ಉಡುಪಿ ಜಿಲ್ಲೆಗೆ ಹೊರ ಜಿಲ್ಲೆಗಳಿಂದ 50 ಸಾವಿರ ಜನರ ಆಗಮನ ನಿರೀಕ್ಷೆ
ಹೊಸಂಗಡಿ ಗಡಿ ಚೆಕ್ಪೋಸ್ಟ್ನಲ್ಲಿ ಕಟ್ಟುನಿಟ್ಟಿನ ತಪಾಸಣೆ
Team Udayavani, May 4, 2020, 5:55 AM IST
ಸಿದ್ದಾಪುರ: ಲಾಕ್ಡೌನ್ ಸಡಿಲಿಕೆ ಬಳಿಕ ವಿವಿಧ ಜಿಲ್ಲೆ ಹಾಗೂ ರಾಜ್ಯಗಳಲ್ಲಿ ಸಿಲುಕಿಕೊಂಡಿರುವ ಉಡುಪಿ ಮೂಲದ 50 ಸಾವಿರ ಮಂದಿ ಜಿಲ್ಲೆಗೆ ಆಗಮಿಸುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ರವಿವಾರ ಬೆಳಗ್ಗಿನ ಜಾವದಿಂದ ಉಡುಪಿ ಜಿಲ್ಲೆಯ ಗಡಿ ಭಾಗವಾದ ಹೊಸಂಗಡಿ ಚೆಕ್ ಪೋಸ್ಟ್ನಲ್ಲಿ ಪೊಲೀಸರಿಂದ ಕಟ್ಟುನಿಟ್ಟಿನ ತಪಾಸಣೆ ನಡೆಯುತ್ತಿದೆ.
ಆರೋಗ್ಯ ಇಲಾಖೆ, ಶಿಕ್ಷಕರು, ಕಂದಾಯ, ಅರಣ್ಯ ಇಲಾಖೆಯ ಸಿಬಂದಿ ಹಗಲು ರಾತ್ರಿ ಪೊಲೀಸ್ ಇಲಾಖೆಯೊಂದಿಗೆ ಕರ್ತವ್ಯ ನಿರತರಾಗಿದ್ದಾರೆ.
50 ಸಾವಿರ ಜನರ ಆಗಮನ ನಿರೀಕ್ಷೆ ಹಿನ್ನೆಲೆಯಲ್ಲಿ ಈಗಿರುವ ಚೆಕ್ಪೋಸ್ಟ್ ನೊಂದಿಗೆ ಇನ್ನೊಂದು ಚೆಕ್ಪೋಸ್ಟ್ ತೆರೆಯಲಾಗಿದೆ. ಹೊರ ಜಿಲ್ಲೆ ಹಾಗೂ ರಾಜ್ಯದಿಂದ ಬರುವ ಪ್ರತಿಯೊಬ್ಬರನ್ನೂ ತಪಾಸಣೆ ನಡೆಸಿ ಬಿಡಲಾಗುತ್ತಿದೆ. ದಟ್ಟಣೆ ನಿಯಂತ್ರಿಸಲು ಎರಡು ಚೆಕ್ಪೋಸ್ಟ್ ಮಾಡಲಾಗಿದೆ.
19 ಸಿಬಂದಿ ಇದ್ದಾರೆ. ಆರೋಗ್ಯ ಇಲಾಖೆಯಿಂದ ಇಬ್ಬರು ಡಾಕ್ಟರ್, ಮೂವರು ಆರೋಗ್ಯ ಸಹಾಯಕರು, ಗ್ರಾಮ ಸಹಾಯಕರು, ಒಬ್ಬರು ಅರಣ್ಯ ವೀಕ್ಷಕರು, ಇಬ್ಬರು ಶಿಕ್ಷಕರು, ಇಬ್ಬರು ಪೊಲೀಸ್ ಉಪನಿರೀಕ್ಷಕರು, ಇಬ್ಬರು ಎಎಸ್ಐ, ಇಬ್ಬರು ಹೆಡ್ ಕಾನ್ಸ್ಟೆಬಲ್ಗಳು ಹಾಗೂ 4 ಜನ ಪೊಲೀಸ್ ಸಿಬಂದಿ ಇದ್ದಾರೆ. ಹೊಸ ಚೆಕ್ಪೋಸ್ಟ್ಗೆ ಹೆಚ್ಚಿನ ಸಿಬಂದಿ ಅಗತ್ಯವಿದೆ.
ಕಾಲ್ನಡಿಗೆಯವರಿಂದ ತೊಂದರೆ
ಪರವಾನಿಗೆ ಇಲ್ಲದಿದ್ದವರನ್ನು ಬಿಡದೆ ಇರುವುದರಿಂದ ಚೆಕ್ಪೋಸ್ಟ್ನ ತುಸು ದೂರದಿಂದ ಬಾಳೆಬರೆ ಘಾಟಿಯ ಒಂದು ಬದಿಯಿಂದ ಕಾಲ್ನಡಿಗೆಯಲ್ಲಿ ಹೊಸಂಗಡಿ ಪೇಟೆಗೆ ಬರುತ್ತಿದ್ದಾರೆ. ಹೀಗೆ ಬಂದವರನ್ನು ಸಂಬಂಧಿಕರು ವಾಹನಗಳಲ್ಲಿ ಕರೆದುಕೊಂಡು ಹೋಗುತ್ತಿದ್ದಾರೆ. ಹೀಗೆ ಬರುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು ಪೊಲೀಸರಿಗೆ ಹಾಗೂ ಆರೋಗ್ಯ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ