![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಉಸೋಡಾದಲ್ಲಿ ಮನೆ ಮೇಲೆ ಮರ ಬಿದ್ದು ಹಾನಿ- ಐದು ತಿಂಗಳಾದರೂ ದೊರೆಯದ ಪರಿಹಾರ
ಸಂಕಷ್ಟದಲ್ಲಿ ವೃದ್ಧ ದಂಪತಿಗಳು... ಕತ್ತಲಲ್ಲೇ ಜೀವನ
Team Udayavani, Dec 21, 2023, 5:55 PM IST
![joida](https://www.udayavani.com/wp-content/uploads/2023/12/joida-620x465.jpg)
ಸಂಕಷ್ಟದಲ್ಲಿ ವೃದ್ಧ ದಂಪತಿಗಳು... ಕತ್ತಲಲ್ಲೇ ಜೀವನ
ದಾಂಡೇಲಿ/ಜೋಯಿಡಾ: ತಾಲ್ಲೂಕಿನ ಸಿಂಗರಗಾವ್ ಗ್ರಾ.ಪಂ ವ್ಯಾಪ್ತಿಯ ಉಸೋಡಾ ಎಂಬಲ್ಲಿ ಸುತ್ತಲು ಆವರಿಸಿರುವ ದಟ್ಟ ಕಾಡಿನ ಮಧ್ಯೆ ಇರುವ ವೃದ್ಧ ದಂಪತಿಗಳ ಪುಟ್ಟ ಮನೆಯ ಮೇಲೆ ಕಳೆದ ಐದು ತಿಂಗಳ ಹಿಂದೆ ಮರ ಒಂದು ಬಿದ್ದು, ಮನೆಗೆ ಸಂಪೂರ್ಣ ಹಾನಿಯಾಗಿ, ಸರಕಾರದ ಪರಿಹಾರಕ್ಕಾಗಿ ಜಾತಕಪಕ್ಷಿಯಂತೆ ಕಾಯುತ್ತಿರುವ ವೃದ್ಧ ದಂಪತಿಗಳ ಕರುಣಾಜನಕ ವರದಿಯಿದು.
ಅವರು ಅತೀ ಬಡವರು. ಬದುಕಿಗಾಗಿ ಮುಂಭಾಗದಲ್ಲಿ ಅಲ್ಪ ಕೃಷಿಯನ್ನೆ ನಂಬಿ, ಅಲ್ಪ ಸ್ವಲ್ಪ ಕೃಷಿಯ ಜೊತೆ ಬದುಕು ಕಟ್ಟಿ ಕೊಂಡವರು. ಮಗಳನ್ನು ಮದುವೆ ಮಾಡಿ ಕೊಟ್ಟಿದ್ದಾರೆ. ಗಂಡು ಮಕ್ಕಳಿಬ್ಬರು ಗೌಂಡಿ ಕೆಲಸ ಮಾಡುವುದಕ್ಕಾಗಿ ತಮ್ಮಕುಟುಂಬದ ಜೊತೆ ದೂರದಲ್ಲಿದ್ದಾರೆ. ಹಾಗಾಗಿ ಇಲ್ಲಿರುವವರು ರುಕ್ಮಿಣಿ ಸಟ್ಟು ಡುರೆ ಮತ್ತು ಅವರ ಪತಿ ಸಟ್ಟು ಡುರೆ ಎಂಬ ಹತ್ತಿರ ಹತ್ತಿರ 75 ದಾಟಿದ ವೃದ್ಧ ದಂಪತಿಗಳು.
ಆದರೂ ಸ್ವಾಭಿಮಾನದ ಜೀವನ ನಡೆಸುತ್ತಾ ಬಂದಿದ್ದಾರೆ.
ಜುಲೈ 26 ರಂದು ಸುರಿದ ಭೀಕರ ಗಾಳಿ ಮಳೆಗೆ ಮನೆಯ ಮೇಲೆ ಮರವೊಂದು ಬಿದ್ದು, ಮನೆಗೆ ಬಹಳಷ್ಟು ಹಾನಿಯಾಗಿದೆ. ಅದೃಷ್ಟವಶಾತ್ ವೃದ್ಧ ದಂಪತಿಗಳಿಗೆ ಯಾವುದೇ ಅಪಾಯ ಆಗದೇ ಇದ್ದರೂ ಮನೆಗೆ ಮಾತ್ರ ಹಾನಿಯಾಗಿದೆ. ಮನೆಯ ಮೇಲ್ಛಾವಣಿ ಸಂಪೂರ್ಣ ಮುರಿದು ಬಿದ್ದಿದ್ದು. ಮಳೆ ನೀರು ಸೋರದಂತೆ ಪ್ಲಾಸ್ಟಿಕ್ ಹೊದಿಕೆಯನ್ನು ಹಾಸುಕೊಂಡಿದ್ದಾರೆ. ಆದರೆ ಮನೆಯ ಮೇಲೆ ಬಿದ್ದಿರುವ ಮರವನ್ನು ಮಾತ್ರ ಇನ್ನೂ ತೆರವುಗೊಳಿಸಿಲ್ಲ. ಮನೆಯ ಮೇಲೆ ಮರ ಬಿದ್ದ ಹಿನ್ನಲೆಯಲ್ಲಿ ಮೊದಲೆ ಮಣ್ಣಿನ ಗೋಡೆಯಾಗಿರುವುದರಿಂದ ಗೋಡೆ ಬಿರುಕು ಬಿಟ್ಟಿದೆ. ಮರ ಬಿದ್ದಾಗಿನಿಂದ ವಿದ್ಯುತ್ ಮೀಟರ್ ಬೋರ್ಡ್ ಕೆಟ್ಟು ಹೋಗಿದ್ದು, ಆ ದಿನದಿಂದ ಈವರೇಗೆ ವಿದ್ಯುತ್ ಪೊರೈಕೆಯಾಗದೇ ಚಿಮಿಣಿ ದೀಪದಲ್ಲೆ ದಿನ ಕಳೆಯ ಬೇಕಾದ ಅನಿವಾರ್ಯ ಪರಿಸ್ಥಿತಿ ಈ ವೃದ್ಧ ದಂಪತಿಗಳದ್ದಾಗಿದೆ.
ಪರಿಹಾರಕ್ಕಾಗಿ ಸಿಂಗರಗಾವ್ ಗ್ರಾಮ ಪಂಚಾಯಿತಿಗೆ ಹಾಗೂ ತಾಲೂಕಾಡಳಿತಕ್ಕೆ ಮನವಿಯನ್ನು ಮಾಡಿದ್ದರು. ಮನವಿಗೆ ಅನುಗುಣವಾಗಿ ಪರಿಶೀಲನೆಗೆ ಅಧಿಕಾರಿಗಳು ಬಂದಿದ್ದ ಸಮಯದಲ್ಲಿ ಸಟ್ಟು ಡುರೆ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಮನೆಯಲ್ಲಿ ಯಾರು ಇಲ್ಲದಿರುವುದನ್ನು ಮನಗಂಡು, ಈ ಮನೆಯಲ್ಲಿ ಯಾರು ವಾಸವಿರುವುದಿಲ್ಲ ಎಂದು ವರದಿ ಮಾಡಿಕೊಂಡು ಹೋಗಿರುವುದರಿಂದ ನಮಗಿನ್ನೂ ಪರಿಹಾರ ಬಂದಿಲ್ಲ ಎಂಬ ವಾದ ರುಕ್ಮಿಣಿ ಸಟ್ಟು ಡುರೆಯವರಾದ್ದಾಗಿದೆ.
ಒಂದು ಕಡೆ ಮನೆಗೆ ಬಿದ್ದಿರುವ ಮರವನ್ನು ಇನ್ನೂ ತೆರವುಗೊಳಿಸಲಾಗಿಲ್ಲ, ಮರ ಬಿದ್ದು ಹಾನಿಯಾಗಿರುವ ಮೇಲ್ಚಾವಣಿಯನ್ನು ದುರಸ್ತಿ ಮಾಡಲಾಗಿಲ್ಲ, ವಿದ್ಯುತ್ ಮೀಟರ್ ಬೋರ್ಡಿಗೆ ಹಾನಿಯಾಗಿರುವುದರಿಂದ ವಿದ್ಯುತ್ ಪೂರೈಕೆಯಾಗದೆ ಕತ್ತಲಲ್ಲೆ ದಿನದೂಡಬೇಕಾದ ಪರಿಸ್ಥಿತಿಯಲ್ಲಿ ಈ ವೃದ್ಧ ದಂಪತಿಗಳ ಕುಟುಂಬವಿದೆ.
ಆದ್ದರಿಂದ ಸಂಬಂಧಪಟ್ಟ ಗ್ರಾಮ ಪಂಚಾಯಿತಿಯವರು ಮತ್ತು ತಾಲೂಕಾಡಳಿತ ಈ ವೃದ್ಧ ದಂಪತಿಗಳ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವುದರ ಜೊತೆಗೆ, ಗ್ರಾಮ ಪಂಚಾಯತಿ ವತಿಯಿಂದ ವಿಶೇಷ ಮುತುವರ್ಜಿಯನ್ನು ವಹಿಸಿ ಆಶ್ರಯ ಮನೆ ನೀಡುವ ನಿಟ್ಟಿನಲ್ಲಿ ಮುಂದಾಗಬೇಕಾಗಿದೆ.
ಇದನ್ನೂ ಓದಿ: Sagara: ಗ್ರಾಮದ ರಸ್ತೆ ಬದಿಗೆ ತ್ಯಾಜ್ಯ- ಗ್ರಾಮಸ್ಥರ ಆಕ್ರೋಶ
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shirur landslide; Green signal for National highway traffic in three or four days?](https://www.udayavani.com/wp-content/uploads/2024/07/1-27-150x83.jpg)
Shirur landslide; ರಾ.ಹೆದ್ದಾರಿ ಸಂಚಾರಕ್ಕೆ ಮೂರ್ನಾಲ್ಕು ದಿನಗಳಲ್ಲಿ ಗ್ರೀನ್ ಸಿಗ್ನಲ್ ?
![Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ](https://www.udayavani.com/wp-content/uploads/2024/07/shiruu-150x83.jpg)
Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ
![1-ccc-aa](https://www.udayavani.com/wp-content/uploads/2024/07/1-ccc-aa-150x94.jpg)
Shiruru hill collapse; 10 ದಿನದಿಂದ ಇಲ್ಲೇ ಇದ್ದೇನೆ : ಟೀಕೆಗಳಿಗೆ ಶಾಸಕ ಸೈಲ್ ಬೇಸರ
![1–eewr-aa-aa](https://www.udayavani.com/wp-content/uploads/2024/07/1-eewr-aa-aa-150x91.jpg)
Shiruru hill collapse; ಮಣ್ಣು ತೆಗೆಯುವ ಕಾರ್ಯಾಚರಣೆ ವೇಳೆ ಸಿಕ್ಕ ಹೋಟೆಲ್ ಅವಶೇಷಗಳು
![1–eewr-aa](https://www.udayavani.com/wp-content/uploads/2024/07/1-eewr-aa-150x89.jpg)
Shiruru hill collapse; ನದಿಯ ನಾಲ್ಕು ಕಡೆ ಅವಶೇಷಗಳು ಬೆಳಕಿಗೆ:ಇಂದ್ರಬಾಲನ್ ನಂಬಿಯಾರ್
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.