ಕಾಲೇಜು ಮಕ್ಕಳಿಗೆ ಸಿಗದ ಟ್ಯಾಬ್‌: ಮುಕ್ತಾಯ ಹಂತದಲ್ಲಿ ಶೈಕ್ಷಣಿಕ ವರ್ಷ

1.43 ಲಕ್ಷ ಟ್ಯಾಬ್‌ಗೆ ಪ್ರಸ್ತಾವನೆ

Team Udayavani, Feb 7, 2023, 7:15 AM IST

ಕಾಲೇಜು ಮಕ್ಕಳಿಗೆ ಸಿಗದ ಟ್ಯಾಬ್‌: ಮುಕ್ತಾಯ ಹಂತದಲ್ಲಿ ಶೈಕ್ಷಣಿಕ ವರ್ಷ

ಉಡುಪಿ: ಪದವಿ ಕಾಲೇಜು ವಿದ್ಯಾರ್ಥಿಗಳ 2022-23ನೇ ಸಾಲಿನ ಶೈಕ್ಷಣಿಕ ತರಗತಿಗಳು ಕೊನೆಯ ಘಟ್ಟಕ್ಕೆ ತಲು ಪಿದರೂ ವಿದ್ಯಾರ್ಥಿಗಳಿಗೆ ಟ್ಯಾಬ್‌ ನೀಡುವ ಪ್ರಸ್ತಾವನೆಗೆ ಸರಕಾರದಿಂದ ಅನುಮೋದನೆ ಸಿಕ್ಕಿಲ್ಲ.

ಉಡುಪಿಯ 12 ಹಾಗೂ ದಕ್ಷಿಣ ಕನ್ನಡದ 21 ಸಹಿತ ರಾಜ್ಯದಲ್ಲಿ 430 ಸರಕಾರಿ ಪದವಿ ಕಾಲೇಜುಗಳಿವೆ. ಸುಮಾರು 3.5 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಕರಾವಳಿಯ ಉಭಯ ಜಿಲ್ಲೆಯಲ್ಲಿ 15 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿದ್ದಾರೆ. ವಿವಿಧ ಸರಕಾರಿ ಪದವಿ ಕಾಲೇಜುಗಳ 5 ಸಾವಿರಕ್ಕೂ ಅಧಿಕ ತರಗತಿ ಕೊಠಡಿಗಳನ್ನು ಸ್ಮಾರ್ಟ್‌ ಆಗಿ ಪರಿವರ್ತಿಸಲಾಗಿದೆ. ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗುವಂತೆ ಈ ಹಿಂದೆ ಲ್ಯಾಪ್‌ಟಾಪ್‌ ವಿತರಿಸಲಾಗಿತ್ತು. ಆರ್ಥಿಕ ಹೊರೆಯಾಗುವುದರಿಂದ ಲ್ಯಾಪ್‌ ಟಾಪ್‌ ಬದಲಿಗೆ ಟ್ಯಾಬ್‌ ವಿತರಣೆಗೆ ಸರಕಾರ ನಿರ್ಧರಿಸಿತ್ತು. ಆದರೆ ಎರಡು ವರ್ಷಗಳಿಂದ ಟ್ಯಾಬ್‌ ಕೂಡ ಸರಿಯಾಗಿ ವಿದ್ಯಾರ್ಥಿಗಳಿಗೆ ತಲುಪುತ್ತಿಲ್ಲ.

ಕಾಲೇಜು ಶಿಕ್ಷಣ ಇಲಾಖೆಯಿಂದ ನವಯುಗದ ಸಮಗ್ರ ಕಲಿಕಾ ನಿರ್ವಹಣೆ ವ್ಯವಸ್ಥೆ (ಕರ್ನಾಟಕ ಎಲ್‌ಎಂಎಸ್‌) ಸಿದ್ಧಪಡಿಸಲಾಗಿದೆ. ಇದರಲ್ಲಿ ವಿದ್ಯಾರ್ಥಿಗಳ ಆನ್‌ಲೈನ್‌ ಮೂಲಕ ಕಲಿಕೆಗೆ ಬೇಕಾದ ಕಂಟೆಂಟ್‌ ಗಳನ್ನು ಅಪ್‌ಡೇಟ್‌ ಮಾಡಲಾಗುತ್ತದೆ. ಕಲಿಕೆಯನ್ನು ಇನ್ನಷ್ಟು ಸರಳಗೊಳಿಸಲು ಟ್ಯಾಬ್‌ ಒದಗಿಸಿದರೆ ಉತ್ತಮ ಎಂಬ ನೆಲೆಯಲ್ಲಿ ಸುಮಾರು 1.43 ಲಕ್ಷಕ್ಕೂ ಅಧಿಕ ಟ್ಯಾಬ್‌ ಆವಶ್ಯಕತೆಯಿದೆ ಎಂಬ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಿದೆ.

ಶೈಕ್ಷಣಿಕ ವರ್ಷದ ಅಂತಿಮ ಹಂತ
2022-23ನೇ ಸಾಲಿನಲ್ಲಿ ಪ್ರಥಮ ವರ್ಷದ ಪದವಿ ಕೋರ್ಸ್‌ಗೆ ಸೇರಿರುವ ಆರ್ಥಿಕವಾಗಿ ಹಿಂದುಳಿದ ಕುಟುಂಬದ ವಿದ್ಯಾರ್ಥಿಗಳಿಗೆ ಟ್ಯಾಬ್‌ (ಕುಟುಂಬದ ನಿರ್ದಿಷ್ಟ ಆದಾಯದ ಆಧಾರದಲ್ಲಿ) ವಿತರಣೆ ಮಾಡುವ ಮೂಲಕ ಕಲಿಕೆ ಹಾಗೂ ಉನ್ನತ ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಸರಕಾರ ಯೋಜನೆ ರೂಪಿಸಿತ್ತು. ಪ್ರಸಕ್ತ ಸಾಲಿನ ಪದವಿ ಕಾಲೇಜುಗಳ ಮೊದಲ ವರ್ಷ ವಿದ್ಯಾರ್ಥಿಗಳ ಎರಡನೇ ಸೆಮಿಸ್ಟರ್‌ ನಡೆಯುತ್ತಿದೆ. ಈಗಾಗಲೇ ಟ್ಯಾಬ್‌ ವಿದ್ಯಾರ್ಥಿಗಳ ಕೈ ಸೇರಿದ್ದರೆ ಶೈಕ್ಷಣಿಕವಾಗಿ ಅನು ಕೂಲವಾಗುತ್ತಿತ್ತು. ಇನ್ನು ಎರಡು ಮೂರು ತಿಂಗಳಲ್ಲಿ ಶೈಕ್ಷಣಿಕ ವರ್ಷವೂ ಮುಗಿಯುತ್ತದೆ. ಅಷ್ಟರೊಳಗೆ ಸರಕಾರ ಟ್ಯಾಬ್‌ ನೀಡಬೇಕು ಎಂಬುದು ವಿದ್ಯಾರ್ಥಿಗಳು, ಪ್ರಾಧ್ಯಾಪಕರ ಆಗ್ರಹ.

ವಿತರಿಸದಿರಲು ಕಾರಣ ಏನು?
ಸರಕಾರಿ ಪದವಿ ಕಾಲೇಜುಗಳ ಸುಮಾರು ಅರ್ಹ 1.43 ಲಕ್ಷ ವಿದ್ಯಾರ್ಥಿಗಳಿಗೆ ತಲಾ 10 ಸಾ. ರೂ.ಗಳಿಂದ 11 ಸಾ. ರೂ.  ಮೌಲ್ಯದ ಟ್ಯಾಬ್‌ ವಿತರಣೆಗೆ ಇಲಾಖೆ ಪ್ರಸ್ತಾ ವನೆ ಸಿದ್ಧಪಡಿಸಿದೆ. ಈ ಟ್ಯಾಬ್‌ನಲ್ಲಿ ವಿದ್ಯಾರ್ಥಿ ಗಳ ಕಲಿಕೆಗೆ ಪೂಕರವಾದ ಮಾಹಿತಿ ಯನ್ನು ಮೊದಲೇ ಅಪ್‌ಲೋಡ್‌ ಮಾಡಲಾಗುತ್ತದೆ. 1.43 ಲಕ್ಷ ಟ್ಯಾಬ್‌ಗಳಿಗೆ ಕೋಟ್ಯಂತರ ರೂ. ಬೇಕಾಗುವುದರಿಂದ ಆರ್ಥಿಕ ಇಲಾಖೆ ಇನ್ನೂ ಅನುಮತಿ ನೀಡಿಲ್ಲ. ಬಜೆಟ್‌ನಲ್ಲಿ ಟ್ಯಾಬ್‌ ಜತೆಗೆ ಇನ್ನು ಕೆಲವು ಘೋಷಣೆಗಳ ನಿರೀಕ್ಷೆಯಲ್ಲಿ ಶಿಕ್ಷಣ ಇಲಾಖೆಯಿದೆ.

ಸರಕಾರಿ ಪದವಿ ಕಾಲೇಜಿನ ಅರ್ಹ ವಿದ್ಯಾರ್ಥಿಗಳಿಗೆ ಟ್ಯಾಬ್‌ ಒದಗಿಸುವ ಸಂಬಂಧ ಈಗಾಗಲೇ ಪ್ರಸ್ತಾವನೆ ಸಲ್ಲಿಸಿ ದ್ದೇವೆ. ಸರಕಾರದಿಂದ ಯಾವುದೇ ಉತ್ತರ ಬಂದಿಲ್ಲ. ಬಜೆಟ್‌ ನಲ್ಲಿ ಪ್ರತ್ಯೇಕ ಅನುದಾನದ ಬಗ್ಗೆಯೂ ಮಾಹಿತಿ ಯಿಲ್ಲ.
– ಪಿ. ಪ್ರದೀಪ್‌, ಆಯುಕ್ತರು, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ

-ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.