ಅನಾರೋಗ್ಯ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ: ಖಾದರ್
Team Udayavani, Apr 7, 2020, 2:01 PM IST
ಉಳ್ಳಾಲ: ಮನೆಯಿಂದ ಚಿಕಿತ್ಸೆಗಾಗಿ ಆಗಮಿಸಿ ರಸ್ತೆ ಬದಿಯಲ್ಲಿ ಅನಾರೋಗ್ಯ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬನನ್ನು ಶಾಸಕ ಯು.ಟಿ. ಖಾದರ್ ಆಸ್ಪತ್ರೆಗೆ ದಾಖಲುಸುವ ಮೂಲಕ ಮಾನವೀಯತೆ ಮೆರೆದ ಘಟನೆ ನಾಟೆಕಲ್ಲು ಬಳಿ ನಡೆದಿದೆ.
ಮೊಂಟೆಪದವು ನಿವಾಸಿ ಅನಾರೋಗ್ಯದಿಂದ ಚಿಕಿತ್ಸೆಗಾಗಿ ನಡೆದುಕೊಂಡು ಬಂದಿದ್ದು ನಾಟೆಕಲ್ ದೇರಳಕಟ್ಟೆ ನಡುವೆ ರಸ್ತೆ ಬದಿಯಲ್ಲಿ ಬಳಲಿ ಕುಳುತಿದ್ದು, ಈ ಸಂದರ್ಭದಲ್ಲಿ ಸ್ಥಳೀಯರು ಶಾಸಕ ಯು.ಟಿ. ಖಾದರ್ ಅವರಿಗೆ ಅನಾರೋಗ್ಯ ಪೀಡಿತ ವ್ಯಕ್ತಿಯೊಬ್ಬರು ದೇರಳಕಟ್ಟೆ ಬಳಿ ಇರುವ ಮಾಹಿತಿ ನೀಡಿದ್ದರು. ಖಾದರ್ ಅವರು 108 ಅ್ಯಂಬುಲೆನ್ಸ್ ಗೆ ಕರೆ ಮಾಡಿದ್ದು, 30 ನಿಮಿಷವಾದರೂ ಅ್ಯಂಬುಲೆನ್ಸ್ ಬಂದಿಲ್ಲ ಎಂದು ತಿಳಿದ ತಕ್ಷಣ ಕೋಟೆಕಾರು ಬಗಂಬಿಲ ಬಳಿ ಗ್ರಾಮಸ್ಥರ ಅಹವಾಲು ಸ್ವೀಕರಿಸುತ್ತಿದ್ದ ಶಾಸಕರು ಸ್ಥಳಕ್ಕೆ ಆಗಮಿಸಿದ್ದು, ಇದೇ ಸಂದರ್ಭದಲ್ಲಿ ಅ್ಯಂಬುಲೆನ್ಸ್ ಆಗಮಿಸಿದ್ದು ಅನಾರೋಗ್ಯ ಪೀಡಿತ ವ್ಯಕ್ತಿಯನ್ಬು ಮಂಗಳೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲು ನೆರವಾದರು.
ಮಾಸ್ಕ್ ತೊಡಿಸಿದ ಖಾದರ್ : ಘಟನಾ ಸ್ಥಳಕ್ಕೆ ಆಂಬ್ಯುಲೆನ್ಸ್ ಬಂದಿತ್ತಾದರೂ ಯಾರೊಬ್ಬರೂ ಕೂಡಾ ಆತನ ಹತ್ತಿರ ಹೋಗಿ ಆಂಬ್ಯುಲೆನ್ಸ್ ಹತ್ತಿಸಲು ತಯಾರಿರಲಿಲ್ಲ.ಆದರೆ ಶಾಸಕ ಯು.ಟಿ.ಖಾದರ್ ರವರನ್ನು ಕಂಡಾಗ ಆತ ಶಾಸಕರ ಹೆಸರು ಕರೆದು ಹತ್ತಿರ ಬಂದಿದ್ದು ಸ್ವತಹ ಖಾದರ್ ಆತನಿಗೆ ಮಾಸ್ಕ್ ಹಾಕಿ ಆಂಬ್ಯುಲೆನ್ಸ್ ಹತ್ತಿಸಿ ವೆನ್ಲಾಕ್ ಗೆ ಕರೆದು ಕೊಂಡು ಹೋಗುವಂತೆ ಸೂಚಿಸಿ ಮಾನವೀಯತೆ ಮೆರೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ