ಸಾಲ ತಂದಾದರೂ ರೈತರಿಗೆ ನೆರವು: ಸಿಎಂ


Team Udayavani, Jan 27, 2020, 3:10 AM IST

saala-tanda

ಮೈಸೂರು: “ಸಾಲ ತಂದಾದರೂ ಸರ್ಕಾರ ರೈತರ ನೆರವಿಗೆ ಬರಲಿದೆ. ರೈತರ ಜೀವನದಲ್ಲಿ ಬದಲಾವಣೆ ತರಲು ಎಲ್ಲ ರೀತಿಯ ಯತ್ನ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಸುತ್ತೂರು ಶ್ರೀಕ್ಷೇತ್ರದಲ್ಲಿ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಕೃಷಿ ಮೇಳ ಮತ್ತು ವಸ್ತುಪ್ರದರ್ಶನಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಸಾವಯವ ಕೃಷಿಗೆ ಹೆಚ್ಚು ಒತ್ತು ನೀಡಬೇಕಿದೆ. ರೈತ ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ಕೊಟ್ಟು ರೈತ ನೆಮ್ಮದಿ, ಸ್ವಾಭಿಮಾನದಿಂದ ಬದುಕುವ ದಿನ ತರುತ್ತೇನೆ. ಜಾತಿ, ಕುಲ, ಪಕ್ಷ ಭೇದವಿಲ್ಲದೇ ರೈತನ ಕಣ್ಣೀರು ಒರೆಸುವ ಕೆಲಸ ಮಾಡುತ್ತೇನೆಂದು ಅಭಯ ನೀಡಿದರು.

ನಾನು ಸಿಎಂ ಆದ ನಾಲ್ಕಾರು ದಿನದಲ್ಲೇ 110 ವರ್ಷಗಳ ನಂತರ ಉತ್ತಮ ಮಳೆಯಾಗಿ ಜಲಾಶಯಗಳು ಭರ್ತಿಯಾಗಿವೆ. ಜತೆಗೆ ಸಾಕಷ್ಟು ಹಾನಿಯೂ ಸಂಭವಿಸಿತ್ತು. 7 ಲಕ್ಷ ಹೆಕ್ಟೇರ್‌ ಬೆಳೆ ನಾಶವಾಗಿತ್ತು. ಕಾನೂನನ್ನು ನೋಡದೆ ರೈತರಿಗೆ ಪರಿಹಾರ ನೀಡಿದ್ದೇವೆ. ಎನ್‌ಡಿಆರ್‌ಎಫ್ ಜತೆಗೆ ರಾಜ್ಯ ಸರ್ಕಾರ ಕೂಡ ನೆರವು ನೀಡಿದ್ದು, ನಮ್ಮದು ರೈತಪರ ಸರ್ಕಾರ ಎಂದು ಯಡಿಯೂರಪ್ಪ ಸಮರ್ಥಿಸಿಕೊಂಡರು.

ಕೃಷಿ ಮತ್ತು ಕೈಗಾರಿಕೆ ಎರಡೂ ಕ್ಷೇತ್ರಗಳನ್ನೂ ಒಟ್ಟಾಗಿ ತೆಗೆದುಕೊಂಡು ರಾಜ್ಯ ಅಭಿವೃದ್ಧಿಪಡಿಸುವ ದಿಕ್ಕಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರಲ್ಲದೆ, ಎಸ್‌.ಎಂ.ಕೃಷ್ಣ ಸರ್ಕಾರದ ನಂತರ 16 ವರ್ಷಗಳ ಬಳಿಕ ಇತ್ತೀಚೆಗೆ ದಾವೋಸ್‌ಗೆ ಹೋದಾಗ ದೊಡ್ಡ ಕೈಗಾರಿಕೋದ್ಯಮಿಗಳ ಜತೆ ಚರ್ಚೆ ನಡೆಸಿದ್ದು, ಮೈಸೂರು, ಬೆಂಗಳೂರು, ಶಿವಮೊಗ್ಗ, ಹುಬ್ಬಳ್ಳಿ-ಧಾರವಾಡ ಭಾಗಗಳಲ್ಲಿ ಬಂಡವಾಳ ಹೂಡಲು ಕೈಗಾರಿಕೋದ್ಯಮಿಗಳನ್ನು ಆಹ್ವಾನಿಸಿ ಬಂದಿದ್ದೇನೆ.

ಮುಂದಿನ 4-6 ತಿಂಗಳಲ್ಲಿ ಈ ಭಾಗದಲ್ಲಿ ಕೈಗಾರಿಕೆಗಳು ಸ್ಥಾಪನೆಯಾಗಲಿವೆ ಎಂದರು. ಇತ್ತೀಚೆಗೆ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿ ಮಾಡಿದ್ದಾಗ ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿನ ಕೆರೆ ಹೂಳು ತೆಗೆದು ರಸ್ತೆಗಳನ್ನು ಎತ್ತರಿಸಲು ಹಣ ನೀಡುವುದಾಗಿ ಭರವಸೆ ನೀಡಿದ್ದಾರೆಂದು ಹೇಳಿದರು.

ಸುತ್ತೂರು ಶ್ರೀ ಕ್ಷೇತ್ರದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಮರಳಗವಿ ಮಠದ ಮುಮ್ಮಡಿ ಶಿವಯೋಗಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಚಿವ ವಿ.ಸೋಮಣ್ಣ, ಸಂಸದೆ ಶೋಭಾ ಕರಂದ್ಲಾಜೆ, ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ ಸೇರಿ ಹಲವರು ಉಪಸ್ಥಿತರಿದ್ದರು.

ಸಿಎಂ ಬಿಎಸ್‌ವೈ ಗುಣಗಾನ ಮಾಡಿದ ಜಿ.ಟಿ. ದೇವೇಗೌಡ
ಮೈಸೂರು: ಯಡಿಯೂರಪ್ಪ ಅಗ್ನಿಪರೀಕ್ಷೆ ಎದುರಿಸಿ ಪರಿಶ್ರಮದಿಂದ ಅಧಿಕಾರ ಹಿಡಿದಿದ್ದಾರೆ. ಹೀಗಾಗಿ ಅಧಿಕಾರಾವಧಿ ಪೂರ್ಣಗೊಳಿಸಲು ವಿರೋಧಪಕ್ಷಗಳು ಸಹಕಾರ ನೀಡಬೇಕೆಂದು ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ, ಬಿಎಸ್‌ವೈ ಅವ ರನ್ನು ಗುಣ ಗಾನ ಮಾಡಿದರು. ಕೃಷಿ ಮೇಳ ಮತ್ತು ವಸ್ತುಪ್ರದರ್ಶನಗಳ ಸಮಾ ರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿ, ಜನರ ಸಂಕಷ್ಟದ ಪರಿಸ್ಥಿತಿಯಲ್ಲಿ ವಿರೋಧ ಪಕ್ಷಗಳು ಟೀಕೆ ಮಾಡುವು ದನ್ನು ಬಿಟ್ಟು ಆಡಳಿತ ಪಕ್ಷಕ್ಕೆ ಸಹಕಾರ ನೀಡಬೇಕು. ಜನರ ಸಮಸ್ಯೆ ನಿವಾರಣೆಗಾಗಿ ಶ್ರಮಿಸುತ್ತಿರುವ ಸಿಎಂ ಯಡಿಯೂರಪ್ಪ ಅವರ ಬೆಂಬಲಕ್ಕೆ ನಿಲ್ಲಬೇಕೆಂದು ಹಾಡಿ ಹೊಗಳಿದರು.

ಸಾಲು ಮರದ ತಿಮ್ಮಕ್ಕಗೆ ಅಭಿನಂದನೆ: ಸಾಲುಮರದ ತಿಮ್ಮಕ್ಕನನ್ನು ಅಭಿನಂದಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ, ಸಮಾಜಕ್ಕೆ ಆದರ್ಶ ವ್ಯಕ್ತಿಯಾಗಿ ಕ್ರಾಂತಿಕಾರಕ ಕೆಲಸ ಮಾಡಿರುವ ಸಾಲುಮರದ ತಿಮ್ಮಕ್ಕನಿಗೆ ತಮ್ಮ ಸರ್ಕಾರ 2 ಕೋಟಿ ಧನ ಸಹಾಯ ಮಾಡಿದ್ದು, ತೆರಿಗೆ ಕಳೆದು ಅವರ ಖಾತೆಗೆ 1.37 ಕೋಟಿ ರೂ. ಜಮೆಯಾಗಿದೆ. ಜತೆಗೆ ವಸತಿ ಇಲಾಖೆಯಿಂದ ಬೆಂಗಳೂರಲ್ಲಿ 50 ಲಕ್ಷ ರೂ. ವೆಚ್ಚದ ಮನೆ ಕಟ್ಟಿಸಿಕೊಟ್ಟಿರುವುದಾಗಿ ಹೇಳಿದರು.

ಸದ್ಯದಲ್ಲೇ ಕಿಸಾನ್‌ ಸಮ್ಮಾನ್‌ 2ನೇ ಕಂತು: ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಗೆ ರಾಜ್ಯ ಸರ್ಕಾರ ಕೂಡ 4 ಸಾವಿರ ರೂ. ಸೇರಿಸಿ ಕೊಡುತ್ತಿದ್ದು, ಈಗಾಗಲೇ ಮೊದಲ ಕಂತು ರೈತರಿಗೆ ತಲುಪಿಸಿದ್ದೇವೆ. ಸದ್ಯದಲ್ಲೇ ಎರಡನೇ ಕಂತಿನ ಹಣ ತಲುಪಲಿದೆ. ಭತ್ತಕ್ಕೆ ಕೇಂದ್ರ ಸರ್ಕಾರ ಘೋಷಿಸಿರುವ ಬೆಂಬಲ ಬೆಲೆ ಜತೆಗೆ ನಮ್ಮ ಸರ್ಕಾರ ಪ್ರತಿ ಕ್ವಿಂಟಾಲ್‌ಗೆ ಹೆಚ್ಚುವರಿಯಾಗಿ 200 ರೂ. ಘೋಷಿಸಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಶಿವಮೊಗ್ಗ: ಅಪ್ಪ ಮಕ್ಕಳ ಶಿಕಾರಿ ನಾನು ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿವಮೊಗ್ಗ: ಅಪ್ಪ ಮಕ್ಕಳ ಶಿಕಾರಿ ನಾನು ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.