ಎಲ್ಲದಕ್ಕಿಂತ ಹೆಚ್ಚಾಗಿ ಪುನೀತ್‌ ಒಳ್ಳೆಯ ವ್ಯಕ್ತಿ: ನಟ ಸುದೀಪ್‌


Team Udayavani, Oct 31, 2021, 6:10 AM IST

ಎಲ್ಲದಕ್ಕಿಂತ ಹೆಚ್ಚಾಗಿ ಪುನೀತ್‌ ಒಳ್ಳೆಯ ವ್ಯಕ್ತಿ: ನಟ ಸುದೀಪ್‌

ಪುನೀತ್‌ ಅಗಲಿಕೆ ತುಂಬಲಾರದ ನಷ್ಟ. ಚಿಕ್ಕವಯಸ್ಸಿನಲ್ಲಿಯೇ ಅವರ ಸಿನಿಮಾ ಪ್ರಯಾಣ ಶುರುವಾಗಿತ್ತು. ಶಿವಮೊಗ್ಗದಲ್ಲಿ ನಾನು ಅವರನ್ನು ಮೊದಲ ಬಾರಿಗೆ ಭೇಟಿ ಮಾಡುವ ಮೊದಲೇ ಅವರು ಸ್ಟಾರ್‌ ಆಗಿಬಿಟ್ಟಿದ್ದರು. ನಾನು ಅಪ್ಪುವನ್ನು ಮೊದಲಿಗೆ ನೋಡಿದ್ದು, “ಭಾಗ್ಯವಂತ’ ಸಿನಿಮಾದ ಯಶಸ್ಸಿನ ಪ್ರವಾಸಕ್ಕೆಂದು ಶಿವಮೊಗ್ಗಕ್ಕೆ ಬಂದಿದ್ದಾಗ. ಸಿನಿಮಾ ರಂಗದವರೊಂದಿಗೆ ನನ್ನ ತಂದೆ ಆತ್ಮೀಯರಾಗಿದ್ದರಿಂದ, ಚಿತ್ರಮಂದಿರ ಭೇಟಿ ಬಳಿಕ ನಮ್ಮ ಮನೆಗೆ ಊಟಕ್ಕೆಂದು ಪುನೀತ್‌ ಅವರನ್ನ ಕರೆದುಕೊಂಡು ಬರಲಾಗಿತ್ತು. ಅವರ ಜೊತೆಗೆ ಇನ್ನೂ ಕೆಲವರು ಬಂದಿದ್ದರು. ಆಗಲೇ ನಾವಿಬ್ಬರೂ ಮೊದಲ ಬಾರಿ ಭೇಟಿಯಾಗಿದ್ದೆವು.

ನಾವಿಬ್ಬರೂ ಬಹುತೇಕ ಒಂದೇ ವಯಸ್ಸಿನವರಾಗಿದ್ದರಿಂದ, ಮೊದಲ ಭೇಟಿಯಲ್ಲೇ ಆತ್ಮೀಯರಾದೆವು. ಅಪ್ಪು ನಮ್ಮ ಮನೆಗೆ ಬಂದಿದ್ದಾಗ ಊಟಕ್ಕಿಂತಲೂ ಹೆಚ್ಚಾಗಿ, ನನ್ನ ಬಳಿ ಇದ್ದ ಆಟಿಕೆಗಳ ಮೇಲೆ ಅವನ ಗಮನ ಹೆಚ್ಚಾಗಿ ಇತ್ತು. ಅಪ್ಪು ಜೊತೆಗೆ ಬಂದಿದ್ದ ಮಹಿಳೆಯಂತೂ ಅಪ್ಪು ಹಿಂದೆ ಸುತ್ತುತ್ತ ಊಟ ಮಾಡಿಸಲು ಯತ್ನಿಸುತ್ತಿದ್ದಿದ್ದು ಇಂದಿಗೂ ನನಗೆ ನೆನಪಿದೆ. ನಾವಿಬ್ಬರೂ ಅಂದು ಬಹಳ ಆಟವಾಡಿ ಖುಷಿಯಾಗಿದ್ದೆವು. ಪುನೀತ್‌ ನಮ್ಮ ಮನೆಗೆ ಬಂದ ದಿನ ಅಕ್ಕಪಕ್ಕದ ಮಕ್ಕಳು ಸೇರಿದಂತೆ ಸಾಕಷ್ಟು ಜನ ಅವರನ್ನು ನೋಡಲು ನಮ್ಮ ಮನೆಯ ಸುತ್ತ ಸೇರಿದ್ದರು. ಯಾಕಂದ್ರೆ, ಅವರು ಲೆಜೆಂಡ್‌ ಡಾ| ರಾಜ ಕುಮಾರ್‌ ಅವರ ಪುತ್ರ. ಪುನೀತ್‌ ಅದಾಗಲೇ ಸ್ಟಾರ್‌ ಆಗಿದ್ದವರು. ಆ ಸ್ಟಾರ್‌ ಹುಡುಗನನ್ನು ನೋಡಲು ಜನ ನಮ್ಮ ಮನೆಯ ಸುತ್ತಮುತ್ತ ದೊಡ್ಡ ಸಂಖ್ಯೆಯಲ್ಲಿ ಸೇರಿದ್ದರು.

ಇದಾದ ನಂತರ ನಾವು ಕೆಲವು ಬಾರಿ ಭೇಟಿಯಾದೆವು. ಆ ನಂತರ ನಾವಿಬ್ಬರೂ ಒಂದೇ ಸಿನಿಮಾ ರಂಗದಲ್ಲಿ ನಟಿಸುತ್ತ ಸಹೋದ್ಯೋಗಿಗಳಾದೆವು. ಪುನೀತ್‌ ನನಗೆ ಒಳ್ಳೆಯ ಗೆಳೆಯ ಮಾತ್ರವಲ್ಲದೆ, ಒಳ್ಳೆಯ ಪ್ರತಿಸ್ಪರ್ಧಿಯೂ ಆಗಿದ್ದರು. ಪುನೀತ್‌ ನೀಡುತ್ತಿದ್ದ ಸ್ಪರ್ಧೆ ನನಗೆ ಬಹಳ ಇಷ್ಟವಾಗುತ್ತಿತ್ತು, ಅದರಿಂದಾಗಿ ನಾನೂ ಸಹ ಒಳ್ಳೆಯ ಸಿನಿಮಾಗಳನ್ನು ಮಾಡಲು ಸಾಧ್ಯವಾಯಿತು. ಪುನೀತ್‌ ಒಳ್ಳೆಯ ನಟ, ಅತ್ಯುತ್ತಮ ಡ್ಯಾನ್ಸರ್‌, ಫೈಟರ್‌ ಎಲ್ಲದಕ್ಕಿಂತ ಹೆಚ್ಚಾಗಿ ಒಳ್ಳೆಯ ವ್ಯಕ್ತಿ. ಪುನೀತ್‌ ಅವರಿದ್ದ ಕಾಲದಲ್ಲಿಯೇ ನಾನು ನಟನಾಗಿ ಬಂದಿರುವುದಕ್ಕೆ ನನಗೆ ಹೆಮ್ಮೆ ಇದೆ.

ಇದನ್ನೂ ಓದಿ:ಪುನೀತ್ ಅಂತಿಮ ನಮನ : ಪುತ್ರಿಯ ಕಂಡು ಕಂಠೀರವದಲ್ಲಿ ಕಣ್ಣೀರ ಕೋಡಿ

ಇಂದು ಅವರಿಲ್ಲದೆ ಚಿತ್ರರಂಗ ಅಪೂರ್ಣವಾಗಿದೆ. ಸಮಯ ಬಹಳ ಕ್ರೂರಿ ಎನಿಸುತ್ತಿದೆ. ಪ್ರಕೃತಿ ಕೂಡ ಸಂತಾಪ ಸೂಚಿಸಿ ಅಳುತ್ತಿದೆ. ಇಡೀ ದಿನ ಶೋಕದಿಂದ ಕೂಡಿದೆ. ಕಪ್ಪು ಮೋಡಗಳು ಕವಿದು ದಿನವನ್ನು ಖೇದ ಕರಗೊಳಿಸಿವೆ. ಬೆಂಗಳೂರಿಗೆ ಬಂದಿಳಿದು ಪುನೀತ್‌ ಅವರನ್ನು ಮಲಗಿಸಿದ್ದ ಕಡೆಗೆ ಹೋಗುತ್ತಿದ್ದಾಗ, ನನ್ನ ಉಸಿರಾಟ ನನಗೆ ಅರಿವಿಲ್ಲದಂತೆ ಭಾರವಾಗತೊಡಗಿತು. ನಾನು ವಾಸ್ತವದ ಕಡೆಗೆ ಸಾಗುತ್ತಿದ್ದರೂ, ಅದನ್ನು ಒಪ್ಪಿಕೊಳ್ಳಲು ಮನಸ್ಸು ತಯಾರಿರಲಿಲ್ಲ.

ಪುನೀತ್‌ ಹಾಗೆ ಮಲಗಿರುವುದು ನೋಡಿ ಅಲ್ಲಿದ್ದ ಎಲ್ಲರಿಗೂ ಬೆಟ್ಟವನ್ನೇ ಎದೆಯ ಮೇಲೆ ಹೊತ್ತಂತ ಅನುಭವ ಆಗುತ್ತಿತ್ತು. ಏಕೆ ಹೀಗಾಯ್ತು? ಹೇಗಾಯ್ತು ಎಂಬ ಪ್ರಶ್ನೆಗಳು ಎಲ್ಲರ ಮನದಲ್ಲಿದ್ದವು. ನನ್ನ ಗೆಳೆಯ, ನನ್ನ ಸಹೋದ್ಯೋಗಿ ಪುನೀತ್‌…ಆತ ಇರಬಾರದ ಸ್ಥಿತಿಯಲ್ಲಿದ್ದ. ಅವರನ್ನ ಹೆಚ್ಚು ಹೊತ್ತು ನನ್ನಿಂದ ನೋಡಲು ಸಾಧ್ಯವಾಗಲಿಲ್ಲ. ಆ ನೋಟ ನನಗಿನ್ನೂ ಕಾಡುತ್ತಲೇ ಇದೆ.

ಶಿವಣ್ಣನನ್ನು ಆ ಸ್ಥಿತಿಯಲ್ಲಿ ನೋಡಿದ್ದು ಇನ್ನೂ ನೋವಾಯಿತು. “ಪುನೀತ್‌ ನನಗಿಂತ 13 ವರ್ಷ ಚಿಕ್ಕವನು. ಇದೇ ತೋಳಲ್ಲಿ ಅವನನ್ನ ಎತ್ತಿ ಆಡಿಸಿದ್ದೇನೆ. ನಾನು ಇಲ್ಲಿಯವರೆಗೂ ಸಾಕಷ್ಟು ನೋಡಿದ್ದೇನೆ. ನಾನು ಇನ್ನೇನು ನೋಡೋಕೆ ಇದೆ’ ಅಂತ ಶಿವಣ್ಣ ನನಗೆ ಹೇಳಿದರು. ಆ ಮಾತು ಈಗಲೂ ನನ್ನನ್ನ ಕಾಡುತ್ತಿದೆ. ಎಲ್ಲರಿಗೂ ತೀವ್ರ ಆಘಾತವಾಗಿದೆ. ಯಾರಿಗೂ ಸತ್ಯವನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಈ ಕಹಿ ಸತ್ಯವನ್ನು ಅರಗಿಸಿಕೊಳ್ಳಲು ಎಲ್ಲರಿಗೂ ಇನ್ನೂ ಹೆಚ್ಚು ಸಮಯ ತೆಗೆದುಕೊಳ್ಳಲಿದೆ. ಪುನೀತ್‌ ಅಗಲಿಕೆಯಿಂದ ಖಾಲಿಯಾಗಿರುವ ಸ್ಥಾನವನ್ನು ಬೇರೆ ಯಾರೂ ತುಂಬಲು ಸಾಧ್ಯವಿಲ್ಲ. ಆ ಸ್ಥಾನ ಕೇವಲ ಪುನೀತ್‌ ಎಂಬ ಅದ್ಭುತ ಮನುಷ್ಯನಿಗಾಗಿ ಮಾತ್ರವೇ ಮೀಸಲು. ಅವರ ಆತ್ಮಕ್ಕೆ ಶಾಂತಿ ಸಿಗಲಿ.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.