ಅಭಿವೃದ್ಧಿ ಕಾಣದ ಅಶೋಕನ ಕುರುಹು; ಕುರಿದೊಡ್ಡಿಯಾದ ಸನ್ನತಿಬೌದ್ಧ ಶಿಲಾಶಾಸನ ತಾಣ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬೌದ್ಧ ಪರಂಪರೆಯ ನಾಶಕ್ಕೆ ಮುನ್ನುಡಿ ಬರೆದಿವೆ

Team Udayavani, Sep 2, 2021, 6:01 PM IST

ಅಭಿವೃದ್ಧಿ ಕಾಣದ ಅಶೋಕನ ಕುರುಹು

ವಾಡಿ: 1994ರಿಂದ 2004ರ ವರೆಗೆ ಚಿತ್ತಾಪುರ ತಾಲೂಕಿನ ಸನ್ನತಿ ಪ್ರದೇಶದ ಕನಗನಹಳ್ಳಿಯಲ್ಲಿಭಾರತೀಯ ಸರ್ವೇಕ್ಷಣಾ ಇಲಾಖೆ ಕೈಗೊಂಡ ಉತVನನದಲ್ಲಿ ಕ್ರಿ.ಪೂ 3ನೇ ಶತಮಾನಕ್ಕೆ ಸೇರಿದ ಮೌರ್ಯ ಸಾಮ್ರಾಜ್ಯದ ದೊರೆ ಸಾಮ್ರಾಟ್‌ ಅಶೋಕನ ಕಾಲಘಟ್ಟದ ಬೌದ್ಧ ಪರಂಪರೆಯ ಶಿಲಾ ಶಾಸನ ಸೇರಿದಂತೆ ಹಲವು ಕುರುಹುಗಳು ಪತ್ತೆಯಾಗಿದ್ದು, ಕೇಂದ್ರ ಸರ್ಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಗುರಿಯಾಗಿರುವ ಈ ಐತಿಹಾಸಿಕ ತಾಣವೀಗ ಕುರಿದೊಡ್ಡಿಯಾಗಿ ಪರಿವರ್ತನೆಯಾಗಿದೆ.

ಕಳೆದ ಎರಡು ದಶಕಗಳ ಹಿಂದೆ ಬೆಳಕಿಗೆ ಬಂದ ಬೌದ್ಧ ಮಹಾಸ್ತೂಪ ಸಮುಚ್ಚಯದ ಅವಶೇಷಗಳು,ಪ್ರಗತಿಯಹಿನ್ನಡೆಯಿಂದಾಗಿ ನೆಲದಡಿ ಹರಡಿಕೊಂಡು ಪುನಃ ಮಣ್ಣಿಗೆ ಸೇರಿಕೊಳ್ಳುತ್ತಿವೆ. ಇಲ್ಲಿ ದೊರೆತ ಬೃಹತ್‌ ಬೌದ್ಧ ಸ್ತೂಪವು 22ಮೀ. ವಿಸ್ತೀರ್ಣ ಮತ್ತು 17ಮೀ. ಎತ್ತರವಾಗಿತ್ತು ಎನ್ನಲಾಗಿದೆ.

ಮೌರ್ಯರ ಆರಂಭ ಹಾಗೂ ಶಾತವಾಹನರ ಅಂತ್ಯದ ಕಾಲಘಟ್ಟದಲ್ಲಿ ಮೂರು ಹಂತದಲ್ಲಿ ಸ್ತೂಪ ನಿರ್ಮಾಣವಾಗಿದೆ. ಅದೀಗ ಸಂಪೂರ್ಣ ನೆಲಸಮದ ರೀತಿಯಲ್ಲಿ ಪತ್ತೆಯಾಗಿದ್ದು, ಸಾವಿರಾರು ಶಿಲೆಗಳು ಮತ್ತು ಬುದ್ಧನ ಮೂರ್ತಿಗಳು ಉತ್ಖನನದ ವೇಳೆ ಪ್ರಾಚ್ಯವಸ್ತು ಇಲಾಖೆ ಕೈಸೇರಿವೆ. ಹೀಗೆ ಬೆಳಕಿಗೆ ಬಂದ ಐತಿಹಾಸಿಕ ಬೌದ್ಧ ಕುರುಹುಗಳನ್ನು ರಕ್ಷಣೆ ಮಾಡಲಾಗದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬೌದ್ಧ ಪರಂಪರೆಯ ನಾಶಕ್ಕೆ ಮುನ್ನುಡಿ ಬರೆದಿವೆ ಎಂಬುದು ಅಂಬೇಡ್ಕರ್‌ವಾದಿಗಳ ಆರೋಪವಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಉಪನ್ಯಾಸಕರು, ಸಂಶೋಧಕರು, ಪದವಿ ಕಾಲೇಜು ವಿದ್ಯಾರ್ಥಿಗಳು ಇಲ್ಲಿಗೆ ಆಗಮಿಸಿ, ಸನ್ನತಿ ಬೌದ್ಧ ತಾಣ ವೀಕ್ಷಿಸಿ ಅಧ್ಯಯನ ಮಾಡುತ್ತಾರೆ. ವಿದೇಶಗಳಿಂದಲೂ ಪ್ರವಾಸಿ ಗರು ಬಂದು ಹೋಗುತ್ತಾರೆ. ಭೀಮಾ ನದಿ ದಂಡೆಯಲ್ಲಿರುವ ಈ ಬೌದ್ಧ ನೆಲೆ ಪ್ರವಾಸಿಗರ ಆಕರ್ಷಣೀಯ ತಾಣವಾಗಿದೆ.

ದುರಂತವೆಂದರೆ ಕೇಂದ್ರ ಪ್ರಾಚ್ಯವಸ್ತು ಇಲಾಖೆ ಇದರ ಅಭಿವೃದ್ಧಿ ಕೈಗೊಳ್ಳುವುದನ್ನೇ ಮರೆತಿದೆ. ಶಿಲಾ ಶಾಸನಗಳು ಬೆಳಕಿಗೆ ಬಂದು 26 ವರ್ಷಗಳೇ ಉರುಳಿದರೂ ಬುದ್ಧನ ಮೂರ್ತಿಗಳಿಗೆ ಸುರಕ್ಷಿತ ಗೌರವ ದೊರೆತಿಲ್ಲ. ಭದ್ರತಾ ಸಿಬ್ಬಂದಿ ನೇಮಿಸಲಾಗಿದ್ದರೂ ಕುರಿಗಳು ಮತ್ತು ದನ ಕರುಗಳು ಪ್ರವೇಶಿಸಿ ಬೌದ್ಧ ಕುರುಹುಗಳನ್ನು ತುಳಿದು ಹಾಕುತ್ತಿವೆ. ಸರ್ಕಾರಗಳ ಬೇಜವಾಬ್ದಾರಿಯಿಂದಾಗಿ ಅದೆಷ್ಟೋ ಶಿಲೆಗಳು ಕಾಣೆಯಾಗಿವೆ.

ಕುಡಿಯುವ ನೀರು, ಶೌಚಾಲಯ, ವಿಶ್ರಾಂತಿ ಗೃಹ, ಉದ್ಯಾನವನ, ಉಪಹಾರ ತಾಣಗಳಂತಹ ಸೌಲಭ್ಯಗಳು ಇಲ್ಲಿ ಕಾಣುವುದಿಲ್ಲ. ಪ್ರವಾಸೋದ್ಯಮ ಇಲಾಖೆ ಇಲ್ಲಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಕನಿಷ್ಟ ಮೂಲಭೂತ ಸೌಕರ್ಯವನ್ನೂ ಒದಗಿಸಿಲ್ಲ. ಸನ್ನತಿಬೌದ್ಧ ಸ್ತೂಪ ತಾಣವೀಗ ಅಕ್ಷರಶಃ ಕುರಿ ದೊಡ್ಡಿಯಾಗಿ ಪರಿವರ್ತನೆ ಆಗಿರುವುದು ಮಾತ್ರ ವಿಪರ್ಯಾಸದ ಸಂಗತಿ.

ಸನ್ನತಿಯಲ್ಲಿ ದೊರೆತಿರುವ ಕ್ರಿ.ಪೂ. 3ನೇ ಶತಮಾನದ ಬೌದ್ಧ ಸಮುಚ್ಚಯ ಅವಶೇಷಗಳು, ನಾಗಾ ಜನಾಂಗದ ಮೂಲ ನಿವಾಸಿಗಳಾದ ದಲಿತರ ಸ್ವಾಭಿಮಾನ ಹೆಚ್ಚಿಸಿವೆ. ಸುರಕ್ಷತೆ ಕಾಪಾಡಬೇಕಾದ ಕೇಂದ್ರ ಸರ್ಕಾರ ಸುದೀರ್ಘ‌ ಬೇವಾಬ್ದಾರಿ ವಹಿಸಿದೆ. ದನ, ಕರು ,ಕುರಿಗಳು ಶಿಲೆಗಳ ಮೇಲೆ ಓಡಾಡಿಹುಲ್ಲು ಮೇಯುತ್ತಿವೆ. ಶಿಲೆಗಳು ಮತ್ತು ಶಾಸನಗಳು ಮುರಿಯುತ್ತಿವೆ. ಈಗಾಗಲೇ ಬಹುತೇಕ ಶಿಲಾಕಲೆಗಳು, ವಿವಿಧ ಮೂರ್ತಿಗಳುಕಣ್ಮರೆಯಾಗಿವೆ. ಭದ್ರತೆ ಎನ್ನುವುದು ಇಲ್ಲಿ ನಾಮಕೇವಾಸ್ತೆ ಎಂಬಂತಾಗಿದೆ. ಸರ್ಕಾರಕಿಂಚಿತ್ತೂ ಅಭಿವೃದ್ಧಿ ಮಾಡಿಲ್ಲ. ಪ್ರವಾಸಿಗರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿಲ್ಲ. ಇದು ದಲಿತರ ಸ್ವಾಭಿಮಾನಕೆರಳಿಸಿದೆ. ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ, ಹೋರಾಟ ರೂಪಿಸಲಾಗುವುದು.
ಸಂದೀಪ ಎಸ್‌. ಕಟ್ಟಿ, ಬೌದ್ಧ ಅನುಯಾಯಿ

*ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.