ಸೋರುತಿರುವ ಮಹಾಗಣಪತಿ ದೇವಸ್ಥಾನಕ್ಕೊಂದು ಪರಿಹಾರ!
ದೇವಸ್ಥಾನದ ಮೇಲೊಂದು ಕಬ್ಬಿಣದ ತಗಡಿನ ಮನೆ ನಿರ್ಮಾಣ
Team Udayavani, Jul 29, 2023, 6:59 PM IST
ಸಾಗರ: ಇಲ್ಲಿನ ಇತಿಹಾಸ ಪ್ರಸಿದ್ಧವಾದ ಮಹಾಗಣಪತಿ ದೇವಸ್ಥಾನ ಮಳೆಯಿಂದ ಸಂಪೂರ್ಣ ಸೋರುತ್ತಿರುವ ಹಿನ್ನೆಲೆಯಲ್ಲಿ ಕಟ್ಟಡ ರಕ್ಷಣೆ ಮಾಡಲು ಭಕ್ತಾದಿಗಳು ಟಾರ್ಪಲ್ ಹೊದೆಸಿದರೆ ಈಗ ಶಾಸಕರ ಸೂಚನೆ ಪಡೆದ ತಾಲೂಕು ಆಡಳಿತ ದೇವಸ್ಥಾನದ ಮೇಲೆ ಕಬ್ಬಿಣದ ತಗಡಿನ ರೂಫಿಂಗ್ ಮಾಡು ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
ದೇವಸ್ಥಾನ ಸೋರುತ್ತಿರುವ ಕುರಿತು ಮಹಾಗಣಪತಿ ದೇವಸ್ಥಾನ ಹಿತರಕ್ಷಣಾ ಸಮಿತಿ ಸಂಚಾಲಕ ಐ.ವಿ.ಹೆಗಡೆ ಉಪವಿಭಾಗಾಧಿಕಾರಿಗಳಿಗೆ ದೇವಸ್ಥಾನವನ್ನು ತುರ್ತು ರಿಪೇರಿ ಮಾಡಲು ಮನವಿ ಸಲ್ಲಿಸಿದ್ದರು. ದೇವಸ್ಥಾನ ಜೀರ್ಣೋದ್ಧಾರಗೊಂಡು ಮೂರ್ನಾಲ್ಕು ವರ್ಷದಲ್ಲಿ ಸಂಪೂರ್ಣ ಸೋರುತ್ತಿದ್ದು ಭಕ್ತರಿಗೆ ತೊಂದರೆಯಾಗುತ್ತಿದೆ. ದೇವಸ್ಥಾನದ ಮುಖಮಂಟಪ, ಘಂಟಾ ಮಂಟಪ ಸಂಪೂರ್ಣ ಸೋರುತ್ತಿದ್ದು, ಭಕ್ತಾದಿಗಳಿಗೆ ದೇವಸ್ಥಾನದೊಳಗೆ ಬರಲು ಭಯಬೀಳುವ ಸ್ಥಿತಿ ನಿರ್ಮಾಣವಾಗಿದೆ. ಸೋರಿಕೆಯಾದ ನೀರು ಭಕ್ತರು ದೇವರ ದರ್ಶನ ಪಡೆಯುವ ಜಾಗದಲ್ಲಿ ನಿಲ್ಲುತ್ತಿದೆ. ನೀರು ವಿದ್ಯುತ್ ತಂತಿಗಳಿಗೆ ತಗುಲಿ ಆಧಾರಕ್ಕಾಗಿ ಕೊಟ್ಟ ಸ್ಟೀಲ್ ಪೈಪ್ ಹಾಗೂ ಸ್ಟೀಲ್ ಗೇಟ್ಗಳನ್ನು ಮುಟ್ಟಿದರೆ ವಿದ್ಯುತ್ ಶಾಕ್ ಹೊಡೆಯುತ್ತಿದೆ. ದೇವರಿಗೆ ಸಾಷ್ಟಾಂಗ ನಮಸ್ಕಾರ ಮಾಡಲು ಸಹ ಆಗುತ್ತಿಲ್ಲ ಎಂದು ಅವರು ಆರೋಪಿಸಿದ್ದರು.
ಶ್ರಾವಣ ಮಾಸದಲ್ಲಿ ಹೆಚ್ಚಿನ ಹಬ್ಬಹರಿದಿನಗಳು ಇದ್ದು ಭಕ್ತರು ದೊಡ್ಡ ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ಬರುತ್ತಾರೆ. ಈಗಾಗಲೇ ಸಾಕಷ್ಟು ಭಕ್ತರು ಕರೆಂಟ್ ಹೊಡೆಸಿಕೊಂಡು ಹೋಗಿದ್ದಾರೆ. ಹೆಚ್ಚಿನ ಅನಾಹುತ ಸಂಭವಿಸುವ ಮೊದಲು ತಕ್ಷಣ ರಿಪೇರಿ ಕಾರ್ಯ ಕೈಗೊಳ್ಳುವಂತೆ ಎಂದು ಮನವಿಯಲ್ಲಿ ಒತ್ತಾಯಿಸಿದ್ದರು. ಮೂರು ದಿನಗಳ ಹಿಂದೆ ದೇವಸ್ಥಾನದ ಪ್ರಾಂಗಣಕ್ಕೆ ಆಗಮಿಸಿದ್ದ ಶಾಸಕ ಬೇಳೂರು ಗೋಪಾಲಕೃಷ್ಣ, ತಕ್ಷಣ ಅಗತ್ಯ ಕ್ರಮಕ್ಕೆ ಸೂಚಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ