ನೆರೆ ಪೀಡಿತ ಮಕ್ಕಳಿಗೆ ಶೈಕ್ಷಣಿಕ ದಾಖಲೆ ಉಚಿತ


Team Udayavani, Aug 20, 2019, 3:10 AM IST

nere pidita

ಬೆಂಗಳೂರು: ಪ್ರವಾಹ ಪೀಡಿತ ಜಿಲ್ಲೆಗಳ ಪಿಯು ವಿದ್ಯಾರ್ಥಿಗಳಿಗೆ ದ್ವಿಪ್ರತಿ ಅಂಕಪಟ್ಟಿ ಮತ್ತು ಇತರೆ ಶೈಕ್ಷಣಿಕ ದಾಖಲೆಗಳನ್ನು ತ್ವರಿತವಾಗಿ, ಶುಲ್ಕ ರಹಿತವಾಗಿ ಒದಗಿಸುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದೆ.

ಪ್ರವಾಹ ಮತ್ತು ಭೀಕರ ಮಳೆಯಿಂದ ಪ್ರಥಮ ಅಥವಾ ದ್ವಿತೀಯ ಪಿಯು ವಿದ್ಯಾರ್ಥಿಗಳ ಅಂಕಪಟ್ಟಿ ಸಹಿತವಾಗಿ ಯಾವುದೇ ಶೈಕ್ಷಣಿಕ ದಾಖಲೆ ಹಾನಿಯಾಗಿದ್ದರೆ, ಅಂತಹ ವಿದ್ಯಾರ್ಥಿಗಳಿಗೆ ತ್ವರಿತವಾಗಿ ದಾಖಲೆಗಳನ್ನು ಒದಗಿಸಬೇಕು. ಶೈಕ್ಷಣಿಕ ದಾಖಲೆಗೆ ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿಯನ್ನು ನಿಯಮಾ ನುಸಾರವಾಗಿ ಸಂಬಂಧಪಟ್ಟ ಕಾಲೇಜು ಹಾಗೂ ಉಪನಿರ್ದೇಶಕರು ಇಲಾಖೆಗೆ ಸಲ್ಲಿಸಿದ ತಕ್ಷಣವೇ ವಿದ್ಯಾರ್ಥಿಗಳಿಗೆ ದ್ವಿಪ್ರತಿ ಅಂಕಪಟ್ಟಿ ಹಾಗೂ ಇತರೆ ಶೈಕ್ಷಣಿಕ ದಾಖಲೆಗಳನ್ನು ಶೀಘ್ರವೇ ನೀಡಲಾಗುತ್ತದೆ ಎಂದು ಇಲಾಖೆ ತಿಳಿಸಿದೆ.

ಪ್ರವಾಹ ಪೀಡಿತ ಜಿಲ್ಲೆಗಳ ಉಪನಿರ್ದೇಶಕರು, ತಮ್ಮ ಜಿಲ್ಲಾ ವ್ಯಾಪ್ತಿಗೆ ಬರುವ ಎಲ್ಲ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಈ ಬಗ್ಗೆ ಮಾಹಿತಿ ನೀಡಬೇಕು. ವಿದ್ಯಾರ್ಥಿಗಳು ಅಥವಾ ಪಾಲಕ, ಪೋಷಕರು ಅಂಕಪಟ್ಟಿ ಹಾಗೂ ಶೈಕ್ಷಣಿಕ ಮಾಹಿತಿಗಾಗಿ ಇಲಾಖೆಯ ಕೇಂದ್ರ ಕಚೇರಿಗೆ ಹೋಗಬೇಕಾಗಿಲ್ಲ. ಸಂಬಂಧಪಟ್ಟ ಜಿಲ್ಲಾ ಉಪನಿರ್ದೇಶಕರ ಮೂಲಕ ಅರ್ಜಿ ಸಲ್ಲಿಸಿದರೆ, ತಕ್ಷಣವೇ ದಾಖಲೆಗಳನ್ನು ಕಳುಹಿಸಿಕೊಡಲಾಗುತ್ತದೆ. ಇನ್ನು ಕೆಲವು ದಾಖಲೆಗಳನ್ನು ಜಿಲ್ಲಾ ಹಂತದಲ್ಲೇ ಹಂಚಿಕೆ ಮಾಡಲು ಇಲಾಖೆ ಸೂಚನೆ ನೀಡಿದೆ.

ಮೂಲಸೌಕರ್ಯ ಅಭಿವೃದ್ಧಿಗೆ ಉಸ್ತುವಾರಿ ಸಮಿತಿ: ಪ್ರವಾಹ ಪೀಡಿತ ಜಿಲ್ಲೆಗಳ ಸರ್ಕಾರಿ ಖಾಸಗಿ ಪಪೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಮೂಲ ಸೌಲಭ್ಯಗಳ ಸುಧಾರಣೆಗೆ ಜಿಲ್ಲಾ ಉಪನಿರ್ದೇಶಕರು ಹಾಗೂ ಹಿರಿಯ ಪ್ರಾಂಶುಪಾಲರನ್ನು ಒಳಗೊಂಡ ಉಸ್ತುವಾರಿ ಸಮಿತಿ ರಚಿಸುವುದಾಗಿ ಪಿಯು ಇಲಾಖೆ ತಿಳಿಸಿದೆ. ಪ್ರವಾಹ ಮತ್ತು ಭೀಕರ ಮಳೆ ಹಾನಿಯಿಂದಾಗಿ ಕೆಲವು ಜಿಲ್ಲೆಗಳಲ್ಲಿ ಅಪಾರ ಸಂಖ್ಯೆಯಲ್ಲಿ ಪಿಯು ಕಾಲೇಜು ಕಟ್ಟಡಗಳಿಗೆ ಹಾನಿಯಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಗೆ ಸಮಸ್ಯೆಯಾಗುತ್ತಿದೆ.

ಹೀಗಾಗಿ ಪ್ರವಾಹ ಪೀಡಿತ ಜಿಲ್ಲೆಗಳ ಪಿಯು ಕಾಲೇಜಿನ ಮೂಲ ಸೌಲಭ್ಯಗಳು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ಸುಧಾರಣೆಗಾಗಿ ಇಲಾಖೆ ಸಾಕಷ್ಟು ಕ್ರಮ ತೆಗೆದುಕೊಳ್ಳುತ್ತಿದೆ. ಈ ಕ್ರಮಗಳ ಅನುಷ್ಠಾನ ಮತ್ತು ಹೆಚ್ಚುವರಿ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಉಸ್ತುವಾರಿ ನೋಡಿಕೊಳ್ಳಲು ಮತ್ತು ಇಲಾಖೆಗೆ ಮಾಹಿತಿ ಒದಗಿಸಲು ಉಸ್ತುವಾರಿ ಸಮಿತಿ ರಚಿಸಲಾಗಿದೆ. ಪ್ರವಾಹ ಪೀಡಿತ ಹಾಗೂ ಭೀಕರ ಮಳೆಹಾನಿಗೆ ತುತ್ತಾಗಿರುವ ಜಿಲ್ಲೆಗಳಲ್ಲಿ ಆಯಾ ಜಿಲ್ಲೆಯ ಉಪನಿರ್ದೇಶಕರ ಅಧ್ಯಕ್ಷತೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಪಿಯು ಕಾಲೇಜಿನ ಐವರು ಪ್ರಾಂಶುಪಾಲರನ್ನು ಒಳಗೊಂಡಿರುವ ಸಮಿತಿ ರಚನೆಗೆ ಇಲಾಖೆ ನಿರ್ದೇಶಿಸಿದೆ. ಶೈಕ್ಷಣಿಕ ಹಿತದೃಷ್ಟಿಯಿಂದ ಅಗತ್ಯಕ್ರಮ ತೆಗೆದುಕೊಳ್ಳಲು ಈ ಸಮಿತಿಗೆ ಅಧಿಕಾರ ನೀಡಲಾಗಿದೆ ಎಂದು ಇಲಾಖೆ ತಿಳಿಸಿದೆ

23ರವರೆಗೆ ಪಿಯು ಸೇರಲು ಅವಕಾಶ
ಬೆಂಗಳೂರು:
ಪ್ರವಾಹ ಹಾಗೂ ಭೀಕರ ಮಳೆಯಿಂದ ಪಿಯುಸಿಗೆ ಸೇರಿಕೊಳ್ಳಲು ಸಾಧ್ಯವಾಗದ 17 ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಆ.23ರವರೆಗೂ ವಿಶೇಷ ಪ್ರವೇಶಾವಕಾಶ ಕಲ್ಪಿಸಲಾಗಿದೆ. ಎಸ್ಸೆಸ್ಸೆಲ್ಸಿ ಹಾಗೂ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಪ್ರಥಮ ಪಿಯುಸಿಗೆ ವಿಶೇಷ ದಂಡ ಶುಲ್ಕ ಪಾವತಿಸಿ ದಾಖಲಾಗಲು ಆ.8 ಕೊನೆಯ ದಿನವಾಗಿತ್ತು. ರಾಜ್ಯದ 17 ಜಿಲ್ಲೆಗಳಲ್ಲಿ ನೆರೆ ಆವರಿಸಿದ ಕಾರಣ ಈ ಜಿಲ್ಲೆಗಳ ಅರ್ಹ ವಿದ್ಯಾರ್ಥಿಗಳು ವಿಶೇಷ ದಂಡಶುಲ್ಕ ಪಾವತಿಸಿ ಆ.23ರೊಳಗೆ ದಾಖಲಾತಿ ಪಡೆಯಬಹುದು. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲು ಕಾಲೇಜಿನ ಪ್ರಾಂಶುಪಾಲರಿಗೆ ಇಲಾಖೆ ನಿರ್ದೇಶಿಸಿದೆ.

ಸಂತ್ರಸ್ತರ ನೆರವಿಗೆ 195 ಕೋಟಿ ಬಿಡುಗಡೆ
ಬೆಂಗಳೂರು: ರಾಜ್ಯದ 22 ಜಿಲ್ಲೆಗಳಲ್ಲಿ ಉಂಟಾಗಿರುವ ಪ್ರವಾಹ ಪೀಡಿತ ಪ್ರದೇಶಗಳ ಸಂತ್ರಸ್ತರಿಗೆ ಬಟ್ಟೆ ಸೇರಿ ಅಗತ್ಯ ಸಾಮಗ್ರಿ ಒದಗಿಸಲು ಸರ್ಕಾರ 195 ಕೋಟಿ ರೂ. ಬಿಡುಗಡೆ ಮಾಡಿದೆ. ಪ್ರವಾಹ ಪೀಡಿತ ತಾಲೂಕುಗಳ ಸಂತ್ರಸ್ತರಿಗೆ ಬಟ್ಟೆ ಹಾಗೂ ದಿನ ಬಳಕೆಯ ವಸ್ತುಗಳಿಗಾಗಿ ಪ್ರತಿ ಕುಟುಂಬಕ್ಕೆ 10 ಸಾವಿರ ರೂ. ನಂತೆ ವಿತರಿಸಲು ರಾಜ್ಯ ವಿಪತ್ತು ನಿರ್ವಹಣಾ ನಿಧಿಯಡಿ ಸರ್ಕಾರ ಹೆಚ್ಚುವರಿ ಪಾಲಿನ ಅನುದಾನದಿಂದ 80 ಕೋಟಿ ರೂ. ಮಂಜೂರು ಮಾಡಿದ್ದು, ಇದೀಗ 195 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಜತೆಗೆ, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳಿಗಾಗಿ 115 ಕೋಟಿ ರೂ. ಅನುದಾನ ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಿದೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.