ದಾಳಿಗೆ ಸೀಮಿತವಾಗದೆ ಭ್ರಷ್ಟರ ವಿರುದ್ಧ ಕ್ರಮವೂ ಜರಗಲಿ


Team Udayavani, Mar 17, 2022, 6:00 AM IST

ದಾಳಿಗೆ ಸೀಮಿತವಾಗದೆ ಭ್ರಷ್ಟರ ವಿರುದ್ಧ ಕ್ರಮವೂ ಜರಗಲಿ

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿರುವ ಆರೋಪದ ಮೇಲೆ ರಾಜ್ಯದ 18 ಅಧಿಕಾರಿಗಳಿಗೆ ಸೇರಿದ ಆಸ್ತಿಪಾಸ್ತಿಗಳ ಮೇಲೆ ಬುಧವಾರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿ, ಕೋಟ್ಯಂತರ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದಾರೆ. ಆದರೆ, ಇದುವರೆಗೆ ಈ ರೀತಿ ದಾಳಿ ನಡೆಸಲಾಗಿರುವ ಎಷ್ಟು ಭ್ರಷ್ಟಾಚಾರಿಗಳಿಗೆ ಶಿಕ್ಷೆಯಾಗಿದೆ ಎಂಬ ಬಗ್ಗೆಯೂ ನೋಡಬೇಕಾಗುತ್ತದೆ.

ಕಳೆದ ವರ್ಷ ಎಸಿಬಿ ಬಿಡುಗಡೆ ಮಾಡಿದ ದಾಖಲೆಗಳ ಪ್ರಕಾರ, 2016ರಿಂದ 2021ರ ಅಂತ್ಯದವರೆಗೆ ರಾಜ್ಯದಲ್ಲಿ 1,803 ಕೇಸುಗಳನ್ನು ಎಸಿಬಿ ದಾಖಲಿಸಿತ್ತು. ಇದರಲ್ಲಿ ಕೇವಲ 10 ಮಂದಿಗೆ ಶಿಕ್ಷೆ ಕೊಡಿಸುವಲ್ಲಿ ಎಸಿಬಿ ಯಶಸ್ವಿಯಾಗಿದೆ. 25 ಮಂದಿಗೆ ಕ್ಲೀನ್‌ ಚಿಟ್‌ ಸಿಕ್ಕಿದೆ. ಉಳಿದ ಕೇಸುಗಳು ಇನ್ನೂ ವಿಚಾರಣ ಹಂತದಲ್ಲೇ ಇವೆ. ಇದರ ಅರ್ಥ, ದಾಳಿ ನಡೆಸುವಾಗ ಇದ್ದ ಉತ್ಸಾಹ ಭ್ರಷ್ಟರಿಗೆ ಶಿಕ್ಷೆ ಕೊಡಿಸುವಲ್ಲಿ ಇರುವುದಿಲ್ಲವೇ ಎಂಬ ಪ್ರಶ್ನೆಯೂ ಉದ^ವವಾಗುತ್ತದೆ. 1,803 ಕೇಸುಗಳ ಪೈಕಿ, 753 ಕೇಸುಗಳ ಬಗ್ಗೆ ಚಾರ್ಜ್‌ಶೀಟ್‌ ಸಲ್ಲಿಸಲಾಗಿದೆ. 682 ಕೇಸುಗಳು ವಿಚಾರಣ ಹಂತದಲ್ಲಿವೆ. 1,473 ಸರಕಾರಿ ಅಧಿಕಾರಿಗಳು ಒಟ್ಟಾರೆ ಬಂಧಿತರಾಗಿದ್ದಾರೆ. ಇವರಲ್ಲಿ 391 ಪ್ರಥಮ ದರ್ಜೆ ಅಧಿಕಾರಿಗಳಾಗಿದ್ದಾರೆ. ಹಾಗೆಯೇ, 1,335 ಅಧಿಕಾರಿಗಳನ್ನು ಸಸ್ಪೆಂಡ್‌ ಮಾಡಲಾಗಿದ್ದು, 493 ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆ ನಡೆಸಲಾಗುತ್ತಿದೆ.

ಏನೇ ಆಗಲಿ, 2016ರಿಂದ 2021ರ ನವೆಂಬರ್‌ವರೆಗಿನ ಅ ಅವಧಿಯಲ್ಲಿ ಇಷ್ಟೆಲ್ಲ ದಾಳಿಗಳಾಗಿ ಕೇವಲ 10 ಮಂದಿ ಮಾತ್ರ ಶಿಕ್ಷೆಯಾಗಿರುವುದು ದುರದೃಷ್ಟಕರ. ದಾಳಿ ವೇಳೆ ಆದಾಯಕ್ಕಿಂತ 10 ಪಟ್ಟು, 20 ಪಟ್ಟು ಕೆಲವೊಮ್ಮೆ  ಅದಕ್ಕಿಂತಲೂ ಹೆಚ್ಚು ಪಟ್ಟು ಆದಾಯ ಗಳಿಸಿಕೊಂಡಿದ್ದರೂ ಈ ಅಧಿಕಾರಿಗಳು ಬಚಾವ್‌ ಆಗುವುದು ಹೇಗೆ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿದೆ. ಲೋಕಾಯುಕ್ತ ಸಂಸ್ಥೆಗೆ ಪರ್ಯಾಯ ಎಂಬಂತೆಯೋ ರೂಪಿಸಲಾಗಿರುವ ಎಸಿಬಿ ಸಂಸ್ಥೆ ನೇರ ಸರಕಾರದ ಅಧೀನದಲ್ಲಿಯೇ ಬರುವುದರಿಂದ ಸಹಜವಾಗಿಯೇ ಇದರಿಂದ ಹೆಚ್ಚಿನದ್ದೇನೂ ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಲೋಕಾಯುಕ್ತ ಸಂಸ್ಥೆಯಿಂದ ವಿಚಾರಣೆಯ ಅಧಿಕಾರವನ್ನು ಕಿತ್ತುಕೊಂಡು ರಚನೆಯಾಗಿರುವ ಎಸಿಬಿ ಸಂಸ್ಥೆಯ ಅಸ್ತಿತ್ವದ ಬಗ್ಗೆಯೇ ಪ್ರಶ್ನೆ ಎದ್ದಿದೆ. ಪ್ರಕರಣ ಈಗ ಹೈಕೋರ್ಟಿನಲ್ಲಿದೆ.

ಹಲ್ಲಿಲ್ಲದ ಹಾವಾಗಿರುವ ಎಸಿಬಿಗೆ ಶಕ್ತಿ ತುಂಬುವ ಕೆಲಸ ನಡೆಯಬೇಕು. ಎಸಿಬಿ ಪ್ರಕರಣದಲ್ಲಿ ಭಾಗಿಯಾಗಿರುವ ಬಹುತೇಕ ಅಧಿಕಾರಿಗಳ ವಿರುದ್ಧ ಮುಂದಿನ ಕ್ರಮ ಕೈಗೊಳ್ಳಲು ಆಯಾ ಇಲಾಖಾ ಮುಖ್ಯಸ್ಥರ ಅನುಮತಿ ಬೇಕಾಗುತ್ತದೆ. ಆದರೆ ಬಹುತೇಕ ಸಂದರ್ಭದಲ್ಲಿ ಅನುಮತಿ ನೀಡಿಕೆ ತಡವಾಗುವುದರಿಂದ ವಿಚಾರಣೆ ಸಹ ಮಂದಗತಿಯಲ್ಲಿ ಸಾಗುತ್ತಿದೆ. ಪ್ರಥಮ ಮಾಹಿತಿ ದಾಖಲಾದ ಅಧಿಕಾರಿಗಳ ವಿರುದ್ಧ ತನಿಖೆಗೆ ಅನುಮತಿ ನೀಡಲು ಸರಕಾರ ತತ್‌ಕ್ಷಣ ಕ್ರಮ ಕೈಗೊಳ್ಳಬೇಕಾಗುತ್ತದೆ.

ಎಸಿಬಿಯ ದಾಳಿಗಳು, ಎಫ್ಐಆರ್‌ಗಳು ತಾರ್ಕಿಕ ಅಂತ್ಯ ಮುಟ್ಟಲೇಬೇಕಾಗುತ್ತದೆ. ಇಲ್ಲದೆ ಇದ್ದರೆ ಇದೆಲ್ಲವೂ ಒಂದೋ ಮಾಧ್ಯಮಗಳ ಮುಂದೆ ಪ್ರದರ್ಶನವಾಗಿಯೋ, ಸರಕಾರದ ಕೈಗೊಂಬೆ ಆಟವಾಗಿಯೋ ಕಾಣಿಸಿಕೊಳ್ಳುತ್ತದೆ. ಎಸಿಬಿಯ ದಾಳಿಗಳು ವಿಶ್ವಾಸ ಕಳೆದುಕೊಳ್ಳುವ ಮೊದಲು ಅದನ್ನು ಸರಕಾರದ ಹಿಡಿತದಿಂದ ತಪ್ಪಿಸಿ, ಲೋಕಾಯುಕ್ತದ ಜತೆಗೆ ವಿಲೀನ ಅಥವಾ ಸ್ವಾಯತ್ತ ಸಂಸ್ಥೆಯಾಗಿ ರೂಪಿಸಬೇಕು. ಭ್ರಷ್ಟರ ವಿರುದ್ಧ ಕ್ರಮ ಜರಗುತ್ತದೆ ಎಂಬ ನಂಬಿಕೆ ಜನರಲ್ಲಿ ಮೂಡಿಸಬೇಕು.

 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.