ಅಭಿಷೇಕ್ ಬ್ಯಾನರ್ಜಿ ಬೆಂಗಾವಲು ಪಡೆ ಮೇಲೆ ದಾಳಿ: ಬಿಜೆಪಿ ವಿರುದ್ಧ ಆರೋಪ
Team Udayavani, Aug 2, 2021, 10:00 PM IST
ಅಗರ್ತಲಾ: ತ್ರಿಪುರಾದ ಅಗರ್ತಲಾಗೆ ಭೇಟಿ ನೀಡಿದ್ದ ವೇಳೆ ಬೆಂಗಾವಲು ಪಡೆ (ವಾಹನ) ಮೇಲೆ ಹಲ್ಲೆ ನಡೆಸಿದ್ದಾರೆಂದು ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ವಿಡಿಯೊವನ್ನು ಟ್ವೀಟ್ ಮಾಡಿದ್ದು, ದಾಳಿ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಆರೋಪಿಸಿದ್ದಾರೆ.
ವಿಡಿಯೊದಲ್ಲಿ ಬಿಜೆಪಿ ಧ್ವಜಗಳನ್ನು ಹೊತ್ತ ಕೆಲವರು ಬ್ಯಾನರ್ಜಿ ಬೆಂಗಾವಲು ವಾಹನದ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಕುರಿತು ಸಂಸತ್ತಿನಲ್ಲಿ ವಿಷಯ ಪ್ರಸ್ತಾಪಿಸುವುದಾಗಿ ತಿಳಿಸಿದ ಟಿಎಂಸಿ ರಾಜ್ಯಾಸಭಾ ಸದಸ್ಯ ಡೆರೆಕ್ ಒ ಬಿಯಾನ್, ಭಾನುವಾರಷ್ಟೆ ಅಗರ್ತಲಾದಲ್ಲಿ ಟಿಎಂಸಿ ಪೋಸ್ಟರ್ಗಳನ್ನು ಬಿಜೆಪಿ ಕಾರ್ಯಕರ್ತರು ಧ್ವಂಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
2023ರ ಚುನಾವಣೆ ಹಿನ್ನೆಲೆ ಮಮತಾ ಬ್ಯಾನರ್ಜಿ ಸೋದರಳಿಯ ಅಭಿಷೇಕ್ ತ್ರಿಪುರಾಗೆ ಭೇಟಿ ನೀಡಿ ಬೆಂಬಲವನ್ನು ಕೋರಿದ್ದಾರೆ.
ಇದನ್ನೂ ಓದಿ :ಕೋವಿಡ್ : ರಾಜ್ಯದಲ್ಲಿ ಸೋಂಕಿನ ಸಂಖ್ಯೆ ಇಳಿಕೆ : ಇಂದು 1285 ಹೊಸ ಪ್ರಕರಣ ಪತ್ತೆ