ನಿರ್ಮಲಾರಿಂದ ವೈಮಾನಿಕ ಸಮೀಕ್ಷೆ
Team Udayavani, Aug 10, 2019, 5:56 AM IST
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಬೆಳಗಾವಿ ಸೇರಿ ಹಾನಿಗೆ ಒಳಗಾದ ಹಲವು ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಜತೆಗೆ, ಕೆಲವೆಡೆ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ಶನಿವಾರ ಬೆಳಗ್ಗೆ 9.05ಕ್ಕೆ ಬೆಂಗಳೂರಿಗೆ ಆಗಮಿಸಲಿರುವ ನಿರ್ಮಲಾ ಸೀತಾರಾಮನ್ ಅವರು ಬೆಳಗ್ಗೆ 10.15ಕ್ಕೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣ ತಲುಪಲಿದ್ದಾರೆ. ನಂತರ ಬೆಳಗಾವಿ ನಗರದಲ್ಲಿ ಪರಿಶೀಲನೆ ನಡೆಸಲಿರುವ ಅವರು, ಬೆಳಗಾವಿ ನಗರದ ನಿರಾಶ್ರಿತರ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ನಂತರ, ಮಾರ್ಕಂಡೇಯ ನದಿ ಸೇತುವೆ, ಘಟಪ್ರಭಾ ನದಿ ಸೇತುವೆ, ಸಂಕೇಶ್ವರ ನಿರಾಶ್ರಿತರ ಕೇಂದ್ರಗಳಿಗೆ ಭೇಟಿ ನೀಡಲಿದ್ದಾರೆ. ನಂತರ ಸಾಂಬ್ರಾ ವಿಮಾನ ನಿಲ್ದಾಣದಿಂದ ಬೆಳಗಾವಿ, ಬಾಗಲಕೋಟೆ ಜಿಲ್ಲೆಯ ಪ್ರವಾಹಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಬಳಿಕ, ಬಾಗಲಕೋಟೆಯ ನೆರೆಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಲಿರುವ ನಿರ್ಮಲಾ ಸೀತಾರಾಮನ್ ಅವರು, ಬೆಳಗಾವಿ ವಿಮಾನ ನಿಲ್ದಾಣದಿಂದ ಸಂಜೆ 4.15ಕ್ಕೆ ಗೋವಾ ಮಾರ್ಗವಾಗಿ ದೆಹಲಿಗೆ ತೆರಳಲಿದ್ದಾರೆ.