ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು
Team Udayavani, May 5, 2024, 10:09 PM IST
ಕಡಬ: ರೆಂಜಿಲಾಡಿ ಗ್ರಾಮದ ಮದುವೆ ಔತಣ ಕೂಟದಲ್ಲಿ ಯುವಕನೋರ್ವ ಯುವತಿಯೊಂದಿಗಿರುವುದನ್ನು ಮೊಬೈಲ್ನಲ್ಲಿ ಫೋಟೋ ತೆಗೆದಿದ್ದಾರೆ ಎನ್ನಲಾದ ಘಟನೆಯೊಂದಕ್ಕೆ ಸಂಬಂಧಿಸಿ ಇತ್ತಂಡಗಳ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎ. 29ರಂದು ರೆಂಜಿಲಾಡಿ ಗ್ರಾಮದ ಕುಶಾಲಪ್ಪ ಗೌಡ ಅವರ ಪುತ್ರಿಯ ವಿವಾಹ ಔತಣಕೂಟ ನಡೆದಿತ್ತು. ಅಲ್ಲಿ ನಿಶಾಂತ್ ಎಂಬ ಯುವಕ ಯುವತಿಯೊಂದಿಗಿರುವ ಫೋಟೋವನ್ನು ಬಾಂತಾಜೆ ನಿವಾಸಿ ದಿವಾಕರ ತೆಗೆದಿದ್ದಾರೆ ಎಂದು ಆರೋಪಿಸಿ ನಿಶಾಂತ್ ನೇತೃತ್ವದಲ್ಲಿ ಧನಂಜಯ, ಜನಾರ್ದನ, ಲೋಕೇಶ, ರಮೇಶ್, ಉದಯ, ಭುವನ, ಅಶ್ವಿತ್ ಅವರು ರಾತ್ರಿ 11.30ರ ಸುಮಾರಿಗೆ ದಿವಾಕರ ಅವರ ಮನೆಗೆ ಬಂದು ಹಲ್ಲೆ ನಡೆಸಿದರು. ಆಗ ದಿವಾಕರ ಅವರ ಅತ್ತಿಗೆ ಭವ್ಯಶ್ರೀ ಜಗಳ ಬಿಡಿಸಲು ಯತ್ನಿಸಿದಾಗ ಸ್ವಾತಿ, ರೇಷ್ಮಾ ಹಾಗೂ ಶೈನಿ ಎಂಬವರು ಭವ್ಯಶ್ರೀಗೆ ಹಲ್ಲೆ ನಡೆಸಿದರು. ನೆರೆಮನೆಯ ಶಿವಪ್ಪ ರಕ್ಷಣೆಗೆ ಬಂದಾಗ ಅವರ ಮೇಲೂ ಹಲ್ಲೆ ನಡೆಸಲಾಗಿದೆ.
ನೆರೆಮನೆಯ ಬಾಬು ಗೌಡ ಮತ್ತು ಪ್ರದೀಪ್ ಅವರು ಗಾಯಾಳುಗಳನ್ನು ಉಪಚರಿಸಿ ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದ್ದು, ಆ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರತಿದೂರು
ಔತಣಕೂಟದ ಮನೆಯಲ್ಲಿ ಯುವತಿಯೋರ್ವಳು ಸ್ನಾನ ಮಾಡುತ್ತಿದ್ದ ವೇಳೆ ಬಾತ್ರೂಮ್ನ ಕಿಟಕಿಯಿಂದ ಯುವಕನೋರ್ವ ವೀಡಿಯೋ ಮಾಡಿದ್ದಾನೆ. ಘಟನೆಯ ಮರುದಿನ ವೀಡಿಯೋ ಮಾಡಿದ್ದ ಯುವಕನ ಮನೆಗೆ ತೆರಳಿ ವೀಡಿಯೋ ಡಿಲೀಟ್ ಮಾಡಬೇಕು ಎಂದು ಆಗ್ರಹಿಸಿದಾಗ ಆರೋಪಿ ಯುವಕ ಹಾಗೂ ಅವರ ಸಂಗಡಿಗರು ಹಲ್ಲೆ ಮಾಡಿದ್ದಾರೆ ಎಂದು ಕಡಬ ಠಾಣೆಗೆ ದೂರು ನೀಡಲಾಗಿದ್ದು, ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
16 ಹಾಕಿ ಆಟಗಾರರ ಸಾವಿಗೆ ಕಾರಣನಾಗಿದ್ದ ಭಾರತೀಯನ ಗಡಿಪಾರು
Pune Porsche crash case ಚಾಲಕನಿಗೆ ಬೆದರಿಸಿ, ಕೂಡಿ ಹಾಕಿದ್ದ ಆರೋಪಿಯ ಅಜ್ಜ ಅರೆಸ್ಟ್!
Drugs Case; ಕಠಿಣ ಕ್ರಮ ಕೈಗೊಳ್ಳದಿದ್ದರೆ ಕರ್ನಾಟಕ ಪಂಜಾಬ್ ಅನ್ನು ಮೀರಿಸಲಿದೆ; ಜೋಶಿ
Congress party: ಕಾಂಗ್ರೆಸ್ ಪಕ್ಷದಿಂದ ಪ್ರತಾಪ್ ರೆಡ್ಡಿ ಉಚ್ಚಾಟನೆ
Cannes Award 2024; ಮೊದಲ ಬಾರಿ ಭಾರತದ ನಟಿಗೆ ಪ್ರತಿಷ್ಠಿತ ಕ್ಯಾನಸ್ ಪ್ರಶಸ್ತಿ ಗೌರವ!