ಅಜೇಂದ್ರ ಶೆಟ್ಟಿ ಕೊಲೆಗೆ ಹಣಕಾಸಿನ ವ್ಯವಹಾರವೇ ಕಾರಣ : S.P. ವಿಷ್ಣುವರ್ಧನ್‌ ಹೇಳಿಕೆ


Team Udayavani, Aug 2, 2021, 4:43 PM IST

ಅಜೇಂದ್ರ ಶೆಟ್ಟಿ ಕೊಲೆಗೆ ಹಣಕಾಸಿನ ವ್ಯವಹಾರವೇ ಹತ್ಯೆಗೆ ಕಾರಣ : ಪೊಲೀಸ್‌ ವರಿಷ್ಠಾಧಿಕಾರಿ

ಉಡುಪಿ : ಫೈನಾನ್ಸ್‌ ಹಣಕಾಸು ವಿಚಾರದಲ್ಲಿ ಮನಸ್ತಾಪ ಉಂಟಾಗಿ ಅಜೇಂದ್ರ ಶೆಟ್ಟಿಯನ್ನು ಕೊಲೆ ಮಾಡಿದ್ದಾಗಿ ಪಾಲುದಾರ ಅನೂಪ್‌ ಶೆಟ್ಟಿ ಒಪ್ಪಿಕೊಂಡಿದ್ದಾನೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌. ವಿಷ್ಣುವರ್ಧನ್‌ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಜು.30ರಂದು ರಾತ್ರಿ ಕುಂದಾಪುರ ಗ್ರಾಮಾಂತರ ಠಾಣಾ ಸರಹದ್ದಿನ ಕಾಳಾವರ ನಂದಿಕೇಶ್ವರ ಕಚೇರಿಯೊಳಗೆ ಫೈನಾನ್ಸ್‌ ವ್ಯವಹಾರ ನಡೆಸಿಕೊಂಡಿದ್ದ ಅಜೇಂದ್ರ ಶೆಟ್ಟಿಯನ್ನು ಮಾರಕಾಯುಧದಿಂದ ಕಡಿದು ಕೊಲೆ ಮಾಡಿ ಆತನ ಕೊರಳಿನಲ್ಲಿದ್ದ ಚಿನ್ನದ ಚೈನ್‌ ಮತ್ತು ಅವರ ಹೊಸ ಹೊಂಡಾ ಸಿಟಿ ಕಾರನ್ನು ಅಪಹರಿಸಲಾಗಿತ್ತು. ಈ ಘಟನೆ ನಡೆದ ಬಳಿಕ ಈ ಫೈನಾನ್ಸ್‌ನಲ್ಲಿ ಪಾಲುದಾರಿಕೆ ಮಾಡಿಕೊಂಡಿದ್ದ ಅನೂಪ್‌ ಶೆಟ್ಟಿಯು ತಲೆಮರೆಸಿಕೊಂಡಿದ್ದರಿಂದ ಈತನ ವಿರುದ್ಧ ಅಜೇಂದ್ರ ಶೆಟ್ಟಿಯ ಅಣ್ಣ ಮಹೇಂದ್ರ ಶೆಟ್ಟಿ ನೀಡಿರುವ ದೂರಿನಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದಲ್ಲಿ ಆರೋಪಿಯ ಬಂಧನಕ್ಕಾಗಿ ಕುಂದಾಪುರ ಪೊಲೀಸ್‌ ಉಪಾಧೀಕ್ಷಕರಾದ ಕೆ.ಶ್ರೀಕಾಂತ್‌ ಅವರ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕರಾದ ಕುಂದಾಪುರದ ಗೋಪಿಕೃಷ್ಣ ಮತ್ತು ಬೈಂದೂರಿನ ಸಂತೋಷ ಕಾಯ್ಕಿಣಿ ನೇತೃತ್ವದಲ್ಲಿ ಕುಂದಾಪುರ ಉಪವಿಭಾಗದ ಅಪರಾಧ ಪತ್ತೆ ದಳದ ಸಿಬಂದಿಯವರನ್ನೊಳಗೊಂಡ ವಿಶೇಷ ತಂಡವನ್ನು ರಚಿಸಿ ಆರೋಪಿಯನ್ನು ಜು.31 ರಂದು ಗೋವಾ ರಾಜ್ಯದ ಕೋಲ್ವಾ ಬೀಚ್‌ ಬಳಿ ಬಂಧಿಸಲಾಗಿದೆ ಎಂದರು.

ಇದನ್ನೂ ಓದಿ :ರಾಷ್ಟ್ರ ಧ್ವಜಕ್ಕೆ ಅಗೌರವ : ಕಣ್ಣು ಮುಚ್ಚಿ‌ ಕುಳಿತ ಉಪ್ಪರಪೇಟೆ ಗ್ರಾ.ಪಂ. ಅಧಿಕಾರಿಗಳು

ಆರೋಪಿ ಅನೂಪ್‌ ಶೆಟ್ಟಿ ಈ ಮೊದಲು ದುಬಾಯಿ ಮತ್ತು ಸಿಂಗಾಪುರದಲ್ಲಿ ಕೆಲಸ ಮಾಡಿಕೊಂಡಿದ್ದು ಬಳಿಕ ಊರಿಗೆ ಮರಳಿ ಅಜೇಂದ್ರ ಶೆಟ್ಟಿಯೊಂದಿಗೆ ಸೇರಿಕೊಂಡು ಫೈನಾನ್ಸ್‌ ವ್ಯವಹಾರ ಮಾಡಿಕೊಂಡಿದ್ದ. ಕೊಲೆಯ ಬಗ್ಗೆ ಇನ್ನಷ್ಟು ಮಾಹಿತಿ ಹೆಚ್ಚಿನ ತನಿಖೆಯ ಬಳಿಕ ತಿಳಿಯಲಿದೆ ಎಂದರು.

ಆತನು ಅಪಹರಿಸಿಕೊಂಡು ಹೋಗಿರುವ ಕಾರನ್ನು ವಿಶೇಷ ತಂಡದಲ್ಲಿದ್ದ ಬೈಂದೂರು ಸಿಪಿಐ ರವರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ನಡೆದ 24 ಗಂಟೆಯೊಳಗಾಗಿ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಈ ವಿಶೇಷ ತಂಡದಲ್ಲಿ ಶ್ರೀಧರ್‌ ನಾಯ್ಕ ಪಿ.ಎಸ್‌.ಐ. ಶಂಕರನಾರಾಯಣ, ನಂಜನಾಯ್ಕ ಪಿ.ಎಸ್‌.ಐ. ಗಂಗೊಳ್ಳಿ, ಕುಂದಾಪುರ ಗ್ರಾಮಾಂತರ ಠಾಣೆಯ ಪಿ.ಎಸ್‌.ಐ. ನಿರಂಜನ ಗೌಡ ಅವರೊಂದಿಗೆ ಉಪವಿಭಾಗದ ಸಿಬಂದಿಯವರಾದ ಮೋಹನ, ಚಂದ್ರಶೇಖರ ನಾಗೇಂದ್ರ, ಶ್ರೀನಿವಾಸ, ಸಂತೋಷ್‌ ಕುಮಾರ್‌, ಸಂತೋಷ್‌, ರಾಘವೇಂದ್ರ, ರಾಮು, ಸೀತಾರಾಮ, ಸತೀಶ್‌, ಚಿದಾನಂದ, ಮಧುಸೂಧನ್‌ ಹಾಗೂ ತಾಂತ್ರಿಕ ವಿಭಾಗದ ಸಿಬಂದಿಗಳಾದ ದಿನೇಶ್‌ ಸಹಕರಿಸಿರುತ್ತಾರೆ ಎಂದರು.

ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಕುಮಾರಚಂದ್ರ, ಕುಂದಾಪುರ ಪೊಲೀಸ್‌ ಉಪಾಧೀಕ್ಷಕರಾದ ಕೆ.ಶ್ರೀಕಾಂತ್‌ ಅವರ ಮಾರ್ಗದರ್ಶನದಲ್ಲಿ ಕುಂದಾಪುರ ವೃತ್ತ ನಿರೀಕ್ಷಕರಾದ ಗೋಪಿಕೃಷ್ಣ ಮತ್ತು ಬೈಂದೂರು ವೃತ್ತ ನಿರೀಕ್ಷರಾದ ಸಂತೋಷ ಕಾಯ್ಕಿಣಿ, ಶಂಕರನಾರಾಯಣ ಪಿಎಸ್‌ಐ ಶ್ರೀಧರ್‌ ನಾಯ್ಕ, ಗಂಗೊಳ್ಳಿ ಪಿಎಸ್‌ ಐ ನಂಜಾನಾಯ್ಕ, ಗ್ರಾಮಾಂತರ ಠಾಣೆಯ ಪಿ.ಎಸ್‌.ಐ. ನಿರಂಜನ ಗೌಡ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.