ಮಳಿ ಹೆಕ್ಕುವಾಗ ನೀರಲ್ಲಿ ಮುಳುಗಿ ಮಹಿಳೆ ಸಾವು
Team Udayavani, Aug 4, 2023, 12:42 AM IST
ಗಂಗೊಳ್ಳಿ: ಇಲ್ಲಿನ ಪಂಚ ಗಂಗಾವಳಿ ಹೊಳೆಯಲ್ಲಿ ಗಂಗೊಳ್ಳಿಯ ಶೇಷಿ ಖಾರ್ವಿ (60) ಅವರು ಮರು ವಾಯಿ (ಮಳಿ) ತೆಗೆಯುವ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದು, ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಆ. 3 ರಂದು ಸಂಭವಿಸಿದೆ.
ಶೇಷಿ ಮರುವಾಯಿ (ಮಳಿ) ಹೆಕ್ಕುವ ಕೆಲಸ ಮಾಡುತ್ತಿದ್ದು, ಆ. 3ರ ಬೆಳಗ್ಗೆ 9 ಗಂಟೆಯ ಸುಮಾರಿಗೆ ಹೊಳೆಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಮುಳುಗಿದ್ದಾರೆ. ಆ ವೇಳೆ ದೀಪಕ್ ಹಾಗೂ ಸ್ಥಳೀಯರ ಸಹಾಯದಿಂದ ಅವರನ್ನು ಮೇಲಕ್ಕೆ ತಂದಿದ್ದು, ಕೂಡಲೇ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು ಅದಾಗಲೇ ಶೇಷಿ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಪುತ್ರ ಸುಧೀರ್ ಖಾರ್ವಿ ಅವರು ನೀಡಿದ ದೂರಿನಂತೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ
Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !
Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್ ಭೀತಿ
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು