ರಾಜ್ಯಪಾಲರ ನೇಮಕದಲ್ಲೂ ಕೇಂದ್ರದಿಂದ ಚಾಣಾಕ್ಷ ನಡೆ


Team Udayavani, Feb 13, 2023, 6:00 AM IST

ರಾಜ್ಯಪಾಲರ ನೇಮಕದಲ್ಲೂ ಕೇಂದ್ರದಿಂದ ಚಾಣಾಕ್ಷ ನಡೆ

ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್‌ ಗವರ್ನರ್‌ಗಳಿಗೆ ವಿಶೇಷ ಸ್ಥಾನಮಾನವಿದೆ. ರಾಜ್ಯಪಾಲರು ಆಯಾಯ ರಾಜ್ಯಗಳ ಪ್ರಥಮ ಪ್ರಜೆಯಾಗಿದ್ದು ಇವರನ್ನು ಕೇಂದ್ರ ಸರಕಾರದ ಶಿಫಾರಸಿನ ಮೇರೆಗೆ ರಾಷ್ಟ್ರಪತಿ ಅವರು ನೇಮಕ ಮಾಡುತ್ತಾರೆ. ರಾಜ್ಯ ಮತ್ತು ಕೇಂದ್ರ ಸರಕಾರದ ನಡುವಣ ಕೊಂಡಿಯಾಗಿ ರಾಜ್ಯಪಾಲರು ಕರ್ತವ್ಯ ನಿರ್ವಹಿಸುತ್ತಾರೆ. ರಾಜ್ಯದಲ್ಲಿ ಯಾವುದೇ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾದಾಗ ರಾಜ್ಯಪಾಲರ ಪಾತ್ರ ಅತೀ ಮಹತ್ವದ್ದಾಗಿರುತ್ತದೆ.

ರವಿವಾರದಂದು ಕೇಂದ್ರ ಸರಕಾರದ ಶಿಫಾರಸಿನಂತೆ ಹೊಸದಾಗಿ ಆರು ಮಂದಿಯನ್ನು ರಾಷ್ಟ್ರಪತಿ ಅವರು ವಿವಿಧ ರಾಜ್ಯಗಳ ರಾಜ್ಯಪಾಲರನ್ನಾಗಿ ನೇಮಕ ಮಾಡಿದ್ದರೆ ಇನ್ನು ಏಳು ಮಂದಿ ರಾಜ್ಯಪಾಲರನ್ನು ಬೇರೆ ರಾಜ್ಯಗಳಿಗೆ ವರ್ಗಾಯಿಸಿ ಆದೇಶ ಹೊರಡಿಸಿದ್ದಾರೆ.

ಹೊಸದಾಗಿ ರಾಜ್ಯಪಾಲರಾಗಿ ನೇಮಕಗೊಂಡವರು ಮತ್ತು ವರ್ಗಾವಣೆಗೊಂಡ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್‌ ಗವರ್ನರ್‌ ಅವರ ಹೆಸರುಗಳನ್ನು ಗಮನಿಸಿದಾಗ ಕೇಂದ್ರ ಸರಕಾರ ಚಾಣಾಕ್ಷ ನಡೆ ಇರಿಸಿರುವುದು ಸ್ಪಷ್ಟವಾಗುತ್ತದೆ. ಹೊಸದಾಗಿ ರಾಜ್ಯಪಾಲರಾಗಿ ನೇಮಕಗೊಂಡ ಕೆಲವು ಹೆಸರುಗಳು ಅಚ್ಚರಿ ತರಿಸಿದರೂ ಇದರ ಹಿಂದೆ ಪಕ್ಕಾ ರಾಜಕೀಯ ಲೆಕ್ಕಾಚಾರ, ಚುನಾವಣ ತಂತ್ರಗಾರಿಕೆ, ದೂರದೃಷ್ಟಿ ಇರುವುದು ಗೋಚರವಾಗುತ್ತದೆ.
ರಾಜ್ಯಪಾಲರ ನೇಮಕದ ಸಂದರ್ಭದಲ್ಲಿ ಬಿಜೆಪಿ ಅಳೆದೂ ತೂಗಿ ತನ್ನ ಮನೆಯನ್ನು ಸುವ್ಯವಸ್ಥಿತವಾಗಿ ಇರಿಸಿಕೊಳ್ಳಲು ಆದ್ಯತೆ ನೀಡಿರುವುದು ಸ್ಪಷ್ಟವಾಗುತ್ತದೆ. ವರ್ಷದ ಅಂತ್ಯದಲ್ಲಿ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ಸದ್ಯ ವಿಪಕ್ಷ ನಾಯಕರಾಗಿರುವ ಗುಲಾಬ್‌ಚಂದ್‌ ಕಟಾರಿಯಾಗೆ ರಾಜ್ಯಪಾಲ ಹುದ್ದೆ ನೀಡಲಾಗಿದೆ. ಇದು ರಾಜ್ಯದಲ್ಲಿ ಬಿಜೆಪಿಯ ಬಣ ರಾಜಕೀಯಕ್ಕೆ ಅಂತ್ಯ ಹಾಡುವ ನಿಟ್ಟಿನಲ್ಲಿ ಕೈಗೊಂಡ ಕ್ರಮವೆನ್ನಲಾಗಿದೆ. ಇನ್ನು ಈಗಾಗಲೇ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿ ಚುನಾವಣ ಪ್ರಕ್ರಿಯೆಗಳು ನಡೆಯುತ್ತಿರುವ ರಾಜ್ಯಗಳಾದ ಮೇಘಾಲಯ, ನಾಗಾಲ್ಯಾಂಡ್‌ಗೆ ಅನುಭವಿಗಳನ್ನು ವರ್ಗಾಯಿಸಿ ರಾಜಕೀಯ ಲೆಕ್ಕಾಚಾರದ ಜತೆಯಲ್ಲಿ ಸಂಭಾವ್ಯ ಬೆಳವಣಿಗೆ ಎದುರಿಸಲು ಬಿಜೆಪಿ ಸಜ್ಜಾಗಿರುವಂತೆ ಭಾಸವಾಗುತ್ತಿದೆ.

ತಮಿಳುನಾಡಿನ ಬಿಜೆಪಿ ಹಿರಿಯ ನಾಯಕ ಸಿ.ಪಿ.ರಾಧಾಕೃಷ್ಣನ್‌ಗೂ ಗೌರವಾನ್ವಿತ ಹುದ್ದೆ ಕೊಡಲಾಗಿದೆ. ಈ ಮೂಲಕ ತಮಿಳುನಾಡು ಬಿಜೆಪಿಯ ಮೇಲೆ ಪೂರ್ಣ ಹಿಡಿತ ಸಾಧಿಸಲು ಕೆ.ಅಣ್ಣಾಮಲೈ ಅವರಿಗೆ ಪಕ್ಷದ ವರಿಷ್ಠರು ಅವಕಾಶ ಮಾಡಿಕೊಟ್ಟಿದ್ದಾರೆ. ರಾಜ್ಯಸಭೆಯಲ್ಲಿ ಬಿಜೆಪಿ ವಿಪ್‌ ಆರ್‌ಎಸ್‌ಎಸ್‌ ಹಿನ್ನೆಲೆಯ ಶಿವಪ್ರತಾಪ್‌ ಶುಕ್ಲಾರನ್ನು ಇತ್ತೀಚೆಗಷ್ಟೇ ಕಾಂಗ್ರೆಸ್‌ ಮರಳಿ ಅಧಿಕಾರಕ್ಕೇರಿರುವ ಹಿಮಾಚಲ ಪ್ರದೇಶದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಛತ್ತೀಸ್‌ಗಢದ ರಾಜ್ಯಪಾಲರಾಗಿದ್ದ ಅನಸೂಯಾರನ್ನು ಮಣಿಪುರಕ್ಕೆ ವರ್ಗಾಯಿಸುವ ಮೂಲಕ ಮೀಸಲಾತಿ ಮಸೂದೆ ವಿಚಾರವಾಗಿ ಛತ್ತೀಸ್‌ಗಢ ಬಿಜೆಪಿ ನಾಯಕರಲ್ಲಿ ಉಂಟಾಗಿರುವ ಅಸಮಾಧಾನವನ್ನು ತಣಿಸುವ ಪ್ರಯತ್ನವನ್ನು ಕೇಂದ್ರ ಮಾಡಿದೆ.

ಅಚ್ಚರಿಯ ಆಯ್ಕೆ ಎಂಬಂತೆ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕರ್ನಾಟಕ ಮೂಲದ ಎಸ್‌. ಅಬ್ದುಲ್‌ ನಝೀರ್‌ ಆಂಧ್ರಪ್ರದೇಶದ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ. ಅಯೋಧ್ಯೆ ವಿವಾದ ಮತ್ತು ತ್ರಿವಳಿ ತಲಾಖ್‌ ರದ್ದು ವಿರುದ್ಧದ ಅರ್ಜಿಯ ಪ್ರಕರಣದ ವಿಚಾರಣ ಪೀಠದ ಭಾಗವಾಗಿದ್ದ ಅವರಿಗೆ ನಿವೃತ್ತರಾದ ಐದು ವಾರಗಳಲ್ಲೇ ಈ ಹುದ್ದೆ ಲಭಿಸಿದೆ. ಕರ್ನಾಟಕ ವಿಧಾನಸಭೆಗೆ ಇದೇ ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದ್ದು ಈ ನೇಮಕಾತಿ ಒಂದಿಷ್ಟು ಕುತೂಹಲ ಮೂಡಿಸಿದೆ. ಸದಾ ಒಂದಿಲ್ಲೊಂದು ಕಾರಣದಿಂದಾಗಿ ರಾಜ್ಯ ಸರಕಾರ – ರಾಜ್ಯಪಾಲರ ನಡುವೆ ಸಂಘರ್ಷಕ್ಕೆ ಕಾರಣವಾಗುತ್ತಿರುವ ತಮಿಳುನಾಡು, ತೆಲಂಗಾಣ ಮತ್ತು ಕೇರಳ ರಾಜ್ಯಪಾಲರು ವಿಪಕ್ಷಗಳ ವಾಗ್ಧಾಳಿಗೆ ತುತ್ತಾಗುತ್ತಿದ್ದರೂ ತಲೆಕೆಡಿಸಿಕೊಳ್ಳದ ಕೇಂದ್ರ ಯಥಾಸ್ಥಿತಿ ಕಾಯ್ದುಕೊಳ್ಳುವ ಮೂಲಕ ಆಯಾಯ ರಾಜ್ಯಗಳಲ್ಲಿನ ಆಡಳಿತ ಪಕ್ಷಗಳಿಗೆ ಸ್ಪಷ್ಟ ಸಂದೇಶ ರವಾನಿಸಿದೆ.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.