ಯುಪಿಸಿಎಲ್ಗೆ ಹೆಚ್ಚುವರಿ 365 ಎಕರೆ ಸ್ವಾಧೀನ: ಸಚಿವ ಮುರಗೇಶ ನಿರಾಣಿ
Team Udayavani, Feb 15, 2023, 7:40 AM IST
ಬೆಂಗಳೂರು: ಉಡುಪಿ ಪವರ್ ಕಾಪೋರೇಷನ್ ಲಿಮಿಟೆಡ್ (ಯುಪಿಸಿಎಲ್) ಯೋಜನೆಗೆ 365.50 ಎಕರೆ ಜಮೀನನ್ನು ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ಹೆಚ್ಚುವರಿಯಾಗಿ ಭೂಸ್ವಾಧೀನಪಡಿಸಿಕೊಳ್ಳಲು ನಿರ್ಣಯಿಸಲಾಗಿದೆ ಎಂದು ಕೈಗಾರಿಕಾ ಸಚಿವ ಮುರಗೇಶ ನಿರಾಣಿ ತಿಳಿಸಿದ್ದಾರೆ.
ವಿಧಾನಪರಿಷತ್ತಿನಲ್ಲಿ ಜೆಡಿಎಸ್ ಸದಸ್ಯ ಬಿ.ಎಂ. ಫಾರೂಕ್ ಅವರು ಪ್ರಶ್ನೆಗೆ ಸಚಿವರು ಲಿಖೀತ ಉತ್ತರ ನೀಡಿದ್ದಾರೆ. ಯುಪಿಸಿಎಲ್ ರವರ 2,800 ಮೆ.ವ್ಯಾ ವಿದ್ಯುತ್ ಉತ್ಪಾದನಾ ಘಟಕ ಸ್ಥಾಪನೆಗೆ ಕಾಪು ತಾಲೂಕು ಸಾಂತೂರು ಗ್ರಾಮದ 294.45 ಎಕರೆ ಮತ್ತು ಎಲ್ಲೂರು ಗ್ರಾಮದ 281.90 ಎಕರೆ ಸೇರಿ ಒಟ್ಟು 576.45 ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳಲು 1995 ಮತ್ತು 98ರಲ್ಲಿ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿತ್ತು.
ಅಂತಿಮ ಅಧಿಸೂಚನೆ ಸರ್ಕಾರದ ಅನುಮೋದನೆಗೆ ಸಲ್ಲಿಸುವ ಪೂರ್ವದಲ್ಲಿ ಪ್ರಸ್ತಾವಿತ ಭೂಸ್ವಾಧೀನ ವೆಚ್ಚದ ತಾತ್ಕಾಲಿಕ ಭೂಮೌಲ್ಯ ಮತ್ತು ಮಂಡಳಿಯ ಸೇವಾ ಶುಲ್ಕ ಸೇರಿ ಒಟ್ಟಿ 341.59 ಕೋಟಿ ರೂ ಮೊತ್ತ ಕೆಐಎಡಿಬಿಗೆ ಠೇವಣಿ ಇಡುವಂತೆ ಯುಪಿಸಿಎಲ್ಗೆ 2016ರಿಂದ 2022ರವರೆಗೆ ನಾಲ್ಕು ಬಾರಿ ಪತ್ರ ಬರೆದರೂ ಹಣ ಠೇವಣಿ ಮಾಡಿಲ್ಲ.
ಕೆಐಎಡಿಬಿ ಅಧಿಕಾರಿಗಳು 2022ರ ಡಿ.20ರಂದು ಸ್ಥಳ ಪರಿಶೀಲನೆ ನಡೆಸಿ ಈ ಹಿಂದೆ ಸ್ವಾಧೀನಪಡಿಸಿಕೊಂಡ 576.45 ಎಕರೆ ಜೊತೆಗೆ ಹೊಸದಾಗಿ 365 ಎಕರೆ ಒಟ್ಟು 941.95 ಎಕರೆ ಜಮೀನು ಕೈಗಾರಿಕಾ ಪ್ರದೇಶಕ್ಕೆ ಸ್ವಾಧೀನಪಡಿಸಿಕೊಳ್ಳುವುದು ಸೂಕ್ತವೆಂದು ಅಭಿಪ್ರಾಯಪಟ್ಟಿದ್ದಾರೆ. ಅದರಂತೆ, ಹೆಚ್ಚುವರಿಯಾಗಿ 365.50 ಎಕರೆ ಜಮೀನುನ್ನು ಹೆಚ್ಚುವರಿಯಾಗಿ ಸ್ವಾಧೀನಪಡಿಸಿಕೊಲÛ 2023ರ ಜ.12ರಂದು ನಡೆದ ಮಂಡಳಿಯ ಸಭೆಯಲ್ಲಿ ನಿರ್ಣಯಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?