ಗ್ರಾಹಕರಿಗೆ ಖಾತೆಯ ಚಿಂತೆ; ಸಿಬಂದಿಗೆ ಕೋವಿಡ್ 19 ಭೀತಿ!

ಜನಧನ್‌ ಖಾತೆ ಖಾತ್ರಿಗೆ ಬ್ಯಾಂಕ್‌ಗಳತ್ತ ಗ್ರಾಹಕರ ದೌಡು

Team Udayavani, Apr 10, 2020, 6:45 AM IST

ಗ್ರಾಹಕರಿಗೆ ಖಾತೆಯ ಚಿಂತೆ; ಸಿಬಂದಿಗೆ ಕೋವಿಡ್ 19 ಭೀತಿ!

ಮಂಗಳೂರು/ ಉಡುಪಿ: ಲಾಕ್‌ಡೌನ್‌ ಸಂದರ್ಭ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವವರ ನೆರವಿಗೆ ಧಾವಿಸಿರುವ ಕೇಂದ್ರ ಸರಕಾರವು ಗರೀಬ್‌ ಕಲ್ಯಾಣ ಪ್ಯಾಕೇಜ್‌ ಅಡಿಯಲ್ಲಿಜನಧನ್‌ ಬ್ಯಾಂಕ್‌ ಖಾತೆಗಳಿಗೆ 500 ರೂ. ಜಮೆ ಮಾಡಿದೆ. ಇತ್ತ ಖಾತೆ ಖಾತ್ರಿ ಮತ್ತು ಹಣ ಹಿಂಪಡೆಯುವಿಕೆಗಾಗಿ ಬ್ಯಾಂಕ್‌ಗಳಿಗೆ ದೌಡಾಯಿಸುವ ಗ್ರಾಹಕರ ಸಂಖ್ಯೆ ಹೆಚ್ಚಾಗಿದೆ. ಈ ಸಂದರ್ಭ ಜನತೆ ಕನಿಷ್ಠ ಸುರಕ್ಷಾ ನಿಯಮಗಳನ್ನೂ ಪಾಲಿಸದಿರುವುದು ಬ್ಯಾಂಕ್‌ ಸಿಬಂದಿಗೆ ತಲೆನೋವಾಗಿ ಪರಿಣಮಿಸಿದೆ.

ನಮ್ಮ ಜನಧನ ಖಾತೆ ಸರಿಯಾಗಿದೆಯೋ ಇಲ್ಲವೋ; ನಮಗೆ ಹಣ ಬರುತ್ತದೋ ಇಲ್ಲವೋ ಎಂಬ ಚಿಂತೆ ಹಲವರಲ್ಲಿದ್ದು ಬ್ಯಾಂಕ್‌ಗಳಿಗೆ ಧಾವಿಸಿ ಗೊಂದಲ ನಿವಾರಿಸಿಕೊಳ್ಳುತ್ತಿದ್ದಾರೆ. ಇನ್ನೊಂದೆಡೆ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಹೊರ ಊರುಗಳಿಂದ ಊರಿಗೆ ಬಂದಿರುವ ಕೆಲವರು ಊರಿನಲ್ಲಿ ಚಾಲ್ತಿಯಲ್ಲಿರದ ಖಾತೆಗಳಿಗೆ ಮರುಜೀವ ನೀಡಲು ಬ್ಯಾಂಕ್‌ಗಳಿಗೆ ಆಗಮಿಸುತ್ತಿದ್ದಾರೆ.

ಕೋವಿಡ್ 19 ಬಗ್ಗೆ ಎಷ್ಟು ಮುನ್ನೆಚ್ಚರಿಕೆ ವಹಿಸಿದರೂ ಈ ಸಂದರ್ಭದಲ್ಲಿ ಸಾಕಾಗುವುದಿಲ್ಲ. ಆದಷ್ಟು ಆನ್‌ಲೈನ್‌ ವ್ಯವಹಾರ ಮಾಡಬೇಕೆಂದು ಸೂಚಿಸಿದ್ದರೂ ಜನರು ಕೇಳುತ್ತಿಲ್ಲ. ಮಾಸ್ಕ್ ಧರಿಸದೇ, ಅಂತರ ಕಾಯ್ದುಕೊಳ್ಳದೆ ಇರುವುದರಿಂದ ನಮಗೂ ಸೋಂಕಿನ ಭಯ ಕಾಡುತ್ತಿದೆ ಎಂದು ಬ್ಯಾಂಕ್‌ ಸಿಬಂದಿ ಹೇಳುತ್ತಿದ್ದಾರೆ.

ಕೆಲವು ಬ್ಯಾಂಕ್‌ಗಳಲ್ಲಿ ಸಿಬಂದಿಗೆ ಸ್ಯಾನಿಟೈಸರ್‌, ಮಾಸ್ಕ್, ಗ್ಲೌಸ್‌ಗಳ ವ್ಯವಸ್ಥೆ ಮಾಡಲಾಗಿದ್ದರೂ ಕೆಲವು ಬ್ಯಾಂಕ್‌ಗಳಲ್ಲಿ ಇಲ್ಲ. ಕೆಲವು ಬ್ಯಾಂಕ್‌ಗಳಲ್ಲಿ ಸಿಬಂದಿ ಖಾತೆಗೆ ಹಣ ಹಾಕಿ ಅವರೇ ಕೊಂಡುಕೊಳ್ಳುವಂತೆ ತಿಳಿಸಲಾಗಿದೆ. ಆದರೆ ಮೆಡಿಕಲ್‌ಗ‌ಳಲ್ಲಿ ಸದ್ಯ ಲಭ್ಯವಿಲ್ಲದೆ ಕಾರಣ ಸಮಸ್ಯೆಯಾಗಿ ಪರಿಣಮಿಸಿದೆ.

ಕೆಲಸದ ಒತ್ತಡ
ಕೋವಿಡ್ 19 ಆತಂಕದ ಹಿನ್ನೆಲೆಯಲ್ಲಿ ಬ್ಯಾಂಕ್‌ ಸಿಬಂದಿಗೆ ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕೆಲಸದ ಸಮಯವನ್ನು ನಿಗದಿ ಮಾಡಲಾಗಿತ್ತು. ಆದರೆ ಪ್ರಸ್ತುತ ಮತ್ತೆ ಹಳೆ ಮಾದರಿಯಲ್ಲಿ ಬೆಳಗ್ಗೆ 10ರಿಂದ ಸಂಜೆ 5ರ ತನಕ ಸಮಯ ನಿಗದಿಪಡಿಸಲಾಗಿದೆ. ಪ್ರಸ್ತುತ ಗ್ರಾಹಕರ ಸಂಖ್ಯೆಯೂ ಹೆಚ್ಚಿರುವುದರಿಂದ ರಾತ್ರಿ ವರೆಗೂ ಕೆಲಸ ಮಾಡಬೇಕಾಗುತ್ತದೆ ಎಂಬುದು ಬ್ಯಾಂಕ್‌ ಸಿಬಂದಿ ಅಳಲು.

19.20 ಕೋ.ರೂ. ಜಮೆ
ಉಡುಪಿ ಜಿಲ್ಲೆಯಲ್ಲಿ 1,24,000, ದ.ಕ. ಜಿಲ್ಲೆಯಲ್ಲಿ 2,60,000 ಮಹಿಳಾ ಜನಧನ ಖಾತೆಗಳಿವೆ. ಉಭಯ ಜಿಲ್ಲೆಗಳಲ್ಲಿ 3.84 ಲಕ್ಷ ಮಹಿಳಾ ಜನಧನ ಖಾತೆದಾರರಿಗೆ ಒಟ್ಟು 19.20 ಕೋ.ರೂ. ಬಿಡುಗಡೆಯಾಗಿದೆ. ಮೇ ಹಾಗೂ ಜೂನ್‌ ತಿಂಗಳ ಹಣ ಮುಂದಿನ ತಿಂಗಳಿನಲ್ಲಿ ಕ್ರಮವಾಗಿ ಬಿಡುಗಡೆಯಾಗಲಿದೆ.

ಅನಗತ್ಯ ಬರಬೇಡಿ
ಕೋವಿಡ್ 19ಆತಂಕ ಇರುವುದರಿಂದ ಗ್ರಾಹಕರು ಅನಗತ್ಯವಾಗಿ ಬ್ಯಾಂಕ್‌ಗಳಿಗೆ ಬರಬಾರದು. ಸಾಧ್ಯವಾದಷ್ಟು ಆನ್‌ಲೈನ್‌ ವ್ಯವಹಾರಕ್ಕೆ ಒತ್ತು ಕೊಡಬೇಕು. ಹೋಗಲೇಬೇಕಾದ ಅನಿವಾರ್ಯ ಇದ್ದಲ್ಲಿ ಮಾಸ್ಕ್ ಧರಿಸಿ, ಸ್ಯಾನಿಟೈಸರ್‌ನಲ್ಲಿ ಕೈ ಶುಚಿಗೊಳಿಸಿಕೊಂಡು ತೆರಳ‌ಬೇಕು.
–  ರುದ್ರೇಶ್‌ ಮತ್ತು ಪ್ರವೀಣ್‌ ಎಂ.ಪಿ.,
ಲೀಡ್‌ ಬ್ಯಾಂಕ್‌ ಮ್ಯಾನೇಜರ್‌ಗಳು, ಉಡುಪಿ, ದ.ಕ. ಜಿಲ್ಲೆ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.