹೇಗಾದರೂ ಮಾಡಿ ಮುಂಬೈನಲ್ಲಿ ವಾಸ್ತವ್ಯ ಹೂಡಿದ್ದ ಅತೃಪ್ತ ಶಾಸಕರನ್ನು ಕೊನೆ ಘಳಿಗೆಯಲ್ಲಿ ವಾಪಸ್‌ ಕರೆಸಲು ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರು ಮಾಡಿದ ಶತಪ್ರಯತ್ನ ಫ‌ಲನೀಡಲಿಲ್ಲ. ಮುಳುಗುತ್ತಿರುವ ಹಡಗಿನಲ್ಲಿ ಪ್ರಯಾಣಿಸಿ ಎಲ್ಲ ಶಾಸಕರು ಮುಳುಗಿ ಬಂಡಾಯದ ನಿರ್ಲಕ್ಷ್ಯಕ್ಕೆ ಸರ್ಕಾರವನ್ನೇ ಕಳೆದುಕೊಳ್ಳುವಂತಾಯಿತು.

ಮೈತ್ರಿ ಸರ್ಕಾರ ಪತನವಾದ ನಾಲ್ಕೇ ದಿನದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಿ, ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮೂರೇ ದಿನದಲ್ಲಿ ಅದೇ ಸದನದಲ್ಲಿ ಬಹುಮತ ಸಾಬೀತು ಪಡೆಸುವುದಕ್ಕೂ ಸದನ ಸಾಕ್ಷಿಯಾಯಿತು. ಸರ್ಕಾರ ಬದಲಾದ ತಕ್ಷಣ ವಿಧಾನಸಭೆ ಅಧ್ಯಕ್ಷರೂ ರಾಜೀನಾಮೆ ನೀಡಿದ್ದರಿಂದ ಹೊಸ ಅಧ್ಯಕ್ಷರ ನೇಮಕವೂ ಇದೇ ಅಧಿವೇಶನದಲ್ಲಿ ಆಗುವಂತಾಯಿತು.

* ಶಂಕರ ಪಾಗೋಜಿ

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.