Ayodhya: ಅಯೋಧ್ಯೆಯಲ್ಲಿ ಅಕ್ಷತೆ ಪೂಜೆ- ರಾಮಮಂದಿರದ ಪೂಜಾ ವಿಧಿವಿಧಾನಗಳು ಆರಂಭ
Team Udayavani, Nov 6, 2023, 12:01 AM IST
ಅಯೋಧ್ಯೆ: ಜನವರಿಯಲ್ಲಿ ಲೋಕಾರ್ಪಣೆಗೊಳ್ಳಲಿರುವ ಅಯೋಧ್ಯೆಯ ರಾಮ ಮಂದಿರದ ಪೂಜಾ ವಿಧಿವಿಧಾನಗಳು ಆರಂಭವಾಗಿವೆ. ರವಿವಾರ ಅಕ್ಷತೆ ಪೂಜೆಯೊಂದಿಗೆ ಧಾರ್ಮಿಕ ಆಚರಣೆಗಳಿಗೆ ಚಾಲನೆ ನೀಡಲಾಯಿತು.
ಮಂದಿರದ “ರಾಮ ದರ್ಬಾರ್’ನಲ್ಲಿ ಅಕ್ಷತೆ ಪೂಜೆಯನ್ನು ಕೈಗೊಳ್ಳಲಾಗಿದ್ದು, ಇದರ ಅಂಗವಾಗಿ ಒಂದು ನೂರು ಕ್ವಿಂಟಾಲ್ ಅಕ್ಕಿಗೆ ಅರಿಶಿನ ಮತ್ತು ದೇಸೀ ತುಪ್ಪವನ್ನು ಮಿಶ್ರಗೊಳಿಸಿ ತಯಾರಿಸಿದ ಅಕ್ಷತೆಯನ್ನು ಪೂಜಿಸಲಾಯಿತು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ತಿಳಿಸಿದೆ.
ಪೂಜಿಸಿರುವ ಈ ಅಕ್ಷತೆಯನ್ನು ವಿಹಿಂಪದ 200 ಪ್ರತಿನಿಧಿಗಳಿಗೆ ಹಂಚಲಾಗುತ್ತದೆ. ಇವರು ಮುಂದಿನ ಜ. 22ರ ಒಳಗಾಗಿ ಈ ಅಕ್ಷತೆಯನ್ನು ದೇಶಾದ್ಯಂತ ಭಕ್ತರಿಗೆ ಹಂಚಲಿದ್ದಾರೆ ಎಂದು ಟ್ರಸ್ಟ್ ಮಾಹಿತಿ ನೀಡಿದೆ. ಇದರ ಜತೆಗೆ ಆಯಾ ಪ್ರಾದೇಶಿಕ ಭಾಷೆಗಳಲ್ಲಿ ಎರಡು ಕೋಟಿ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ಕಳುಹಿಸಲಾಗುತ್ತದೆ ಎಂದು ಟ್ರಸ್ಟ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
MUST WATCH
ಹೊಸ ಸೇರ್ಪಡೆ
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ