ರೈಲ್ವೆ ಜಾಗ ಕಬಳಿಕೆ ಆರೋಪ- ದಾಖಲೆ ನೀಡದಿದ್ದರೆ ಕೇಸ್ ದಾಖಲು: ಸುರ್ಜೇವಾಲಗೆ ಜೋಷಿ ಸವಾಲು
Team Udayavani, Jan 21, 2024, 12:39 AM IST
ಹುಬ್ಬಳ್ಳಿ: ನಗರದ ರೈಲ್ವೆ ಭೂಮಿ ವಿಚಾರದಲ್ಲಿ ತಮ್ಮ ವಿರುದ್ಧ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿಕೆ ಬಾಲಿಶತನದ್ದು. ರೈಲ್ವೆ ಜಾಗ ಕಬಳಿಸಲು ಪ್ರಯತ್ನಿಸುತ್ತಿದ್ದಾರೆಂಬ ಆರೋಪಕ್ಕೆ ಸಮರ್ಪಕ ದಾಖಲೆ ನೀಡದಿದ್ದರೆ ಕಾನೂನು ಕ್ರಮ ಜರಗಿಸ ಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಎಚ್ಚರಿಸಿದರು.
ಸುದ್ದಿಗಾರರೊಂದಿಗೆ ಮಾತನಾ ಡಿದ ಅವರು, 30 ವರ್ಷಗಳಿಂದ ಪರಿಶುದ್ಧ ರಾಜಕಾರಣ ಮಾಡಿದ್ದೇನೆ. ಕಾಂಗ್ರೆಸ್ನ ಚಿಲ್ಲರೆ ಹಾಗೂ ಬಾಲಿಶತನದ ಹೇಳಿಕೆಗೆ ಮಿತಿ ಇರಬೇಕು ಎಂದರು.
ರೈಲ್ವೆ ಜಾಗಕ್ಕೆ ಸಂಬಂಧಿಸಿ ಇದುವರೆಗೆ ಐದು ಬಾರಿ ಟೆಂಡರ್ ಕರೆದರೂ ಯಾರೂ ಭಾಗಿಯಾಗಿಲ್ಲ. ಈಗ ಮತ್ತೆ ಟೆಂಡರ್ ಕರೆಯಲಾಗಿದೆ. ಕಾಂಗ್ರೆಸ್ನವರಲ್ಲಿ ಹೇಗೂ ಭ್ರಷ್ಟಾ ಚಾರದ ಹಣ ಸಾಕಷ್ಟಿದೆಯಲ್ಲ. ಅವರೇ ಈ ಟೆಂಡರ್ನಲ್ಲಿ ಭಾಗಿಯಾಗಬಹುದು. ನಿಮ್ಮ ಹಾಗೆ ಕಲ್ಲಿದ್ದಲ್ಲಿನಲ್ಲಿ ಚೀಟಿ ಬರೆದು ಟೆಂಡರ್ ಕರೆದಿಲ್ಲ.ಆನ್ಲೈನ್ ಮುಖಾಂತರ ಕರೆಯ ಲಾಗಿದೆ. ಇದರಲ್ಲಿ ಭ್ರಷ್ಟಾಚಾರಕ್ಕೆ ಅವಕಾಶವೇ ಇಲ್ಲ ಎಂದು ಹೇಳಿದರು.
ಜನವರಿ ಬಳಿಕ ಮುನೇನಕೊಪ್ಪ ಜತೆ ಮಾತುಕತೆ
ಮಾಜಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಅ ಜನವರಿ ಅಂತ್ಯದವರೆಗೆ ಎಲ್ಲಿಗೂ ಬರುವುದಿಲ್ಲ. ಆ ಬಳಿಕ ಬಂದು ಭೇಟಿ ಮಾಡುತ್ತೇನೆ ಎಂದಿದ್ದಾರೆ. ಇದರಲ್ಲಿ ಯಾವುದೇ ದೊಡ್ಡ ರಾಜಕೀಯ ಬದಲಾವಣೆ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’