ಪಡೀಲ್‌ನಲ್ಲಿ ಸುಸಜ್ಜಿತ “ಇವಿಎಂ” ಉಗ್ರಾಣ


Team Udayavani, Feb 15, 2023, 11:54 AM IST

evm

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ 8 ವಿಧಾನಸಭೆ ಕ್ಷೇತ್ರಗಳಿಗೆ ಸಂಬಂಧಿಸಿ ಮತ ಯಂತ್ರದ ವಿವಿಧ ವಿಭಾಗಗಳಾದ ಇವಿಎಂ, ವಿವಿ ಪ್ಯಾಟ್‌ ಮತ್ತು ಕಂಟ್ರೋಲ್‌ ಯುನಿಟ್‌ಗಳನ್ನು ಸಂಗ್ರಹಿಸಿಡಲು ಪಡೀಲ್‌ನಲ್ಲಿ ಉಗ್ರಾಣ (ಇವಿಎಂ ವೇರ್‌ಹೌಸ್‌) ನಿರ್ಮಾಣಗೊಂಡಿದ್ದು ಮತಯಂತ್ರಗಳನ್ನು ಸುರಕ್ಷಿತವಾಗಿ ಸಂಗ್ರಹಿಸಿಡಲಾಗಿದೆ.

ಪಡೀಲ್‌ನಲ್ಲಿ ಪ್ರಗತಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಹಿಂಭಾಗದಲ್ಲೇ 2 ಅಂತಸ್ತಿನ ಈ ಉಗ್ರಾಣ ಇದ್ದು 5.19 ಕೋ. ರೂ. ವೆಚ್ಚದಲ್ಲಿ ನಿರ್ಮಿಸ ಲಾಗಿದೆ. ಈ ಮೊದಲು ಸ್ಟೇಟ್‌ಬ್ಯಾಂಕ್‌ ಬಳಿಯ ಜಿಲ್ಲಾಧಿಕಾರಿ ಕಚೇರಿಯ ಸ್ಟ್ರಾಂಗ್‌ ರೂಮ್‌ನಲ್ಲಿ ಇವಿಎಂಗಳನ್ನು ಇರಿಸಲಾಗಿತ್ತು. ಪ್ರಸ್ತುತ ಅವುಗಳಲ್ಲಿ ಲೋಕಸಭೆ ಚುನಾವಣೆಗೆ ಸಂಬಂಧಿಸಿದ ಮತಯಂತ್ರಗಳನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ವಿಧಾನಸಭೆ, ಜಿ.ಪಂ., ತಾ.ಪಂ., ಚುನಾವಣೆಗಳ ಮತಯಂತ್ರಗಳನ್ನು ಜಿಲ್ಲಾಧಿಕಾರಿ ಕಚೇರಿಯಲ್ಲೇ ಇರಿಸಲಾಗಿದೆ. ಅವುಗಳನ್ನು ಚುನಾವಣೆಗಳು ನಡೆದ ಬಳಿಕ ಸ್ಥಳಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುಸಜ್ಜಿತ ಕಟ್ಟಡ ಇವಿಎಂ ಸಂಗ್ರಹ ಉಗ್ರಾಣ ಸುಸಜ್ಜಿತ ಕಟ್ಟಡವಾಗಿದ್ದು, ಒಂದೇ ಪ್ರವೇಶ ದ್ವಾರ ಹೊಂದಿದೆ. ಕಿಟಕಿ ಬಾಗಿಲುಗಳನ್ನು ಮೊಹರು ಮಾಡಿ ಮುಚ್ಚಿರುವುದರಿಂದ ಗಾಳಿ ಅಡ್ಡಾಡಲು ಸಣ್ಣ ಗವಾಕ್ಷಿ, ಸೇಫ್ಟಿ ಅಲರಾಮ್‌ ಸಿಸಿ ಕೆಮರಾ, ಅಗ್ನಿಶಮನ ವ್ಯವಸ್ಥೆ, 24 ಗಂಟೆಗಳ ಪೊಲೀಸ್‌ ಕಾವಲನ್ನು ಒಳಗೊಂಡಿದೆ. ಮುಂದಿನ 30 ವರ್ಷಗಳ ಅವಧಿಗೆ ಎಷ್ಟು ಮತಯಂತ್ರಗಳನ್ನು ಇರಿಸಬಹುದು ಎಂದು ಅಂದಾಜಿಸಿ ಚುನಾವಣಾ ಆಯೋಗದ ನಿಯಮಾವಳಿಯಂತೆ ನಿರ್ಮಿಸಲಾಗಿದೆ. ಪ್ರತೀ ವಿಧಾನಸಭಾ ಕ್ಷೇತ್ರದ ಇವಿಎಂಗೂ ಪ್ರತ್ಯೇಕ ಕೊಠಡಿಗಳಿವೆ.

ತಿಂಗಳಿಗೊಮ್ಮೆ ಪರಿಶೀಲನೆ

ಮತ ಯಂತ್ರಗಳನ್ನು ಪಡೀಲ್‌ನಲ್ಲಿರುವ ನೂತನ ಉಗ್ರಾಣದಲ್ಲಿ ಇರಿಸಲಾಗಿದೆ. ತಿಂಗಳಿಗೊಮ್ಮೆ ಪರಿಶೀಲನೆ ಮಾಡುತ್ತಿದ್ದು ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡ ಬಳಿಕ ಮೂರು ಬಾರಿ ಪರಿಶೀಲಿಸಲಾಗಿದೆ.
– ರವಿಕುಮಾರ್‌ ಎಂ.ಆರ್‌. ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ

ಪ್ರತೀ ತಿಂಗಳು ಪರಿಶೀಲನೆ

ಇವಿಎಂ, ವಿವಿ ಪ್ಯಾಟ್‌ ಮತ್ತು ಕಂಟ್ರೋಲ್‌ ಯುನಿಟ್‌ಗಳನ್ನು ಜಿಲ್ಲಾ ಕೇಂದ್ರದಲ್ಲೇ ಸಂಗ್ರಹಿಸಿ ಇಡಬೇಕು ಎನ್ನುವುದು ಚುನಾವಣ ಆಯೋಗದ ನಿರ್ದೇಶನ. ಹಾಗಾಗಿ ಮಂಗಳೂರಿನಲ್ಲೇ ಉಗ್ರಾಣ ನಿರ್ಮಿಸಲಾಗಿದೆ. ಸದ್ಯ ಉಗ್ರಾಣದಲ್ಲಿರುವ ಮತಯಂತ್ರಗಳನ್ನು ಪ್ರತೀ ತಿಂಗಳು ಎಲ್ಲ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಅಥವಾ ಉಪ ಚುನಾವಣಾಧಿಕಾರಿಯಾಗಿರುವ ಅಪರ ಜಿಲ್ಲಾಧಿಕಾರಿಗಳು ಪರಿಶೀಲಿಸಿ ಕೊಠಡಿಗಳಿಗೆ ಮತ್ತೆ ಮೊಹರು ಮಾಡುತ್ತಾರೆ. ಕೊಠಡಿಗಳ ಕೀಲಿಕೈಗಳು ಈ ಇಬ್ಬರ ಸುಪರ್ದಿಯಲ್ಲೇ ಇರುತ್ತವೆ.

~ಭರತ್‌ ಶೆಟ್ಟಿಗಾರ್‌

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.