ತಾಯಿ ಮೃತಪಟ್ಟರೂ ಎಸೆಸೆಲ್ಸಿ ಮೌಲ್ಯಮಾಪನ ನಡೆಸಿದ ಶಿಕ್ಷಕಿ
Team Udayavani, Jul 14, 2020, 10:50 AM IST
ಮಡಿಕೇರಿ: ತಾಯಿ ಮೃತಪಟ್ಟಿದ್ದರೂ ಸಹ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಎಸೆಸೆಲ್ಸಿ ಪರೀಕ್ಷೆಯ ಮೌಲ್ಯಮಾಪನಕ್ಕೆ ಹಾಜರಾಗುವ ಮೂಲಕ ಶಿಕ್ಷಕಿಯೊಬ್ಬರು ಕರ್ತವ್ಯನಿಷ್ಠೆ ಮೆರೆದಿದ್ದಾರೆ.
ಮಡಿಕೇರಿ ತಾಲೂಕಿನ ಬೆಟ್ಟಿಗೇರಿಯ ಉದಯ ಪ್ರೌಢ ಶಾಲೆಯ ಶಿಕ್ಷಕಿ ಕವಿತಾ ಅವರ ತಾಯಿ ವಯೋ ಸಹಜ ಕಾಯಿಲೆಯಿಂದ ಸೋಮವಾರ ಮುಂಜಾನೆ ನಿಧನ ಹೊಂದಿದರು. ಎಸೆಸೆಲ್ಸಿ ಪರೀಕ್ಷೆ ತುಂಬಾ ವಿಳಂಬವಾಗಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ತಾನು ಗೈರುಹಾಜರಾಗುವುದು ಸರಿಯಲ್ಲ ಎಂದು ಭಾವಿಸಿದ ಅವರು ಮಡಿಕೇರಿಯ ಸಂತ ಮೈಕಲರ ಶಾಲೆಯಲ್ಲಿ ನಡೆಯುತ್ತಿರುವ ಮೌಲ್ಯಮಾಪನಕ್ಕೆ ಹಾಜರಾದರು. ಕರ್ತವ್ಯ ಮುಗಿದ ಬಳಿಕ ತಾಯಿಯ ಅಂತ್ಯಸಂಸ್ಕಾರ ನಡೆಸಿದರು.
ಶಿಕ್ಷಣಾಧಿಕಾರಿ ಮಚ್ಚಾಡೋ ಅವರು ಶಿಕ್ಷಕಿಯ ಕರ್ತವ್ಯ ನಿಷ್ಠೆಯನ್ನು ಶ್ಲಾಘಿಸಿದ್ದಾರೆ. ಸಹೋದ್ಯೋಗಿಗಳು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
21 ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ
AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!
Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್: ಮತ್ತೆ ನಕ್ಸಲರ ಸದ್ದು?
Lok Sabha ಅಖಾಡಕ್ಕೆ ಲಾಲು ಪ್ರಸಾದ್ ಪುತ್ರಿ ಡಾ| ರೋಹಿಣಿ ಹೆಜ್ಜೆ
Infosys; 4 ತಿಂಗಳ ಮೊಮ್ಮಗನಿಗೆ 243 ಕೋಟಿ ರೂ.ಷೇರು ಗಿಫ್ಟ್ ನೀಡಿದ ಮೂರ್ತಿ