ರಂಗಭೂಮಿ ಕಲಾವಿದೆ ಮೇಲೆ ಆ್ಯಸಿಡ್ ದಾಳಿ : ಮನೆಯಲ್ಲಿ ರಾತ್ರಿ ಮಲಗಿದ್ದ ವೇಳೆ ನಡೆಯಿತು ಕೃತ್ಯ
Team Udayavani, Mar 20, 2022, 12:50 PM IST
ಬೆಂಗಳೂರು: ಬೇಸಿಗೆ ಶಕೆ ಎಂದು ಮನೆಯ ಮುಖ್ಯ ಬಾಗಿಲು ತೆರೆದು ಮಲಗಿದ್ದ ರಂಗಭೂಮಿ ಕಲಾವಿದೆ ಮೇಲೆ ಆ್ಯಸಿಡ್ ದಾಳಿ ನಡೆದಿರುವ ಘಟನೆ ನಂದಿನಿ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಯೊಬ್ಬ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
ದುರ್ಘಟನೆಯಲ್ಲಿ ನಂದಿನಿಲೇಔಟ್ನ ಗಣೇಶ ಬ್ಲಾಕ್ ನಿವಾಸಿ ದೇವಿ (51) ಎಂಬ ಮಹಿಳೆಗೆ ಸುಟ್ಟ ಗಾಯಗಳಾಗಿದ್ದು, ಕೃತ್ಯ ಎಸಗಿದ ಆರೋಪದ ಮೇಲೆ ನಟನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ದೇವಿ ಅವರಿಗೆ ಶೇ.20ರಷ್ಟು ಸುಟ್ಟ ಗಾಯಗಳಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಹೇಳಿದರು.
ಈ ಹಿಂದೆ ಬಿಎಂಟಿಸಿಯಲ್ಲಿ ನಿರ್ವಾಹಕಿಯಾಗಿ ಕೆಲಸ ಮಾಡುತ್ತಿದ್ದ ದೇವಿ, ಅನಾರೋಗ್ಯ ಕಾರಣದಿಂದ ಕೆಲಸಕ್ಕೆ ರಾಜೀನಾಮೆ ನೀಡಿದ್ದರು. ಸದ್ಯ ಡ್ರಾಮಾ ಆರ್ಟಿಸ್ಟ್ ಆಗಿದ್ದಾರೆ. ನಂದಿನಿ ಲೇಔಟ್ ಗಣೇಶ ಬ್ಲಾಕ್ನಲ್ಲಿ ಇಬ್ಬರು ಪುತ್ರರೊಂದಿಗೆ ವಾಸವಾಗಿದ್ದಾರೆ. ಮಾ.17ರಂದು ರಾತ್ರಿ ಶಕೆ ಹಿನ್ನೆಲೆಯಲ್ಲಿ ಮನೆಯ ಬಾಗಿಲು ಹಾಕದೆ ಮೂವರು ಮಲಗಿದ್ದರು. ಮುಂಜಾನೆ 4.30ರ ಸುಮಾರಿಗೆ ಯಾರೋ ಅಪರಿಚಿತ ವ್ಯಕ್ತಿ ಆ್ಯಸಿಡ್ ಮಾದರಿಯ ದ್ರಾವಣವನ್ನು ದೇವಿ ಅವರ ಮುಖ ಮತ್ತು ಬೆನ್ನಿನ ಮೇಲೆ ಬಾಟಲಿಯನ್ನು ಎಸೆದಿದ್ದಾನೆ. ಅದರಿಂದ ದೇಹದಲ್ಲಿ ಉರಿ ಕಾಣಿಸಿಕೊಂಡಿದ್ದು, ಕೂಡಲೇ ಕೆ.ಸಿ.ಜನರಲ್ ಆಸ್ಪತ್ರೆಗೆ ಹೋಗಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಿಕಿತ್ಸೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇದನ್ನೂ ಓದಿ : ಪೊಲೀಸರಿಗೂ ಸೆಡ್ಡು ಹೊಡೆದು ಹೆದ್ದಾರಿಯಲ್ಲಿ ಯುವಕರ ವ್ಹೀಲಿಂಗ್
ನಾಟಕ ಕಂಪನಿಯಲ್ಲಿ ಇಬ್ಬರೂ ಕೆಲಸ: ಬಂಧಿತ ಆರೋಪಿ ಹಾಗೂ ದೇವಿ ಅವರು ಒಂದೇ ನಾಟಕ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ವೇಳೆ ಗಲಾಟೆ ಉಂಟಾಗಿ, ಅದರಿಂದ ಆಕ್ರೋಶಗೊಂಡ ಆರೋಪಿ ಕೃತ್ಯ ಎಸಗಿದ್ದಾನೆ ಎಂಬ ಮಾಹಿತಿ ಇದೆ. ಅಲ್ಲದೆ, ಅದು ಆಸಿಡ್ ಅಲ್ಲ, ಆಸಿಡ್ ಮಾದರಿಯಲ್ಲಿರುವ ವಸ್ತು ಎಂದು ಹೇಳಲಾಗುತ್ತಿದೆ. ದ್ರಾವಣವನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ನಂತರ ಸ್ಪಷ್ಟತೆ ತಿಳಿಯಲಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜೂನ್ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ
Prajwal ಬಂಧನಕ್ಕೆ ರೆಡ್ ಕಾರ್ನರ್ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ
State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್ ಆರೋಪ
Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ
Govt ಕಚೇರಿಗಳಲ್ಲಿ ಇ-ಆಫೀಸ್ ತಂತ್ರಾಂಶ ಕಡ್ಡಾಯಕ್ಕೆ ಆದೇಶ
MUST WATCH
ಹೊಸ ಸೇರ್ಪಡೆ
Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್
Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ
Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ
IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ
OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್ಗಳ ಹೆಸರಲ್ಲಿ ಸಂದೇಶ