Wenlock ಹೃದ್ರೋಗ ಚಿಕಿತ್ಸೆಗೆ ಪೂರಕ ಯೋಜನೆ ವೆನ್ಲಾಕ್ ನಲ್ಲಿ ಅತ್ಯಾಧುನಿಕ ಕ್ಯಾಥ್ಲ್ಯಾಬ್
Team Udayavani, Feb 3, 2024, 7:15 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿ ರೋಗಗಳಿಗೆ ಹೆಚ್ಚಿನ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಅತ್ಯಾಧುನಿಕ ಕಾರ್ಡಿಯಾಕ್ ಕ್ಯಾಥ್ಲ್ಯಾಬ್ ಸ್ಥಾಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಚಿಂತನೆ ನಡೆಸಿದೆ. ಆರೋಗ್ಯ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಲ್ಯಾಬ್ ಆರಂಭಿಸುವ ಕುರಿತಂತೆ ಆಸಕ್ತಿ ವಹಿಸಿದ್ದಾರೆ.
ಹೃದ್ರೋಗಕ್ಕೆ ಸಂಬಂಧಿಸಿದಂತೆ ದಿನಂಪ್ರತಿ ಸಾಕಷ್ಟು ಸಂಖ್ಯೆಯ ರೋಗಿಗಳು ವೆನ್ಲಾಕ್ ಗೆ ಬರುತ್ತಾರೆ. ಆಸ್ಪತ್ರೆಯಲ್ಲಿ ಹೃದಯ ಚಿಕಿತ್ಸಾ ವಿಭಾಗ, ತಜ್ಞರು ಇದ್ದಾರೆ; ಆದರೆ ಕ್ಯಾಥ್ಲ್ಯಾಬ್ ಇಲ್ಲದೆ ಹೆಚ್ಚಿನ ಚಿಕಿತ್ಸೆ ಸಾಧ್ಯವಾಗುತ್ತಿಲ್ಲ. ಹೊರರೋಗಿ ಚಿಕಿತ್ಸೆ ಮಾತ್ರ ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ರೋಗಿಗಳನ್ನು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಯೋಜಿತ ಖಾಸಗಿ ಆಸ್ಪತ್ರೆಗೆ ರೆಫರ್ ಮಾಡಲಾಗುತ್ತಿದೆ.
ಇದನ್ನು ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಗಂಭೀರವಾಗಿ ಪರಿಗಣಿಸಿದ್ದು, ಖಾಸಗಿ ಆಸ್ಪತ್ರೆಗಳಿಗೆ ರೆಫರ್ ಮಾಡುವ ಬದಲು ವೆನ್ಲಾಕ್ ನಲ್ಲಿಯೇ ಸೂಕ್ತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಕ್ಯಾಥ್ಲ್ಯಾಬ್ ಸ್ಥಾಪಿಸುವಂತೆ ಸೂಚಿಸಿದೆ.
ಏನಿದು ಕ್ಯಾಥ್ ಲ್ಯಾಬ್?
ಕಾರ್ಡಿಯಾಕ್ ಕ್ಯಾಥಟರೈಜೇಶನ್ ಲ್ಯಾಬ್ (ಕ್ಯಾಥ್ ಲ್ಯಾಬ್) ಹೃದಯ ಸಂಬಂಧಿ ರೋಗಗಳ ಅತ್ಯಾಧುನಿಕ ತಪಾಸಣೆ ಮತ್ತು ಚಿಕಿತ್ಸೆಗೆ ಸಂಬಂಧಿಸಿದಂತೆ ಇರುವ ಸೌಲಭ್ಯ. ರಕ್ತನಾಳಗಳ ಬ್ಲಾಕ್ ಪತ್ತೆ ಮಾಡುವ ಕೊರೊನರಿ ಆ್ಯಂಜಿಯೋಗ್ರಾಂ, ಆ್ಯಂಜಿಯೋಪ್ಲಾಸ್ಟಿ (ಸ್ಟಂಟ್ ಅಳವಡಿಕೆ) ಮೊದಲಾವುಗಳನ್ನು ಇಲ್ಲಿಯೇ ನಿರ್ವಹಿಸಲಾಗುತ್ತದೆ. ಹೃದಯಾಘಾತಕ್ಕೆ ಸಂಬಂಧಿಸಿದ ತುರ್ತುಚಿಕಿತ್ಸೆ ನೀಡುವ ವ್ಯವಸ್ಥೆಯೂ ಇದರಲ್ಲಿದೆ. ಐಸಿಯು ಮಾದರಿಯಲ್ಲಿ 24 ಗಂಟೆಯೂ ಕಾರ್ಯನಿರ್ವಹಿಸುತ್ತದೆ. ಹೃದಯ ಚಿಕಿತ್ಸಾ ತಜ್ಞರ ಜತೆಗೆ ಪ್ರತ್ಯೇಕ ರೇಡಿಯೋಲಜಿ ಟೆಕ್ನಿಶಿಯನ್ಗಳು, ನರ್ಸ್ಗಳು ಇರುತ್ತಾರೆ.
ಸರ್ಜಿಕಲ್ ಬ್ಲಾಕ್ನಲ್ಲಿ ಜಾಗ
ವೆನ್ಲಾಕ್ ನಲ್ಲಿ ಈಗಾಗಲೇ ಸುಸಜ್ಜಿತವಾದ ಹೊಸ ಸರ್ಜಿಕಲ್ ಬ್ಲಾಕ್ ನಿರ್ಮಾಣವಾಗಿದ್ದು, ಅಂತಸ್ತಿನಲ್ಲಿ ಕ್ಯಾಥ್ಲ್ಯಾಬ್ಗ ಜಾಗ ಕಾದಿರಿಸಲಾಗಿದೆ. ವೆನ್ಲಾಕ್ ನ ನಿರ್ವಹಣೆಯ ಹೊಣೆ ಹೊತ್ತಿರುವ ಕೆಎಂಸಿ ಆಸ್ಪತ್ರೆಯವರೇ ಲ್ಯಾಬ್ ಆರಂಭಿಸಲು ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ