Prague: ನಿತ್ಯಾನಂದ ಜತೆಗೆ ಒಪ್ಪಂದ- ಅಧಿಕಾರಿ ವಜಾ
ಅಸ್ತಿತ್ವದಲ್ಲಿಲ್ಲದ ದೇಶದ ಜತೆಗೆ ವ್ಯವಹಾರ ಮಾಡಿ ಎಡವಟ್ಟು ಮಾಡಿದ ಪೆರುಗ್ವೇ ಅಧಿಕಾರಿ
Team Udayavani, Dec 1, 2023, 9:50 PM IST
ಅಸುನ್ಸಿಯಾನ್: ಭಾರತ ಬಿಟ್ಟು ಪರಾರಿಯಾಗಿರುವ ಬಿಡದಿಯ ನಿತ್ಯಾನಂದ ಸ್ವಾಮಿಯ ಸ್ವಘೋಷಿತ ದೇಶವಾದ “ಕೈಲಾಸ’ದೊಂದಿಗೆ ಸಹಕಾರ ಒಪ್ಪಂದ ಮಾಡಿಕೊಂಡ ಪೆರುಗ್ವೆಯ ಹಿರಿಯ ಸರ್ಕಾರಿ ಅಧಿಕಾರಿಗೆ ಗೇಟ್ಪಾಸ್ ನೀಡಲಾಗಿದೆ.
ಅಸ್ತಿತ್ವದಲ್ಲೇ ಇಲ್ಲದ ದೇಶದೊಂದಿಗೆ ಒಪ್ಪಂದ ಮಾಡಿಕೊಂಡ ಆರೋಪದ ಮೇರೆಗೆ ಪೆರುಗ್ವೆಯ ಕೃಷಿ ಸಚಿವಾಲಯದ ಅಧಿಕಾರಿಯ ಸ್ಥಾನದಿಂದ ಅರ್ನಾಲ್ಡೋ ಚಮೋರೋರನ್ನು ವಜಾ ಮಾಡಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಅರ್ನಾಲ್ಡೋ, “ತಮ್ಮನ್ನು ತಾವು ದಕ್ಷಿಣ ಅಮೆರಿಕದ ದ್ವೀಪ ಪ್ರದೇಶವಾದ ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸದ ಪ್ರತಿನಿಧಿಗಳು ಎಂದು ಹೇಳಿಕೊಂಡು ಕೆಲವು ಅಧಿಕಾರಿಗಳು ನಮ್ಮ ಬಳಿ ಬಂದಿದ್ದರು. ಪೆರುಗ್ವೆಗೆ ನೆರವಾಗುವುದಾಗಿ ತಿಳಿಸಿದ ಅವರು, ಹಲವು ಯೋಜನೆಗಳಿಗೆ ಸಂಬಂಧಿಸಿ ಪ್ರಾತ್ಯಕ್ಷಿಕೆಯನ್ನೂ ನೀಡಿದರು. ಎರಡೂ ದೇಶಗಳ ನಡುವೆ ದ್ವಿಪಕ್ಷೀಯ ಸಂಬಂಧ ವೃದ್ಧಿಯಾಗಿಸುವ ನಿಟ್ಟಿನಲ್ಲಿ ಸಹಕಾರ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಅವರ ಉದ್ದೇಶವೇನಿತ್ತು ಎಂಬುದು ನಮಗೆ ಗೊತ್ತಿರಲಿಲ್ಲ, ಅವರು ನಮ್ಮನ್ನು ಮೂರ್ಖರನ್ನಾಗಿಸಿದರು. ಇದೇ ಕಾರಣಕ್ಕಾಗಿ ನಾನು ಈಗ ಹುದ್ದೆ ಕಳೆದುಕೊಳ್ಳಬೇಕಾಯಿತು’ ಎಂದಿದ್ದಾರೆ.
ಜತೆಗೆ, ಕೈಲಾಸದ ಪ್ರತಿನಿಧಿಗಳು ಸಚಿವ ಕಾರ್ಲೋಸ್ ಗಿಮೆನೆಝ್ರನ್ನೂ ಭೇಟಿಯಾಗಿದ್ದರು ಎಂದೂ ಅವರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್