Law: ಮುರುಘಾಶ್ರೀ ವಿರುದ್ಧದ ಎಲ್ಲ ಪ್ರಕರಣಕ್ಕೆ ತಡೆ


Team Udayavani, Nov 22, 2023, 12:27 AM IST

MURUGHA SHREE

ಬೆಂಗಳೂರು: ಮುರುಘಾ ಶರಣರ ವಿರುದ್ಧದ ಎರಡನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ನಿಲುವು ಹಾಗೂ ಸರಕಾರಿ ಅಭಿಯೋಜಕರ ನಡೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್‌, ಪ್ರಕರಣ ಯಾವುದು, ಯಾರದ್ದು ಎನ್ನುವುದು ಮುಖ್ಯವಲ್ಲ. ನ್ಯಾಯಾಂಗ ಶಿಸ್ತು ಮುಖ್ಯ ಎಂದು ಅಭಿಪ್ರಾಯಪಟ್ಟಿದೆ.

ಇದೇ ವೇಳೆ ಚಿತ್ರದುರ್ಗ 2ನೇ ಅಪರ ಜಿಲ್ಲಾ ನ್ಯಾಯಾಧೀಶರ ಮುಂದೆ ವಿಚಾರಣೆಗಿರುವ ಮುರುಘಾ ಶ್ರೀಗಳ ಎಲ್ಲ ಪ್ರಕರಣಗಳಿಗೆ ತಡೆ ನೀಡಿ ಆದೇಶಿಸಿರುವ ಹೈಕೋರ್ಟ್‌, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ 2ನೇ ಅಪರ ಜಿಲ್ಲಾ ನ್ಯಾಯಾಲಯದಲ್ಲಿರುವ ಎಲ್ಲ ಕಡತಗಳನ್ನು ತರಿಸಿಕೊಂಡು ಪರಿಶೀಲಿಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ರಿಜಿಸ್ಟ್ರಾರ್‌ ಜನರಲ್‌ ಅವರಿಗೆ ನಿರ್ದೇಶನ ನೀಡಿರುವ ಹೈಕೋರ್ಟ್‌, ಸ್ಥಳೀಯ ಪಬ್ಲಿಕ್‌ ಪ್ರಾಸಿಕ್ಯೂಟರ್‌ ವಿರುದ್ಧ ತನಿಖೆ ನಡೆಸಲು ರಾಜ್ಯ ವಿಶೇಷ ಸರಕಾರಿ ಅಭಿಯೋಜಕರಿಗೆ ಆದೇಶಿಸಿದೆ.

ತಮ್ಮ ವಿರುದ್ಧದ ಪ್ರಕರಣಗಳನ್ನು ರದ್ದುಪಡಿಸುವಂತೆ ಕೋರಿ ಮುರುಘಾ ಶರಣರು ಸಲ್ಲಿಸಿರುವ ನಾಲ್ಕು ಕ್ರಿಮಿನಲ್‌ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಮಂಗಳವಾರ ಈ ಆದೇಶ ನೀಡಿದೆ.

ಅಜ್ಞಾನ ಪ್ರದರ್ಶಿಸಿದ ಜಿಲ್ಲಾ ನ್ಯಾಯಾಧೀಶರು; ಅಸಮಾಧಾನ
ವಾದ-ಪ್ರತಿವಾದ ಆಲಿಸಿದ ನ್ಯಾಯ ಪೀಠ, ವಿಚಾರಣೆಗೆ ಹೈಕೋರ್ಟ್‌ನಲ್ಲಿ ತಡೆ ಇದ್ದರೂ, ಆರೋಪಿತ ಸ್ವಾಮೀಜಿಯನ್ನು ತರಾ ತುರಿಯಲ್ಲಿ ಬಂಧಿಸಿದ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿತು. ಆರೋಪಿಯನ್ನು ಬಿಡುಗಡೆ ಮಾಡಿದ ಜೈಲು ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ. ಹೈಕೋರ್ಟ್‌ ಆದೇಶ ಪಾಲಿಸಿದ್ದಕ್ಕೆ ಈ ಕ್ರಮ ಸರಿಯಲ್ಲ. ಆರೋಪಿ ಯಾರೇ ಇರಲಿ ಅದು ನಮಗೆ ಮುಖ್ಯವಲ್ಲ. ನ್ಯಾಯಾಂಗ ಶಿಸ್ತು ನಮಗೆ ಮುಖ್ಯ. ಹೈಕೋರ್ಟ್‌ ಆದೇಶವನ್ನು ನಿಷ್ಫಲಗೊಳಿಸುವ ಪ್ರಯತ್ನ ಒಪ್ಪುವುದಿಲ್ಲ. ಹೈಕೋರ್ಟ್‌ ಆದೇಶದ ಬಗ್ಗೆ ಜಿಲ್ಲಾ ನ್ಯಾಯಾಧೀಶರು ಅಜ್ಞಾನ ಪ್ರದರ್ಶಿಸಿದ್ದಾರೆ, ಸಾಲು-ಸಾಲು ತಪ್ಪುಗಳನ್ನು ಮಾಡಿದ್ದಾರೆ ಎಂದು ನ್ಯಾಯಪೀಠ ಹೇಳಿದೆ.

ಪೂರ್ವಾಗ್ರಹಪೀಡಿತ ಕ್ರಮ
ಅರ್ಜಿದಾರರ ಪರ ಹಿರಿಯ ವಕೀಲ ಸಿ.ವಿ. ನಾಗೇಶ್‌ ಹಾಗೂ ಸಂದೇಶ ಚೌಟ ವಾದ ಮಂಡಿಸಿ, 2ನೇ ಅಪರ ಜಿಲ್ಲಾ ನ್ಯಾಯಾಧೀಶರಿಂದ ಪೂರ್ವಾಗ್ರಹಪೀಡಿತ ಕ್ರಮವಾಗಿದೆ ಎಂದು ಆರೋಪಿಸಿ ಸಾಕ್ಷಿ ವಿಚಾರಣೆ ಬೇರೆ ಕೋರ್ಟ್‌ಗೆ ವರ್ಗಾಯಿಸಲು ಮನವಿ ಮಾಡಿದರು.

ಹೈಕೋರ್ಟ್‌ ಜಾಮೀನು ನೀಡಿದಾಗಲೂ ತತ್‌ಕ್ಷಣ ಬಿಡುಗಡೆಗೆ ಆದೇಶಿಸಲಿಲ್ಲ. ಆದೇಶ ಹೊರಡಿಸಲು ವಿಳಂಬ ಮಾಡಿದ್ದಾರೆ. ಇದರಿಂದಾಗಿ 3 ದಿನ ಶ್ರೀಗಳು ಜೈಲಿನಲ್ಲಿ ರಬೇಕಾಯಿತು. ವಿಚಾರಣೆ ಮುಂದೂಡುವಂತೆ ಹೈಕೋರ್ಟ್‌ ಆದೇಶಿಸಿದ್ದರೂ, ವಿಚಾರಣೆ ನಡೆಸಲಾಗಿದೆ. ಚಿತ್ರದುರ್ಗಕ್ಕೆ ಬರದಂತೆ ಹೈಕೋರ್ಟ್‌ ನಿರ್ಬಂಧಿಸಿದ್ದರೂ, ವಾರೆಂಟ್‌ ಜಾರಿಗೊಳಿಸಿ ಚಿತ್ರದುರ್ಗ ಜಿಲ್ಲೆಗೆ ಕರೆತರುವಂತೆ 2ನೇ ಅಪರ ಜಿಲ್ಲಾ ನ್ಯಾಯಾಧೀಶರು ಆದೇಶಿಸಿದ್ದಾರೆ. ಪಾಸ್‌ಪೋರ್ಟ್‌ ವಶಕ್ಕೆ ನೀಡಿದಾಗಲೂ ಅದರ ಪರಿಶೀಲನೆಗೆ ಕಳುಹಿಸಿದರು. ಹೈಕೋರ್ಟ್‌ ಆದೇಶ ವಿಫ‌ಲಗೊಳಿಸಲು ಬಂಧನಕ್ಕೆ ಆದೇಶಿಸಿದ್ದಾರೆ ಎಂದರು. ಅರ್ಜಿದಾರರ ಪರ ವಕೀಲ ಕೆ.ಬಿ.ಕೆ. ಸ್ವಾಮಿ ವಕಾಲತ್ತು ವಹಿಸಿದ್ದರು.

ಟಾಪ್ ನ್ಯೂಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.