ಅಭಿವೃದ್ಧಿ ಕಾಣದ ಅಶೋಕನ ಕುರುಹು; ಕುರಿದೊಡ್ಡಿಯಾದ ಸನ್ನತಿಬೌದ್ಧ ಶಿಲಾಶಾಸನ ತಾಣ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬೌದ್ಧ ಪರಂಪರೆಯ ನಾಶಕ್ಕೆ ಮುನ್ನುಡಿ ಬರೆದಿವೆ

Team Udayavani, Sep 2, 2021, 6:01 PM IST

ಅಭಿವೃದ್ಧಿ ಕಾಣದ ಅಶೋಕನ ಕುರುಹು

ವಾಡಿ: 1994ರಿಂದ 2004ರ ವರೆಗೆ ಚಿತ್ತಾಪುರ ತಾಲೂಕಿನ ಸನ್ನತಿ ಪ್ರದೇಶದ ಕನಗನಹಳ್ಳಿಯಲ್ಲಿಭಾರತೀಯ ಸರ್ವೇಕ್ಷಣಾ ಇಲಾಖೆ ಕೈಗೊಂಡ ಉತVನನದಲ್ಲಿ ಕ್ರಿ.ಪೂ 3ನೇ ಶತಮಾನಕ್ಕೆ ಸೇರಿದ ಮೌರ್ಯ ಸಾಮ್ರಾಜ್ಯದ ದೊರೆ ಸಾಮ್ರಾಟ್‌ ಅಶೋಕನ ಕಾಲಘಟ್ಟದ ಬೌದ್ಧ ಪರಂಪರೆಯ ಶಿಲಾ ಶಾಸನ ಸೇರಿದಂತೆ ಹಲವು ಕುರುಹುಗಳು ಪತ್ತೆಯಾಗಿದ್ದು, ಕೇಂದ್ರ ಸರ್ಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಗುರಿಯಾಗಿರುವ ಈ ಐತಿಹಾಸಿಕ ತಾಣವೀಗ ಕುರಿದೊಡ್ಡಿಯಾಗಿ ಪರಿವರ್ತನೆಯಾಗಿದೆ.

ಕಳೆದ ಎರಡು ದಶಕಗಳ ಹಿಂದೆ ಬೆಳಕಿಗೆ ಬಂದ ಬೌದ್ಧ ಮಹಾಸ್ತೂಪ ಸಮುಚ್ಚಯದ ಅವಶೇಷಗಳು,ಪ್ರಗತಿಯಹಿನ್ನಡೆಯಿಂದಾಗಿ ನೆಲದಡಿ ಹರಡಿಕೊಂಡು ಪುನಃ ಮಣ್ಣಿಗೆ ಸೇರಿಕೊಳ್ಳುತ್ತಿವೆ. ಇಲ್ಲಿ ದೊರೆತ ಬೃಹತ್‌ ಬೌದ್ಧ ಸ್ತೂಪವು 22ಮೀ. ವಿಸ್ತೀರ್ಣ ಮತ್ತು 17ಮೀ. ಎತ್ತರವಾಗಿತ್ತು ಎನ್ನಲಾಗಿದೆ.

ಮೌರ್ಯರ ಆರಂಭ ಹಾಗೂ ಶಾತವಾಹನರ ಅಂತ್ಯದ ಕಾಲಘಟ್ಟದಲ್ಲಿ ಮೂರು ಹಂತದಲ್ಲಿ ಸ್ತೂಪ ನಿರ್ಮಾಣವಾಗಿದೆ. ಅದೀಗ ಸಂಪೂರ್ಣ ನೆಲಸಮದ ರೀತಿಯಲ್ಲಿ ಪತ್ತೆಯಾಗಿದ್ದು, ಸಾವಿರಾರು ಶಿಲೆಗಳು ಮತ್ತು ಬುದ್ಧನ ಮೂರ್ತಿಗಳು ಉತ್ಖನನದ ವೇಳೆ ಪ್ರಾಚ್ಯವಸ್ತು ಇಲಾಖೆ ಕೈಸೇರಿವೆ. ಹೀಗೆ ಬೆಳಕಿಗೆ ಬಂದ ಐತಿಹಾಸಿಕ ಬೌದ್ಧ ಕುರುಹುಗಳನ್ನು ರಕ್ಷಣೆ ಮಾಡಲಾಗದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬೌದ್ಧ ಪರಂಪರೆಯ ನಾಶಕ್ಕೆ ಮುನ್ನುಡಿ ಬರೆದಿವೆ ಎಂಬುದು ಅಂಬೇಡ್ಕರ್‌ವಾದಿಗಳ ಆರೋಪವಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಉಪನ್ಯಾಸಕರು, ಸಂಶೋಧಕರು, ಪದವಿ ಕಾಲೇಜು ವಿದ್ಯಾರ್ಥಿಗಳು ಇಲ್ಲಿಗೆ ಆಗಮಿಸಿ, ಸನ್ನತಿ ಬೌದ್ಧ ತಾಣ ವೀಕ್ಷಿಸಿ ಅಧ್ಯಯನ ಮಾಡುತ್ತಾರೆ. ವಿದೇಶಗಳಿಂದಲೂ ಪ್ರವಾಸಿ ಗರು ಬಂದು ಹೋಗುತ್ತಾರೆ. ಭೀಮಾ ನದಿ ದಂಡೆಯಲ್ಲಿರುವ ಈ ಬೌದ್ಧ ನೆಲೆ ಪ್ರವಾಸಿಗರ ಆಕರ್ಷಣೀಯ ತಾಣವಾಗಿದೆ.

ದುರಂತವೆಂದರೆ ಕೇಂದ್ರ ಪ್ರಾಚ್ಯವಸ್ತು ಇಲಾಖೆ ಇದರ ಅಭಿವೃದ್ಧಿ ಕೈಗೊಳ್ಳುವುದನ್ನೇ ಮರೆತಿದೆ. ಶಿಲಾ ಶಾಸನಗಳು ಬೆಳಕಿಗೆ ಬಂದು 26 ವರ್ಷಗಳೇ ಉರುಳಿದರೂ ಬುದ್ಧನ ಮೂರ್ತಿಗಳಿಗೆ ಸುರಕ್ಷಿತ ಗೌರವ ದೊರೆತಿಲ್ಲ. ಭದ್ರತಾ ಸಿಬ್ಬಂದಿ ನೇಮಿಸಲಾಗಿದ್ದರೂ ಕುರಿಗಳು ಮತ್ತು ದನ ಕರುಗಳು ಪ್ರವೇಶಿಸಿ ಬೌದ್ಧ ಕುರುಹುಗಳನ್ನು ತುಳಿದು ಹಾಕುತ್ತಿವೆ. ಸರ್ಕಾರಗಳ ಬೇಜವಾಬ್ದಾರಿಯಿಂದಾಗಿ ಅದೆಷ್ಟೋ ಶಿಲೆಗಳು ಕಾಣೆಯಾಗಿವೆ.

ಕುಡಿಯುವ ನೀರು, ಶೌಚಾಲಯ, ವಿಶ್ರಾಂತಿ ಗೃಹ, ಉದ್ಯಾನವನ, ಉಪಹಾರ ತಾಣಗಳಂತಹ ಸೌಲಭ್ಯಗಳು ಇಲ್ಲಿ ಕಾಣುವುದಿಲ್ಲ. ಪ್ರವಾಸೋದ್ಯಮ ಇಲಾಖೆ ಇಲ್ಲಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಕನಿಷ್ಟ ಮೂಲಭೂತ ಸೌಕರ್ಯವನ್ನೂ ಒದಗಿಸಿಲ್ಲ. ಸನ್ನತಿಬೌದ್ಧ ಸ್ತೂಪ ತಾಣವೀಗ ಅಕ್ಷರಶಃ ಕುರಿ ದೊಡ್ಡಿಯಾಗಿ ಪರಿವರ್ತನೆ ಆಗಿರುವುದು ಮಾತ್ರ ವಿಪರ್ಯಾಸದ ಸಂಗತಿ.

ಸನ್ನತಿಯಲ್ಲಿ ದೊರೆತಿರುವ ಕ್ರಿ.ಪೂ. 3ನೇ ಶತಮಾನದ ಬೌದ್ಧ ಸಮುಚ್ಚಯ ಅವಶೇಷಗಳು, ನಾಗಾ ಜನಾಂಗದ ಮೂಲ ನಿವಾಸಿಗಳಾದ ದಲಿತರ ಸ್ವಾಭಿಮಾನ ಹೆಚ್ಚಿಸಿವೆ. ಸುರಕ್ಷತೆ ಕಾಪಾಡಬೇಕಾದ ಕೇಂದ್ರ ಸರ್ಕಾರ ಸುದೀರ್ಘ‌ ಬೇವಾಬ್ದಾರಿ ವಹಿಸಿದೆ. ದನ, ಕರು ,ಕುರಿಗಳು ಶಿಲೆಗಳ ಮೇಲೆ ಓಡಾಡಿಹುಲ್ಲು ಮೇಯುತ್ತಿವೆ. ಶಿಲೆಗಳು ಮತ್ತು ಶಾಸನಗಳು ಮುರಿಯುತ್ತಿವೆ. ಈಗಾಗಲೇ ಬಹುತೇಕ ಶಿಲಾಕಲೆಗಳು, ವಿವಿಧ ಮೂರ್ತಿಗಳುಕಣ್ಮರೆಯಾಗಿವೆ. ಭದ್ರತೆ ಎನ್ನುವುದು ಇಲ್ಲಿ ನಾಮಕೇವಾಸ್ತೆ ಎಂಬಂತಾಗಿದೆ. ಸರ್ಕಾರಕಿಂಚಿತ್ತೂ ಅಭಿವೃದ್ಧಿ ಮಾಡಿಲ್ಲ. ಪ್ರವಾಸಿಗರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿಲ್ಲ. ಇದು ದಲಿತರ ಸ್ವಾಭಿಮಾನಕೆರಳಿಸಿದೆ. ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ, ಹೋರಾಟ ರೂಪಿಸಲಾಗುವುದು.
ಸಂದೀಪ ಎಸ್‌. ಕಟ್ಟಿ, ಬೌದ್ಧ ಅನುಯಾಯಿ

*ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಧಾನಸಭಾ ಚುನಾವಣೆಯಲ್ಲಿ ಮೋದಿ ಪ್ರಚಾರ ಮಾಡಿದೆಡೆ ಕಾಂಗ್ರೆಸ್ ಗೆದ್ದಿದೆ: ಡಾ. ಶರಣಪ್ರಕಾಶ

ವಿಧಾನಸಭಾ ಚುನಾವಣೆಯಲ್ಲಿ ಮೋದಿ ಪ್ರಚಾರ ಮಾಡಿದೆಡೆ ಕಾಂಗ್ರೆಸ್ ಗೆದ್ದಿದೆ: ಡಾ. ಶರಣಪ್ರಕಾಶ

1——-saads

HKE ಚುನಾವಣೆ: ಅಧ್ಯಕ್ಷರಾಗಿ ಶಶೀಲ್ ಜಿ. ನಮೋಶಿ ಆಯ್ಕೆ

PM ಮೋದಿ ಸಮನಾದ ನಾಯಕ ಕಾಂಗ್ರೆಸ್‌ನಲ್ಲಿಲ್ಲ: ಬಿಎಸ್‌ವೈ

PM ಮೋದಿ ಸಮನಾದ ನಾಯಕ ಕಾಂಗ್ರೆಸ್‌ನಲ್ಲಿಲ್ಲ: ಬಿಎಸ್‌ವೈ

1-wewewqe

Kalaburagi; ಅರ್ಧ ಗಂಟೆ ಭಾಷಣದಲ್ಲಿ ಖರ್ಗೆ ಹೆಸರನ್ನೇ ಉಲ್ಲೇಖಿಸದ ಮೋದಿ

1-sadsadsad

Kalaburagi; ಕರ್ನಾಟಕದ ಜನತೆ ಕೋಪಗೊಂಡಿದ್ದಾರೆ, ಎಚ್ಚೆತ್ತುಕೊಂಡಿದ್ದಾರೆ:ಪ್ರಧಾನಿ ಮೋದಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.