ಆಫ್ರಿಕ: 4.4 ಕೋಟಿ ಜನರಿಗೆ ಸೋಂಕು ಭೀತಿ

ಆಫ್ರಿಕ ಖಂಡವನ್ನು ಪರಿಪರಿಯಾಗಿ ಕಾಡಲಿದೆ ಕೋವಿಡ್

Team Udayavani, May 14, 2020, 12:18 PM IST

ಆಫ್ರಿಕ: 4.4 ಕೋಟಿ ಜನರಿಗೆ ಸೋಂಕು ಭೀತಿ

ನೈರೋಬಿ : ಆಫ್ರಿಕದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು,ಭವಿಷ್ಯದಲ್ಲಿ ಸುಮಾರು 2 ಲಕ್ಷ ಜನರನ್ನು ಬಲಿ ತೆಗೆದುಕೊಳ್ಳಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಅಷ್ಟೇ ಅಲ್ಲದೆ ಕೋವಿಡ್‌-19 ಮುಂದಿನ ಕೆಲ ವರ್ಷಗಳ ಕಾಲ ಆಫ್ರಿಕ ಖಂಡದ ದೇಶಗಳನ್ನು ಪರಿಪರಿಯಾಗಿ ಕಾಡಲಿದೆ ಎಂಬ ಆಘಾತಕಾರಿ ವಿಷಯವನ್ನು ಬಹಿರಂಗಪಡಿಸಿದೆ.

4.4 ಕೋಟಿ ಜನರಿಗೆ ಸೋಂಕು
ಸೋಂಕಿನ ವಿರುದ್ಧ ಕಟ್ಟುನಿಟ್ಟಿನ ಮತ್ತು ಪರಿಣಾಮಕಾರಿಯಾದ ಕ್ರಮಗಳನ್ನು ಕೈಗೊಳ್ಳದೆ ಹೋದರೆ ಮತ್ತು ಆರೋಗ್ಯ ಸೌಲಭ್ಯಗಳನ್ನು ಸುಧಾರಿಸದಿದ್ದರೆ ಮುಂದಿನ ಒಂದು ವರ್ಷದಲ್ಲೇ ಸುಮಾರು 4.4 ಕೋಟಿಯಷ್ಟು ಜನರು ಈ ಖಂಡವೊಂದರಲ್ಲೇ ಸೋಂಕಿಗೆ ತುತ್ತಾಗಲಿದ್ದಾರೆ ಎಂದು ವಿಶ್ವಸಂಸ್ಥೆ ಅಂದಾಜಿಸಿದೆ.

ಸೋಂಕಿನ ಅಬ್ಬರಕ್ಕೆ ಆಫ್ರಿಕ ಖಂಡ ಅಕ್ಷರಶಃ ತತ್ತರಿಸಿದೆ.10 ದೇಶಗಳಲ್ಲಿ ಕನಿಷ್ಠ ವೈದ್ಯಕೀಯ ಉಪಕರಣಗಳೂ ಇಲ್ಲ. ಕೆಲವು ದೇಶಗಳಲ್ಲಿ 1 ಲಕ್ಷ ಜನರಿಗೆ 9ರಂತೆ ವೆಂಟಿಲೇಟರ್‌ಗಳಿವೆ. ಇಂಥ ಕಳಪೆ ವ್ಯವಸ್ಥೆಯನ್ನಿಟ್ಟುಕೊಂಡು ಆಫ್ರಿಕದ ಬಡರಾಷ್ಟ್ರಗಳು ಕೋವಿಡ್ ವಿರುದ್ಧ ಹೋರಾಡುತ್ತಿವೆ. ಸೋಂಕಿತರ ಸಂಖ್ಯೆ ಹೆಚ್ಚಾದರೆ ಆರೋಗ್ಯ ಸೇವಾ ವ್ಯವಸ್ಥೆ ಮತ್ತಷ್ಟು ಹದೆಗೆಡಲಿದೆ.

ಏಕಾಏಕಿ ಹೆಚ್ಚುತ್ತಿದೆ ಸೋಂಕು
ನೈಜೀರಿಯ, ಟಾಂಜೇನಿಯ ಮತ್ತು ಘಾನಾ ಸೇರಿದಂತೆ ಪ್ರಮುಖ ದೇಶಗಳಲ್ಲಿ ಏಕಾಏಕಿ ಸೋಂಕು ಹೆಚ್ಚಾಗುತ್ತಿದೆ. ಟಾಂಜಾನಿಯದಲ್ಲಿ ಸುಮಾರು 480 ಸೋಂಕು ಪ್ರಕರಣಗಳನ್ನು ದಾಖಲಾಗಿದ್ದು, 18 ಮಂದಿ ಮೃತಪಟ್ಟಿದ್ದಾರೆ. ಹಾಗೇ ಮತ್ತೂಂದೆಡೆ ಘಾನಾದಲ್ಲಿ ಐದು ದಿನಗಳಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಸೋಂಕು ದಾಖಲಾಗಿದ್ದು,ಶೇ. 42.5ರಷ್ಟು ಹೆಚ್ಚಳವಾಗಿದೆ ಎಂದು ವರದಿಯೊಂದು ಹೇಳಿದೆ.

ಸೋಂಕಿತರ ಲೆಕ್ಕ ವಿಲ್ಲ
ಪರೀಕ್ಷಾ ಕಿಟ್‌ಗಳ ಅಭಾವವಿರುವುದರಿಂದ ಸೋಂಕು ಪರೀಕ್ಷಾ ವಿಧಾನವನ್ನು ಪಾಲಿಸುವಲ್ಲಿ ಕೆಲ ದೇಶಗಳು ವಿಫಲವಾಗಿವೆ.
ಆಫ್ರಿಕಾ ಸೆಂಟರ್‌ ಫಾರ್‌ ಡಿಸೀಸ್‌ ಕಂಟ್ರೋಲ್‌ ಆ್ಯಂಡ್‌ ಪ್ರಿವೆನ್‌ಷನ್‌ ಮುಖ್ಯಸ್ಥ ಡಾ| ಜಾನ್‌ ಎನ್ಕೆನ್ಗಾಸೊಂಗ್‌ ಆಫ್ರಿಕ ದೇಶಗಳು ಲಕ್ಷಕ್ಕೆ ಕೇವಲ 685 ಪರೀಕ್ಷೆಗಳನ್ನು ನಡೆಸುತ್ತಿವೆ ಎಂದು ದಿ ಗಾರ್ಡಿಯನ್‌ಗೆ ತಿಳಿಸಿದ್ದಾರೆ. ಪೂರ್ವ ಆಫ್ರಿಕದ ದೇಶಗಳಲ್ಲಿ ಸೋಂಕಿಗೆ ಬಲಿಯಾಗಿರುವವರ ಸರಿಯಾದ ಅಂಕಿಅಂಶ ಲಭ್ಯವಾಗಿಲ್ಲ.

ಸೊಮಾಲಿಯ ಸೇರಿ ಕೆಲವು ದೇಶಗಳ ಸೋಂಕಿತ ಪ್ರಕರಣಗಳ ಅಧಿಕೃತ ಅಂಕಿಅಂಶಗಳು ಇನ್ನೂ ದೊರೆತಿಲ್ಲ.

ತಜ್ಞರು ಏನು ಹೇಳುತ್ತಾರೆ?
ಹಾಟ್‌ಸ್ಪಾಟ್‌ಗಳೆಂದು ಗುರುತಿಸಿಕೊಂಡಿರುವ ಕೆಲವು ಪ್ರದೇಶಗಳಲ್ಲಿ ಸೋಂಕು ಪ್ರಸರಣ ಕೆಲ ವರ್ಷಗಳ ಕಾಲ ಅವ್ಯಾಹತವಾಗಿ ಮುಂದುವರೆಯಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಆಫ್ರಿಕ ಪ್ರದೇಶದ ನಿರ್ದೇಶಕ ಡಾ| ಮಾಟಿÏಡಿಸೊ ಮೊಯೆಟಿ ಹೇಳಿದ್ದಾರೆ. ಈಗಾಗಲೇ ಕೆಲವು ದೇಶಗಳಲ್ಲಿ ಸಮುದಾಯ ಮಟ್ಟದಲ್ಲಿ ಸೋಂಕು ಹರಡುತ್ತಿದ್ದು, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಇನ್ನು ನಾಲ್ಕರಿಂದ ಆರು ವಾರಗಳಲ್ಲಿ ಸೋಂಕಿತರ ಪ್ರಮಾಣ ಗರಿಷ್ಠವಾಗಲಿದೆ
ಎಂದು ಎಚ್ಚರಿಸಿದ್ದಾರೆ.

ಬಡರಾಷ್ಟ್ರಗಳಿಗೆ ಅಸಾಧ್ಯ
ಸೋಂಕು ಪ್ರಸರಣವನ್ನು ತಡೆಗಟ್ಟಲು ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಕೋವಿಡ್ ಜನ ಜೀವನದ ಒಂದು ಭಾಗವಾಗಿ ಇರಲಿದೆ. ನಿರಂತರವಾಗಿ ಪರೀಕ್ಷೆ ನಡೆಸುವುದು, ಸೋಂಕಿತರಿಗೆ ಗುಣಮಟ್ಟದ ಚಿಕಿತ್ಸೆಯನ್ನು ನೀಡುವುದೇ ಇದಕ್ಕಿರುವ ಪರಿಹಾರ. ಆದರೆ ಆಫ್ರಿಕದ ಬಡರಾಷ್ಟ್ರಗಳಿಗೆ ಇದು ಸಾಧ್ಯವಾದೀತೇ ಎನ್ನುವುದು ಪ್ರಶ್ನೆ.

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.