ರಾಜ್ಯದಲ್ಲಿ ಮಹಾರಾಷ್ಟ್ರ ಮಾದರಿಯಲ್ಲಿ ಅಗ್ರಿ ಟೂರಿಸಂ


Team Udayavani, Feb 26, 2020, 3:09 AM IST

rajyadalli

ಬೆಂಗಳೂರು: ಪ್ರವಾಸೋದ್ಯಮ ಇಲಾಖೆಗೆ ಹೊಸ ಚೈತನ್ಯ ನೀಡಲು ಸಚಿವ ಸಿ.ಟಿ. ರವಿ ಮಹಾರಾಷ್ಟ್ರ ಮಾದರಿಯಲ್ಲಿ ಕೃಷಿ ಪ್ರವಾಸೋದ್ಯಮ ಜಾರಿಗೆ ತರಲು ಮುಂದಾಗಿದ್ದಾರೆ. ಈ ಕುರಿತು ಯೋಜನೆಯ ರೂಪು ರೇಷೆಗಳನ್ನು ಸಿದ್ಧಪಡಿಸಿಕೊಂಡಿ ರುವ ಪ್ರವಾಸೋದ್ಯಮ ಇಲಾಖೆ ಮಾ. 5ರಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಂಡಿಸಲಿರುವ ಬಜೆಟ್‌ನಲ್ಲಿ ನೂತನ ಯೋಜನೆಯನ್ನು ಘೋಷಿಸುವಂತೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ರಾಜ್ಯ ಸರ್ಕಾರ 2015ರ ಪ್ರವಾಸೋದ್ಯಮ ನೀತಿಯಲ್ಲಿ ಘೋಷಣೆ ಮಾಡಿರುವಂತೆ ರಾಜ್ಯದಲ್ಲಿ ಪ್ರವಾಸೋದ್ಯಮದೊಂದಿಗೆ ಕೃಷಿಯನ್ನೂ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಈ ನೂತನ ಯೋಜನೆ ಜಾರಿಗೆ ತರಲು ಇಲಾಖೆ ನಿರ್ಧರಿಸಿದ್ದು, ರಾಜ್ಯದ ಹತ್ತು ಕಡೆಗಳಲ್ಲಿ ಅಗ್ರಿ ಟೂರಿಸಂ (ಕೃಷಿ ಪ್ರವಾಸೋದ್ಯಮ) ಯೋಜನೆ ಅನುಷ್ಠಾನಕ್ಕೆ ಯೋಜನೆ ರೂಪಿಸಲಾಗಿದೆ. ಈಗಾಗಲೇ ಖಾಸಗಿಯಾಗಿ ಕೊಡಗು, ಹಾಸನ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಟೂರಿಸಂ ಜಾರಿಗೊಳಿಸುವ ಯತ್ನ ನಡೆಯುತ್ತಿದ್ದು, ಬಂಡವಾಳ ಮತ್ತು ಸೌಲ ಭ್ಯದ ಕೊರತೆಯಿಂದ ಯಶಸ್ವಿಯಾಗಿಲ್ಲ ಎನ್ನಲಾಗಿದ್ದು, ಸರ್ಕಾ ರವೇ ಅಧಿಕೃತವಾಗಿ ರೈತರಿಗೆ ಸಹಾಯಧನ ನೀಡುವ ಮೂಲಕ ಯೋಜನೆ ಜಾರಿಗೆ ಮುಂದಾಗಿದೆ.

ಏನಿದು ಕೃಷಿ ಪ್ರವಾಸೋದ್ಯಮ?: ಕೃಷಿ ಸಂಬಂಧಿತ ಚಟುವಟಿಕೆ ಹಾಗೂ ಕೃಷಿ ಪದ್ಧತಿ, ಗ್ರಾಮೀಣ ಜೀವನ ಪದ್ಧತಿ ಕುರಿತು ಜನರಿತೆ ಸ್ಪಷ್ಟ ಮಾಹಿತಿ ಇರುವುದಿಲ್ಲ. ರಾಗಿ, ಭತ್ತ, ಜೋಳ, ಗೋಧಿ, ದ್ವಿದಳ ಧಾನ್ಯಗಳು, ತರಕಾರಿ, ಸೊಪ್ಪು ಬೆಳೆಯುವ ವಿಧಾನಗಳ ಬಗ್ಗೆ ಕಾರ್ಪೊರೇಟ್‌ ವಲಯದಲ್ಲಿ ಉದ್ಯೋಗ ಮಾಡುತ್ತಿರುವ ಅನೇಕ ಜನರಿಗೆ ತಿಳಿದಿರುವುದಿಲ್ಲ. ಅಲ್ಲದೇ ವಿದೇಶಿ ಪ್ರವಾಸಿಗರಿಗೂ ಭಾರ ತದ ಕೃಷಿ ಹಾಗೂ ಗ್ರಾಮೀಣ ಬದುಕಿನ ಬಗ್ಗೆ ಮಾಹಿತಿ ಇರುವುದಿಲ್ಲ. ಅಂಥವರಿಗೆ ಎಲ್ಲ ರೀತಿಯ ಸೌಕರ್ಯ ಒಳಗೊಂಡ ಮಾಹಿತಿ ಒದಗಿಸುವ ವ್ಯವಸ್ಥೆ ಕಲ್ಪಿಸುವ ಮೂಲಕ ಕೃಷಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ.

ಏನಿರುತ್ತದೆ ಅಗ್ರಿ ಟೂರಿಸಂನಲ್ಲಿ ?: ರಾಜ್ಯ ಸರ್ಕಾರ ರಾಜ್ಯದ ಹತ್ತು ಪ್ರದೇಶಗಳಲ್ಲಿ ಕನಿಷ್ಠ 5 ರಿಂದ 10 ಎಕರೆ ಜಮೀನು ಹೊಂದಿರುವ ರೈತರನ್ನು ಗುರುತಿಸಿ ಅವರಿಗೆ ಸರ್ಕಾದಿಂದಲೇ ಸುಸ್ಥಿರ ಹಾಗೂ ಪ್ರಗತಿಪರವಾಗಿ ಕೃಷಿ ಮಾಡಲು ಪ್ರೋತ್ಸಾಹಧನ ಒದಗಿಸಿ, ಅವರ ಜಮೀನಿನಲ್ಲಿ ಪ್ರವಾಸಿಗರಿಗೆ ವೀಕ್ಷಣೆಗೆ ಅನುಕೂಲವಾಗುವಂತೆ ಬೇರೆ ಬೇರೆ ಬೆಳೆಗಳು, ಬೆಳೆ ಬೆಳೆಯುವ ವಿಧಾನದ ಪ್ರಾತ್ಯಕ್ಷಿಕೆ ನೀಡಲು ತರಬೇತಿ, ಪ್ರವಾಸಿಗರು ಪ್ರವಾಸದ ಸಂದರ್ಭದಲ್ಲಿ ರೈತರ ಹೊಲದಲ್ಲಿಯೇ ಉಳಿಯಲು ವಸತಿ ವ್ಯವಸ್ಥೆಗೆ ಯೋಜನೆ ರೂಪಿಸ ಲಾಗಿದೆ. ಅಲ್ಲದೇ ಪ್ರವಾಸಿಗರು ಕೃಷಿ ಮಾಡುವ ವಿಧಾನದ ಸ್ವಯಂ ಅನುಭವ ಪಡೆಯಲು ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ರೈತರ ಜಮೀನಿನಲ್ಲಿ ಕಲ್ಪಿಸಲು ಯೋಜಿಸಲಾಗಿದೆ.

ಕೃಷಿ ಪ್ರವಾಸೋದ್ಯಮದಿಂದ ನಗರ ಜೀವನದಿಂದ ಬೇಸತ್ತಿರುವ ಕಾಪೊìರೇಟ್‌ ವಲಯದಲ್ಲಿ ಕಾರ್ಯ ನಿರ್ವಹಿಸುವವರು ವಿದೇಶಿ ಪ್ರಜೆಗಳಿಗೆ ಹೊಸ ಮಾದರಿಯ ಜೀವನ ಶೈಲಿ ಅನುಭವ ದೊರೆ ಯುವುದರೊಂದಿಗೆ ರೈತರಿಗೂ ಆದಾಯ ಹೆಚ್ಚಾಗಲಿದೆ. ಆಯಾ ಪ್ರದೇಶದ ಗ್ರಾಮೀಣ ಜನರ ಉಡುಗೆ ತೊಡುಗೆ ಹಾಗೂ ಆಹಾರ ಪದ್ಧತಿಯನ್ನೂ ಪ್ರವಾಸಿಗರಿಗೆ ಪರಿಚಯಿಸುವ ಕೆಲಸವೂ ಆಗಲಿದೆ. ಜತೆಗೆ ಆದಾಯವೂ ಹೆಚ್ಚಾಗಲಿದೆ. ನಗರದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೂ ಕೃಷಿ ಪ್ರವಾಸೋದ್ಯಮ ಕೈಗೊಳ್ಳಲು ಉತ್ತೇಜನ ನೀಡುವ ಮೂಲಕ ಗ್ರಾಮೀಣ ಜೀವನ ಪದ್ಧತಿ, ಬೆಳೆ ಮಾಹಿತಿ ತಿಳಿಸುವ ಉದ್ದೇಶವೂ ಇದೆ. ಗ್ರಾಮೀಣ ಕಲೆಗಳನ್ನೂ ಜೀವಂತ ವಾಗಿಡಲು ಅನುಕೂಲ ಎಂಬ ಲೆಕ್ಕಾಚಾರ ಇಲಾಖೆಯದ್ದಾಗಿದೆ.

ಮಹಾರಾಷ್ಟ್ರದಲ್ಲಿ ಯಶಸ್ವಿ: ಮಹಾರಾಷ್ಟ್ರದಲ್ಲಿ 2005ರಲ್ಲಿಯೇ ಆಗ್ರಿ ಟೂರಿಸಂ ಅನ್ನು ಪ್ರಾಯೋಗಿಕವಾಗಿ ಆರಂಭಿಸಲಾಗಿದ್ದು, ಈಗ ಮಹಾ ರಾಷ್ಟ್ರದಲ್ಲಿ 150 ಕ್ಕೂ ಹೆಚ್ಚು ಆಗ್ರಿ ಟೂರಿಸಂ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ಆಗ್ರಿ ಟೂರಿಸಂನಿಂದ ಮಹಾರಾಷ್ಟ್ರ ಸರ್ಕಾರ ಪ್ರತಿ ವರ್ಷ 250 ಕೋಟಿ ರೂ.ಗೂ ಹೆಚ್ಚು ಆದಾಯ ಪಡೆದುಕೊಳ್ಳುತ್ತಿದೆ. ಅಲ್ಲದೇ ರೈತರೂ ಹೆಚ್ಚಿನ ಆದಾಯ ಪಡೆಯುತ್ತಿದ್ದು, ಮಹಾರಾಷ್ಟ್ರದ ಶೇ. 95 ನಗರವಾಸಿಗಳು ಕೃಷಿ ಪ್ರವಾಸೋದ್ಯಮ ಹಾಗೂ ಗ್ರಾಮೀಣ ಬದುಕು ತಿಳಿದುಕೊಳ್ಳಲು ಆಸಕ್ತಿ ತೋರಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

* ಶಂಕರ ಪಾಗೋಜಿ

ಟಾಪ್ ನ್ಯೂಸ್

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.