ಕಾಂಗ್ರೆಸ್‌ ನಿರ್ಧಾರ ಪರಿಶೀಲಿಸಿ ಕ್ರಮ: ದೇವೇಗೌಡ


Team Udayavani, Nov 10, 2019, 3:05 AM IST

Devegowda

ಮಂಗಳೂರು: ರಾಜ್ಯದಲ್ಲಿ ಉಪ ಚುನಾವಣೆ ಬಳಿಕ ಬಿಜೆಪಿ ಸರಕಾರ ಅತಂತ್ರ ಸ್ಥಿತಿ ತಲುಪಿದರೆ ಕಾಂಗ್ರೆಸ್‌ ಹೈಕಮಾಂಡ್‌ ತೀರ್ಮಾನವನ್ನು ಅವಲಂಬಿಸಿ ಜೆಡಿಎಸ್‌ ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ. ಆ ಮೂಲಕ ಮತ್ತೆ ಕಾಂಗ್ರೆಸ್‌ ಸಖ್ಯಕ್ಕೆ ತೆರೆದುಕೊಳ್ಳುವ ಸೂಚನೆಯನ್ನು ಹೊರಗೆಡಹಿದ್ದಾರೆ.

ಶನಿವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಉಪ ಚುನಾವಣೆಯಲ್ಲಿ ಬಿಜೆಪಿ ಅಥವಾ ಕಾಂಗ್ರೆಸ್‌ ಜತೆಗೆ ಹೊಂದಾಣಿಕೆಯ ಪ್ರಶ್ನೆಯೇ ಇಲ್ಲ ಎಂದು ಪುನರುಚ್ಚರಿಸಿದರು. ಎರಡು ಮೈತ್ರಿ ಸರಕಾರಗಳನ್ನು ನಾವು ನೋಡಿದ್ದೇವೆ. ಅದರಿಂದ ಸಾಕಷ್ಟು ಬುದ್ಧಿ ಕಲಿತಿದ್ದೇವೆ. ಆದರೂ ಮುಂದಿನ ಚುನಾವಣೆಗಳಲ್ಲಿ ಜೆಡಿಎಸ್‌ನ್ನು ನಿರ್ಲಕ್ಷಿಸಿ ಯಾರೂ ಸರಕಾರ ರಚನೆ ಮಾಡಲು ಸಾಧ್ಯವಾಗದು ಎನ್ನುವುದು ನಮ್ಮ ಭಾವನೆ. ಈಗ ಮಹಾರಾಷ್ಟ್ರದಲ್ಲಿನ ಪರಿಸ್ಥಿತಿ ನೋಡಿದರೆ ಎಲ್ಲರಿಗೂ ಅರ್ಥವಾಗುತ್ತದೆ ಎಂದರು.

2020ರಲ್ಲಿ ಮಧ್ಯಂತರ ಚುನಾವಣೆ?: 2020ರಲ್ಲಿ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಘೋಷಣೆಯಾದರೂ ಅಚ್ಚರಿ ಇಲ್ಲ. ಉಪಚುನಾವಣೆ ಮತ್ತು ಮಧ್ಯಂತರ ಚುನಾವಣೆ ಬಂದರೂ ಜೆಡಿಎಸ್‌ ಮಾತ್ರ ಏಕಾಂಗಿಯಾಗಿ ಸ್ಪರ್ಧೆ ಎದುರಿಸಲಿದೆ ಎಂದು ತಿಳಿಸಿದರು. ಮೈತ್ರಿ ಸರಕಾರ ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ 5 ವರ್ಷ ಕಾಲ ವಿಪಕ್ಷ ನಾಯಕರಾಗುವ ಕನಸು ಕಂಡರು. ಮೈತ್ರಿ ಸರಕಾರ ಪತನದ ಮೂಲಕ ಅವರು ಕನಸನ್ನು ನನಸಾಗಿಸಿಕೊಂಡರು. ಬಳಿಕ ವಿಪಕ್ಷ ನಾಯಕರಾಗಿ ಪಕ್ಷ ಕಟ್ಟುವುದಾಗಿ ಹೇಳಿದರು. ಅವರು ಮಾತ್ರವಲ್ಲ ನಾವು ಕೂಡ ರಾಜ್ಯಾದ್ಯಂತ ಸಂಚರಿಸಿ ಪಕ್ಷ ಕಟ್ಟುತ್ತಿದ್ದೇವೆ. ನಾನು ಈ ಇಳಿವಯಸ್ಸಿನಲ್ಲೂ 3 ತಿಂಗಳು ಪೂರ್ತಿ ರಾಜ್ಯವ್ಯಾಪಿ ಓಡಾಟ ನಡೆಸಿ, ಪಕ್ಷವನ್ನು ಉಳಿಸಿ, ಬಲಗೊಳಿಸುತ್ತೇನೆ ಎಂದರು.

ಬಿಜೆಪಿ ಬಗ್ಗೆ ಮೃದು ನೀತಿ ಇಲ್ಲ: ಇತ್ತೀಚಿನ ದಿನಗಳಲ್ಲಿ ನಾನು ಬಿಜೆಪಿ ಬಗ್ಗೆ ಮೃದು ನೀತಿ ಹೊಂದಿದ್ದೇನೆ ಎಂಬ ಮಾತು ಕೇಳಿ ಬರುತ್ತಿದೆ. ಆದರೆ, ನಾನು ಅಥವಾ ನಮ್ಮ ಪಕ್ಷ ಅಂತಹ ನಿಲುವನ್ನು ಹೊಂದಿಲ್ಲ. ಹಾಗೆಂದು ಯಡಿಯೂರಪ್ಪ ಅವರ ಬಗ್ಗೆ ಅಗೌರವದಿಂದ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದರು. ನಮ್ಮ ಬಗ್ಗೆ ಸಿದ್ದರಾಮಯ್ಯ ಈ ಹಿಂದೆ ಲಘುವಾಗಿ ಮಾತನಾಡಿದ್ದರು.

ಆ ಬಳಿಕ ನಾನು ಬಿಜೆಪಿಯ ಬಲ ತಗ್ಗಿಸಲು ಒಂದಾಗುವಂತೆ ಮೂರು ಬಾರಿ ಸಿದ್ದರಾಮಯ್ಯ ಜತೆ ಮಾತನಾಡಿದ್ದೇನೆ. ಶತ್ರುತ್ವ ಇದ್ದರೆ ಅವರ ಜತೆ ಮಾತನಾಡುತ್ತಿರಲಿಲ್ಲ. ಆದರೆ, ಅವರಿಗೆ ವಿಪಕ್ಷ ನಾಯಕನಾಗುವ, ಯಡಿಯೂರಪ್ಪ ಅವರಿಗೆ ಸಿಎಂ ಆಗುವ ಪ್ರಬಲ ಆಕಾಂಕ್ಷೆ ಇತ್ತು. ಇಬ್ಬರೂ ಅದನ್ನು ಈಡೇರಿಸಿಕೊಂಡರು. ಮೈತ್ರಿ ಸರಕಾರ ಪತನಕ್ಕೆ ಸಿದ್ದರಾಮಯ್ಯ ಅವರೂ ಪರೋಕ್ಷ ಕಾರಣ ಎಂದು ಆರೋಪಿಸಿದರು.

ಅತೃಪ್ತರ ಜತೆ ಮಾತುಕತೆ: ಮೈತ್ರಿ ಸರಕಾರ ಅಸ್ತಿತ್ವದಲ್ಲಿದ್ದಾಗ ಸಚಿವ ಸ್ಥಾನ ನೀಡದ ಬಗ್ಗೆ ಪಕ್ಷದ ಕೆಲವು ಶಾಸಕರಿಗೆ ಅತೃಪ್ತಿ ಇದೆ. ನಂತರದ ದಿನಗಳಲ್ಲಿ ಪಕ್ಷದ ಬಗ್ಗೆ ಅಪಸ್ವರ ಎತ್ತಿದ ಹಿರಿಯ ಮುಖಂಡ ಬಸವರಾಜ ಹೊರಟ್ಟಿ ಸೇರಿದಂತೆ ಅಸಮಾಧಾನಿತರ ಜತೆ ನ.12ರಿಂದ 14ರ ವರೆಗೆ ನಡೆಯುವ ಪಕ್ಷದ ಸಭೆಯಲ್ಲಿ ಮಾತುಕತೆ ನಡೆಸಿ, ಇತ್ಯರ್ಥ ಪಡಿಸಲಾಗುವುದು. ಎಲ್ಲರನ್ನೂ ಸೇರಿಸಿಕೊಂಡು ಪಕ್ಷವನ್ನು ಮತ್ತೆ ಸಂಘಟಿಸುತ್ತೇವೆ ಎಂದು ಹೇಳಿದರು.

ಉಪಚುನಾವಣೆಯಲ್ಲಿ 15 ಸೀಟುಗಳನ್ನು ಗೆಲ್ಲುವುದು ಜೆಡಿಎಸ್‌ ಗುರಿ. ಜೆಡಿಎಸ್‌ ಬಗ್ಗೆ ಆರೋಪಿಸುವ ಸಿದ್ದರಾಮಯ್ಯ ಅವರಿಗೆ ಮಂಡ್ಯ ಮತ್ತು ತುಮಕೂರಿನಲ್ಲಿ ಜೆಡಿಎಸ್‌ ಅಭ್ಯರ್ಥಿ ಸೋಲಿಗೆ ಕಾರಣ ಯಾರು ಎಂದು ಗೊತ್ತಿಲ್ಲವೇ? ಈ ವಿಚಾರ ಸೋನಿಯಾ ಗಾಂಧಿಗೂ ಗೊತ್ತು. ಅಂಗೈ ಹುಣ್ಣಿಗೆ ಕನ್ನಡಿ ಯಾಕೆ?.
-ದೇವೇಗೌಡ, ಮಾಜಿ ಪ್ರಧಾನಿ

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.