ಪುನರ್ ರಚನೆಗಾಗಿ ರಾಜ್ಯ, ಜಿಲ್ಲಾ ಘಟಕಗಳನ್ನು ವಿಸರ್ಜಿಸಿದ ಎಎಪಿ
Team Udayavani, Jan 12, 2023, 9:44 PM IST
ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಸಜ್ಜುಗೊಳ್ಳಲು ಆಮ್ ಆದ್ಮಿ ಪಕ್ಷದ ರಾಜ್ಯ ಘಟಕ ಹಾಗೂ ಜಿಲ್ಲಾ ಘಟಕಗಳನ್ನು ವಿಸರ್ಜಿಸಲಾಗಿದ್ದು, ಸದ್ಯದಲ್ಲೇ ಕ್ರಿಯಾಶೀಲ ತಂಡವನ್ನು ರಚಿಸಲಾಗುತ್ತದೆ ಎಂದು ಪಕ್ಷದ ರಾಜ್ಯ ಚುನಾವಣ ಉಸ್ತುವಾರಿ ಹಾಗೂ ದಿಲ್ಲಿ ಶಾಸಕ ದಿಲೀಪ್ ಪಾಂಡೆ ತಿಳಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಎಪಿಯು ವಿಧಾನಸಭಾ ಚುನಾವಣೆಗೆ ಸಮರೋಪಾದಿಯಲ್ಲಿ ಸಿದ್ಧಗೊಳ್ಳಲಿದೆ. ಈವರೆಗಿದ್ದ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳ ತಂಡವನ್ನು ವಿಸರ್ಜಿಸಲಾಗಿದ್ದು, ಗ್ರಾಮ ಸಂಪರ್ಕ ಅಭಿಯಾನ ಎಂಬ ರಾಜ್ಯವ್ಯಾಪಿ ಅಭಿಯಾನದ ಮೂಲಕ ಕಳೆದ ಐದು ತಿಂಗಳಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸಿಕೊಂಡಿದೆ. ಈ ಅಭಿಯಾನದಲ್ಲಿ ರಾಜ್ಯದ ಸಾವಿರಾರು ಕಾರ್ಯಕರ್ತರು ಹಾಗೂ ಬೆಂಬಲಿಗರ ಜತೆ ಆಮ್ ಆದ್ಮಿ ಪಕ್ಷ ಸಂಪರ್ಕ ಸಾಧಿಸಿದೆ. ಬಿಜೆಪಿಯ ಭ್ರಷ್ಟ ಹಾಗೂ ಅಸಮರ್ಥ ಸರಕಾರವನ್ನು ಮಣಿಸಲಿದ್ದೇವೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.