ಬಸ್‌ ಪಾಸ್‌ ದರ ಏರಿಕೆಗೆ ಸರ್ಕಾರಕ್ಕೆ ಪ್ರಸ್ತಾವನೆ


Team Udayavani, Jun 3, 2019, 3:09 AM IST

bus

ಬೆಂಗಳೂರು: ಬಸ್‌ ಪ್ರಯಾಣ ದರ ಏರಿಕೆಗೆ ಇದುವರೆಗೆ ಮುಹೂರ್ತ ಕೂಡಿಬಾರದ ಹಿನ್ನೆಲೆಯಲ್ಲಿ ಕೊನೆಪಕ್ಷ ವಿದ್ಯಾರ್ಥಿಗಳ ಬಸ್‌ ಪಾಸ್‌ ದರವನ್ನಾದರೂ ಹೆಚ್ಚಳ ಮಾಡುವಂತೆ ದುಂಬಾಲು ಬಿದ್ದಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ), ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಪ್ರತಿ ವಿದ್ಯಾರ್ಥಿ ರಿಯಾಯ್ತಿ ಪಾಸಿನ ದರವನ್ನು ನೂರು ರೂಪಾಯಿ ಹೆಚ್ಚಳಕ್ಕೆ ಅನುಮತಿ ನೀಡುವಂತೆ ನಿಗಮವು ಪ್ರಸ್ತಾವನೆ ಸಲ್ಲಿಸಿದ್ದು, “ಸೇವಾ ಶುಲ್ಕ’ದ ರೂಪದಲ್ಲಿ ಈ ದರವನ್ನು ವಸೂಲಿ ಮಾಡಲು ಉದ್ದೇಶಿಸಿದೆ. ಸಾಧ್ಯವಾದರೆ ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಈ ಪರಿಷ್ಕೃತ ದರ ಜಾರಿಗೊಳಿಸಲು ಚಿಂತನೆ ನಡೆಸಿದೆ. ಹಾಗೊಂದು ವೇಳೆ ಸರ್ಕಾರ ಅನುಮತಿ ನೀಡಿದರೆ, ವಿದ್ಯಾರ್ಥಿಗಳಿಗೆ ದರ ಏರಿಕೆ ಬರೆ ನಿಶ್ಚಿತ.

ಹೆಚ್ಚಳಕ್ಕೆ ಸಕಾಲ?: ಉಪ ಚುನಾವಣೆಗಳು, ಸ್ಥಳೀಯ ಸಂಸ್ಥೆ ಚುನಾವಣೆ, ಲೋಕಸಭಾ ಚುನಾವಣೆಗಳು ಮುಗಿದಿವೆ. ಏರಿಕೆ ನಿರ್ಧಾರದಿಂದ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರದು. ಅಷ್ಟಕ್ಕೂ ನೀರಿನ ಶುಲ್ಕ, ವಿದ್ಯುತ್‌ ಶುಲ್ಕ ಪರಿಷ್ಕರಣೆ ಆಗುತ್ತಿವೆ. ಈ ಎಲ್ಲ ಹಿನ್ನೆಲೆಯಲ್ಲಿ ಇದು ಸಕಾಲ ಎಂಬುದು ನಿಗಮದ ಅಧಿಕಾರಿಗಳ ಲೆಕ್ಕಾಚಾರ. ಪ್ರಸ್ತಾವನೆ ಈಗಾಗಲೇ ನಿಗಮದ ಆಡಳಿತ ಮಂಡಳಿ ಸಭೆಯಲ್ಲಿ ಮಂಡನೆ ಆಗಿದ್ದು, ಸರ್ಕಾರಕ್ಕೂ ಕಳುಹಿಸಲಾಗಿದೆ ಎಂದು ಮೂಲಗಳು “ಉದಯವಾಣಿ’ಗೆ ತಿಳಿಸಿವೆ.

ಆದರೆ, ದಿಢೀರ್‌ ನಿರ್ಧಾರ ತೆಗೆದುಕೊಂಡಲ್ಲಿ ವಿದ್ಯಾರ್ಥಿ ವಲಯದಿಂದ ತೀವ್ರ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದೆ. ಕಳೆದ ಏಳೆಂಟು ವರ್ಷಗಳಿಂದ ವಿದ್ಯಾರ್ಥಿ ರಿಯಾಯ್ತಿ ಬಸ್‌ ಪಾಸಿನ ದರ ಹೆಚ್ಚಿಸಿಲ್ಲ. ಇತ್ತ ಪ್ರಯಾಣ ದರ ಏರಿಕೆ ಪ್ರಸ್ತಾವನೆಯೂ ನನೆಗುದಿಗೆ ಬಿದ್ದಿದೆ. ಈ ಮಧ್ಯೆ ನಿಗಮವು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಹೀಗಿರುವಾಗ, ಪಾಸಿನ ದರ ಪರಿಷ್ಕರಣೆಗೆ ಅನುಮತಿ ನೀಡಿದಲ್ಲಿ ಕೊಂಚ ಆರ್ಥಿಕ ಚೇತರಿಕೆಗೆ ಅನುಕೂಲ ಆಗುತ್ತದೆ ಎಂದು ನಿಗಮ ಸಮಜಾಯಿಷಿ ನೀಡಿದೆ. ಈ ಪರಿಷ್ಕರಣೆಯಿಂದ ನಿಗಮವು ವಾರ್ಷಿಕ ಸುಮಾರು 15ರಿಂದ 20 ಕೋಟಿ ರೂ. ಹೆಚ್ಚುವರಿ ಆದಾಯ ನಿರೀಕ್ಷಿಸಿದೆ.

ಕೆಎಸ್‌ಆರ್‌ಟಿಸಿ ವ್ಯಾಪ್ತಿಯಲ್ಲಿ ಪ್ರತಿ ವರ್ಷ 6.25 ಲಕ್ಷ ವಿದ್ಯಾರ್ಥಿಗಳು ರಿಯಾಯ್ತಿ ಬಸ್‌ ಪಾಸುಗಳನ್ನು ಹೊಂದುತ್ತಾರೆ. ಪಾಸಿನ ದರ ಹತ್ತು ತಿಂಗಳಿಗೆ ಪ್ರಸ್ತುತ ಕನಿಷ್ಠ 600ರಿಂದ ಗರಿಷ್ಠ 1,400 ರೂ. ಇದಲ್ಲದೆ, 100 ರೂ. ಸೇವಾ ಶುಲ್ಕ ಹಾಗೂ ತಿಂಗಳಿಗೆ ಅಪಘಾತ ಪರಿಹಾರ ನಿಧಿಗೆ 5 ರೂ. ಪಡೆಯಲಾಗುತ್ತಿದೆ. ಇದರಿಂದ ಒಟ್ಟಾರೆ 35-40 ಕೋಟಿ ರೂ. ಬರುತ್ತಿದೆ. ಆದರೆ, ವಾಸ್ತವವಾಗಿ ವೆಚ್ಚ ಆಗುತ್ತಿರುವುದು 650 ಕೋಟಿ ರೂ. ಸರ್ಕಾರದಿಂದ 300 ಕೋಟಿ ರೂ. ಬರುತ್ತದೆ. ಬಹುತೇಕ ಉಳಿದ ಹಣವನ್ನು ನಿಗಮವೇ ಭರಿಸಬೇಕಾಗಿದೆ. ಆದ್ದರಿಂದ ಹೆಚ್ಚಳ ಅಗತ್ಯವಾಗಿದೆ ಎಂದು ನಿಗಮ ಸಮರ್ಥನೆ ನೀಡಿದೆ.

ಲೆಕ್ಕಾಚಾರ ಹೀಗೆ: ರಿಯಾಯ್ತಿ ಪಾಸಿನಲ್ಲಿ ಪ್ರತಿ ವಿದ್ಯಾರ್ಥಿಗೆ 60 ಕಿ.ಮೀ.ವರೆಗೂ ಪ್ರಯಾಣಿಸಲು ಅವಕಾಶ ಇರುತ್ತದೆ. ಸರಾಸರಿ 40ಕಿ.ಮೀ. ಹಿಡಿದರೂ ಹೋಗಿ-ಬರುವುದು ಸೇರಿಸಿ 80 ಕಿ.ಮೀ. ಆಗುತ್ತದೆ. ಒಬ್ಬ ವಿದ್ಯಾರ್ಥಿ ತಿಂಗಳಲ್ಲಿ 25 ದಿನ ಸಂಚಾರ ಮಾಡುತ್ತಾನೆ. ಅಂದರೆ ಎರಡು ಸಾವಿರ ರೂ. ಆಗುತ್ತದೆ. ಹತ್ತು ತಿಂಗಳಿಗೆ 20 ಸಾವಿರ ರೂ. ಆಗುತ್ತದೆ. ರಿಯಾಯ್ತಿ ಪಾಸಿನ ಲೆಕ್ಕಾಚಾರದ ಪ್ರಕಾರ ಪಾಸಿಗೆ ತಗಲುವ ವೆಚ್ಚದಲ್ಲಿ ಶೇ.50ರಷ್ಟು ಮೊತ್ತವನ್ನು ಸರ್ಕಾರ ಭರಿಸಬೇಕು.

ಉಳಿದದ್ದನ್ನು ನಿಗಮ ಮತ್ತು ವಿದ್ಯಾರ್ಥಿಗಳು ತಲಾ ಶೇ.25ರಷ್ಟನ್ನು ಭರಿಸಬೇಕು. ಆದರೆ, 20 ಸಾವಿರ ರೂ. ವೆಚ್ಚದಲ್ಲಿ ಶೇ.25ರಷ್ಟು ಅಂದರೆ 5 ಸಾವಿರ ರೂ. ವಿದ್ಯಾರ್ಥಿ ನೀಡಬೇಕಾಗುತ್ತದೆ. ಆದರೆ, ಶೇ.7ರಿಂದ 8ರಷ್ಟೂ ನಿಗಮ ಪಡೆಯುತ್ತಿಲ್ಲ ಎಂದು ಹೆಸರು ಹೇಳಲಿಚ್ಚಿಸದ ಕೆಎಸ್‌ಆರ್‌ಟಿಸಿ ಅಧಿಕಾರಿಯೊಬ್ಬರು ತಿಳಿಸುತ್ತಾರೆ.

ವಿದ್ಯಾರ್ಥಿ ಬಸ್‌ ಪಾಸ್‌ನ ಸೇವಾ ಶುಲ್ಕ ಹೆಚ್ಚಳಕ್ಕೆ ಸಂಬಂಧಿಸಿದಂತೆ ಪ್ರಸ್ತಾವನೆ ಬಂದಿದೆ. ಶುಲ್ಕ ಹೆಚ್ಚಿಸುವ ಚಿಂತನೆಯಿದೆ. ಇದಲ್ಲದೆ, ಪ್ರಯಾಣ ದರವನ್ನೂ ಶೇ.15ರಷ್ಟು ಏರಿಕೆ ಮಾಡುವ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದು ಮುಖ್ಯಮಂತ್ರಿಗಳ ಮುಂದಿದೆ. ಈ ಬಗ್ಗೆ ಸ್ವತಃ ಅವರೇ ತೀರ್ಮಾನ ಕೈಗೊಳ್ಳಲಿದ್ದಾರೆ.
-ಡಿ.ಸಿ. ತಮ್ಮಣ್ಣ, ಸಾರಿಗೆ ಸಚಿವ.

* ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.