NREGA: ಆಧಾರ್ ಗಡುವು ವಿಸ್ತರಣೆ ಇಲ್ಲ
Team Udayavani, Aug 24, 2023, 9:00 PM IST
ನವದೆಹಲಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ)ಯ ಕಾರ್ಮಿಕರಿಗೆ ವೇತನ ಪಾವತಿಸುವ ಏಕೈಕ ವಿಧಾನವಾಗಿ ಆಧಾರ್ ಕಾರ್ಡ್ ಆಧಾರಿತ ಪಾವತಿ ವ್ಯವಸ್ಥೆ (ಎಬಿಪಿಎಸ್)ಯನ್ನು ಕಡ್ಡಾಯಗೊಳಿಸಲಾಗಿದೆ.
ಈ ವ್ಯವಸ್ಥೆಯನ್ನು ಜಾರಿಗೊಳಿಸಲು ಆಗಸ್ಟ್ 31ರ ವರೆಗೆ ಗಡುವು ನೀಡಲಾಗಿದ್ದು, ಈ ಗಡುವನ್ನು ವಿಸ್ತರಿಸಲಾಗುವುದಿಲ್ಲವೆಂದು ಸರ್ಕಾರಿ ಮೂಲಗಳು ಗುರುವಾರ ತಿಳಿಸಿವೆ. ಈ ಮೊದಲು ಎಬಿಪಿಎಸ್ ಅಳವಡಿಕೆಗೆ ಫೆಬ್ರವರಿ 1ರ ಗಡುವು ನೀಡಲಾಗಿತ್ತು. ಬಳಿಕ ಮಾರ್ಚ್ 31ರ ವರೆಗೆ ವಿಸ್ತರಿಸಲಾಗಿತ್ತು. ನಂತರ ಬೇಡಿಕೆಯ ಮೇರೆಗೆ ಜೂನ್ 30ರವರೆಗೆ, ಬಳಿಕ ಆಗಸ್ಟ್ 31ರವರೆಗೂ ಗಡುವನ್ನು ವಿಸ್ತರಿಸಲಾಗಿದೆ. ಆದರೆ, ಈಗ ನೀಡಿರುವ ಗಡುವು ಅಂತಿಮವಾಗಿದ್ದು, ಈಗಾಗಲೇ ಶೇ.90ರಷ್ಟು ಸಕ್ರಿಯ ಕಾರ್ಮಿಕರ ಖಾತೆಗಳು ಆಧಾರ್ಗೆ ಲಿಂಕ್ ಆಗಿರುವ ಹಿನ್ನೆಲೆಯಲ್ಲಿ ಮತ್ತೆ ಗಡುವು ವಿಸ್ತರಣೆ ಸಾಧ್ಯವಿಲ್ಲವೆಂದು ಗ್ರಾಮಭಿವೃದ್ಧಿ ಸಚಿವಾಲಯ ಮಾಹಿತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್