ಆರೋಗ್ಯ ಇಲಾಖೆ ಸಿಬ್ಬಂದಿಗೆ ಆಧಾರ್‌ ಬಯೋಮೆಟ್ರಿಕ್‌!


Team Udayavani, Oct 1, 2019, 3:07 AM IST

arogya

ಬೆಂಗಳೂರು: ಸರ್ಕಾರಿ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವರ್ಗ ಹಾಗೂ ಕಚೇರಿ ನೌಕರರ ಹಾಜರಾತಿ ರುಜುಪಡಿಸುವ ಬಯೋಮೆಟ್ರಿಕ್‌ಗೂ ಆಧಾರ್‌ ಸಂಪರ್ಕಗೊಳಿಸುವುದನ್ನು ಕಡ್ಡಾಯಗೊಳಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಸದ್ಯ ಸರ್ಕಾರಿ ಆಸ್ಪತ್ರೆ ಹಾಗೂ ಕಚೇರಿಗಳಲ್ಲಿ ಸಾಮಾನ್ಯ ಮಾದರಿಯ ಬಯೋಮೆಟ್ರಿಕ್‌ ವ್ಯವಸ್ಥೆ ಇದ್ದು, ಕೆಲವರು ಅದರಿಂದ ತಪ್ಪಿಸಿಕೊಂಡು ಸರಿಯಾದ ಸಮಯಕ್ಕೆ ಹಾಜರಾಗುತ್ತಿಲ್ಲ,

ಜತೆಗೆ ಕೆಲ ವೈದ್ಯರು ಕರ್ತವ್ಯ ಸಮಯದಲ್ಲಿ ಖಾಸಗಿಯಲ್ಲಿ ಕಾರ್ಯನಿರ್ವಹಿಸುತ್ತಿರುವ, ಮನಬಂದ ಸಮಯಕ್ಕೆ ಆಸ್ಪತ್ರೆಗೆ ಬರುವ ಕುರಿತು ಇಲಾಖೆಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಇದಕ್ಕೆ ಪರಿಹಾರ ಕಂಡುಕೊಳ್ಳಲು ಆಧಾರ ಒಳಗೊಂಡ ಬಯೋಮೆಟ್ರಿಕ್‌ (ಎಇಬಿಎಎಸ್‌)ಅಳವಡಿಸಲು ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇನ್ನು ಈ ವ್ಯವಸ್ಥೆ ನಿಯಂತ್ರಣ ಕುರಿತು ರಾಷ್ಟ್ರೀಯ ಮಾಹಿತಿ ಕೇಂದ್ರವು(ಎನ್‌ಐಸಿ) ತಂತ್ರಾಂಶ ಸಿದ್ಧಪಡಿಸುತ್ತಿದ್ದು, ನವೆಂಬರ್‌ನಿಂದ ಈ ಹೊಸ ವ್ಯವಸ್ಥೆ ಜಾರಿಗೆ ಬರುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಸಾಮಾನ್ಯ ಬಯೋಮೆಟ್ರಿಕ್‌ಗಳಲ್ಲಿ ಕೆಳ ಹಂತದ ನೌಕರರ ಅಥವಾ ಗುತ್ತಿಗೆ ನೌಕರರ ಬೆರಳಿನ ಗುರುತು ನೀಡಿ (ನಕಲಿ ಗುರುತು) ತಾವು ಕರ್ತವ್ಯಕ್ಕೆ ಹಾಜರಾಗದಿದ್ದರೂ ಆ ವ್ಯಕ್ತಿಯಿಂದ ನಿಗದಿತ ಸಮಯಕ್ಕೆ ಸರಿಯಾಗಿ ಬಯೋಮೆಟ್ರಿಕ್‌ ಮಾಡಿಸುವ ಸಾಧ್ಯತೆಗಳಿದ್ದವು. ಆದರೆ, ಎಇಬಿಎಎಸ್‌ನಲ್ಲಿ(ಆಧಾರ್‌ ಎನೇಬಲ್ಡ್‌ ಬಯೋಮೆಟ್ರಿಕ್‌ ಅಟೆಂಡೆನ್ಸ್‌ ಸಿಸ್ಟ್‌ಂ) ಆಧಾರ್‌ಗೆ ನೀಡಿರುವ ಬೆರಳಚ್ಚನ್ನೇ ನೀಡಬೇಕಿದೆ. ಜತೆಗೆ ತಂತ್ರಾಂಶವನ್ನು ಎನ್‌ಐಸಿ ನಿರ್ವಹಿಸುತ್ತಿದ್ದು, ಉತ್ಕೃಷ್ಟ ಮಟ್ಟದ್ದಾಗಿರುತ್ತದೆ. ಹೀಗಾಗಿ, ನಕಲು ಮಾಡಲು, ಕರ್ತವ್ಯ ಲೋಪವೆಸಗಲು ಸಾಧ್ಯವಾಗುವುದಿಲ್ಲ ಎನ್ನುತ್ತಾರೆ ಆರೋಗ್ಯ ಇಲಾಖೆ ಅಧಿಕಾರಿಗಳು.

70 ಸಾವಿರ ಸಿಬ್ಬಂದಿಗೆ ಆಧಾರ್‌ ಬಯೋಮೆಟ್ರಿಕ್‌: ರಾಜ್ಯದ 2,359 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 206 ಸಮುದಾಯ ಆರೋಗ್ಯ ಕೇಂದ್ರಗಳು, 146 ತಾಲೂಕು ಆಸ್ಪತ್ರೆಗಳು, 15 ಜಿಲ್ಲಾಸ್ಪತ್ರೆ ಹಾಗೂ 11 ವಿವಿಧ ಮಾದರಿ ಆಸ್ಪತ್ರೆಗಳು ಸೇರಿ ಆರೋಗ್ಯ ಇಲಾಖೆ ಎಲ್ಲಾ ಕಚೇರಿಗಳಲ್ಲೂ ಈ ಹೊಸ ಎಇಬಿಎಎಸ್‌ ವ್ಯವಸ್ಥೆ ಜಾರಿಯಾಗಲಿದೆ. ಇದಕ್ಕಾಗಿ ಸ್ಥಳೀಯ ಮಟ್ಟದಲ್ಲಿಯೇ ಆಧಾರ್‌ ಸಂಸ್ಥೆಯಿಂದ ಅನುಮೋದನೆ ಪಡೆದ ಕಂಪನಿಯ ಹೊಸ ಬಯೋಮೆಟ್ರಿಕ್‌ ಖರೀದಿಸಿ ಅಳವಡಿಸಲಾಗುತ್ತಿದೆ. ವೈದ್ಯರು, ನರ್ಸ್‌, ಲ್ಯಾಬ್‌ ಸಿಬ್ಬಂದಿ, ಫಾರ್ಮಿಸ್ಟ್‌, ಕಚೇರಿಯ ಅಧಿಕಾರಿಗಳು, ಎಲ್ಲಾ ನೌಕರರು, ಗುತ್ತಿಗೆ ನೌಕರರು ಸೇರಿ 70 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳ ಹಾಜರಾತಿಗೆ ಹೊಸ ವ್ಯವಸ್ಥೆ ಅನ್ವಯವಾಗಲಿದೆ.

ಮೊಬೈಲ್‌ಗೆ ವಿಳಂಬ ಕುರಿತ ಸಂದೇಶ: ವೈದ್ಯರು ಅಥವಾ ಸಿಬ್ಬಂದಿ ಕರ್ತವ್ಯಕ್ಕೆ ತಡವಾಗಿ ಹಾಜರಾದರೆ ಕೂಡಲೇ ಎಷ್ಟು ನಿಮಿಷ ತಡವಾಯಿತು ಎಂಬ ಸಂದೇಶ ಬರಲಿದೆ. ಜತೆಗೆ ಆಸ್ಪತ್ರೆಯ ಮುಖ್ಯಸ್ಥರಿಗೆ ಅಥವಾ ಕಚೇರಿ ಮೇಲ್ವರ್ಗದ ಅಧಿಕಾರಿಯು ಮೊಬೈಲ್‌ ಅಥವಾ ಕಂಪ್ಯೂಟರ್‌ ತಂತ್ರಾಂಶ ಬಳಸಿ ವೈದ್ಯರ ಹಾಗೂ ಸಿಬ್ಬಂದಿಯ ಹಾಜರಾತಿ ಪಟ್ಟಿಯನ್ನು ಕ್ಷಣ ಮಾತ್ರದಲ್ಲಿ ನೋಡಬಹುದಾಗಿದೆ. ಸದ್ಯ ವ್ಯವಸ್ಥೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯರು ಅಥವಾ ಸಿಬ್ಬಂದಿ ಸಮಯಪಾಲನೆ ಮಾಡುತ್ತಿಲ್ಲ ಎಂಬ ಕುರಿತು ದೂರು ಬಂದರೆ ಮೊದಲು ಜಿಲ್ಲಾ ವೈದ್ಯಾಧಿಕಾರಿ, ಆನಂತರ ತಾಲೂಕು ವೈದ್ಯಾಧಿಕಾರಿ ಆನಂತರ ಆಸ್ಪತ್ರೆಯ ಮುಖ್ಯಸ್ಥರನ್ನು ಕೇಳಿ ಮಾಹಿತಿ ಪಡೆಯಬೇಕಿತ್ತು. ಆದರೆ, ಹೊಸ ವ್ಯವಸ್ಥೆಯಿಂದ ಬೆಂಗಳೂರು ಕಚೇರಿಯಲ್ಲೆ ಕುಳಿತು ಹಾಜರಾತಿ ಪರಿಶೀಲನೆ ನಡೆಸಬಹುದಾಗಿದೆ.

ಯಾವ ಆಸ್ಪತ್ರೆಯಲ್ಲಿ ಯಾರು ತಡವಾಗಿ ಬಂದರು ಎಂಬೆಲ್ಲ ಮಾಹಿತಿಯನ್ನು ಆಯಾ ವ್ಯಾಪ್ತಿಯ ಅಧಿಕಾರಿಗಳು, ಇಲಾಖೆಯ ಹಿರಿಯ ಅಧಿಕಾರಿಗಳು ಮೊಬೈಲ್‌ ತಂತ್ರಾಂಶ ಸಹಾಯದಿಂದ ಕೂಡಲೇ ನೋಡಬಹುದು. ಸಮಯ ಪಾಲನೆ ಮಾಡುತ್ತಿಲ್ಲ ಎಂಬ ಕುರಿತು ದೂರುಗಳು ತಕ್ಷಣವೇ ಪರಿಶೀಲನೆ ಮಾಡಿ ಕ್ರಮಕೈಗೊಳ್ಳಲೂ ಸಹಾಯಕವಾಗಲಿದೆ.
-ಡಾ.ಟಿ.ಎಸ್‌.ಪ್ರಭಾಕರ್‌, ನಿರ್ದೇಶಕರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ

* ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

6-fusion

UV Fusion: ಇಂಡಿ ಪಂಪ್‌ ಮಟ..

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.