Harassment: ಲೈಂಗಿಕ ಕಿರುಕುಳ ಆರೋಪ: ಬಿಗ್ಬಾಸ್ ಸ್ಪರ್ಧಿ ಶಿಯಾಸ್ ಕರೀಂ ಬಂಧನ
Team Udayavani, Oct 5, 2023, 6:17 PM IST
ಕಾಸರಗೋಡು: ವಿವಾಹವಾಗುವುದಾಗಿ ನಂಬಿಸಿ ಯುವತಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನಲೆಯಲ್ಲಿ ಮಲಯಾಳಂ ನಟ, ಮಲಯಾಳಂ ಬಿಗ್ಬಾಸ್ ಸ್ಪರ್ಧಿ ಶಿಯಾಸ್ ಕರೀಂನನ್ನು ಕಾಸರಗೋಡಿನ ಚಂದೇರ ಠಾಣಾ ಪೋಲೀಸರು ಬಂಧಿಸಿದ್ದಾರೆ.
ಕಾಸರಗೋಡು ಮೂಲದ ಯುವತಿ ನೀಡಿದ ದೂರಿನನ್ವಯ ಶಿಯಾಸ್ ವಿರುದ್ಧ ಲುಕ್ಔಟ್ ನೋಟಿಸ್ ಬಿಡುಗಡೆಗೊಳಿಸಲಾಗಿತ್ತು. ವಿದೇಶದಿಂದ ಬಂದಿಳಿದ ಶಿಯಾಸ್ನನ್ನು ಕಾಸರಗೋಡು ಪೊಲೀಸರು ಚೆನ್ನೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಅನೇಕ ಮಲಯಾಳಂ ಸಿನೆಮಾಗಳಲ್ಲಿ ನಟಿಸಿದ್ದ ಶಿಯಾಸ್ ಕರೀಂ ಬಿಗ್ಬಾಸ್, ಸ್ಟಾರ್ ಮ್ಯಾಜಿಕ್ ನಂತಹ ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿದ್ದರು.
ಶಿಯಾಸ್ಗೆ ಎರ್ನಾಕುಲಂನ ಜಿಮ್ ಒಂದರಲ್ಲಿ ಕಾಸರಗೋಡು ಮೂಲದ ಪಡನ್ನದ 32 ವರ್ಷದ ಯುವತಿಯ ಪರಿಚಯವಾಗಿತ್ತು. ಆ ಬಳಿಕ ಆಕೆಯ ಜೊತೆ ಸಲುಗೆ ಬೆಳೆಸಿ ವಿವಾಹವಾಗುವ ಭರವಸೆ ನೀಡಿ ಹಲವಾರು ಕಡೆಗೆ ಆಕೆಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದ ಎಂದು ದೂರುದಾರ ಯುವತಿ ಆರೋಪಿಸಿದ್ದಾಳೆ.
ಈ ನಡುವೆ ಶಿಯಾಸ್ ತನ್ನಿಂದ 11 ಲಕ್ಷ ರೂ. ಪಡೆದು ವಂಚಿಸಿದ್ಧಾಗಿಯೂ ದೂರಿನಲ್ಲಿ ತಿಳಿಸಲಾಗಿದೆ. 2021 ರಿಂದ 2023ರ ತನಕ ಎರ್ನಾಕುಲಂ, ಮುನ್ನಾರ್ ಮುಂತಾದೆಡೆ ರೆಸಾರ್ಟ್ಗಳಿಗೆ ಕರೆದೊಯ್ದು ಕಿರುಕುಳ ನೀಡಿರುವುದಾಗಿ ಆರೋಪಿಸಲಾಗಿದೆ. ಸಂತ್ರಸ್ಥ ಯುವತಿಯನ್ನು ಮದುವೆಯಾಗುವುದಾಗಿ ತಿಳಿಸಿದ್ದ ಶಿಯಾಸ್ ಈ ನಡುವೆ ಬೇರೆ ಯುವತಿಯೊಂದಿಗೆ ವಿವಾಹ ನಿಶ್ಚಯ ಮಾಡಿಕೊಂಡಿರುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಪಡಿಸಿದ್ದ. ಹೀಗಾಗಿ ಶಿಯಾಸ್ ವಿವಾಹ ಭರವಸೆ ನೀಡಿ ತನ್ನನ್ನು ವಂಚಿಸಿದ್ದಾನೆ ಎಂದು ಯುವತಿ ದೂರು ನೀಡಿದ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: Hindu temple: ಹಿಂದೂ ದೇವಸ್ಥಾನದ ಮುಂದೆ ನಗ್ನವಾಗಿ ಧ್ಯಾನ ಮಾಡಿದ ಪ್ರವಾಸಿಗ; ಭಾರೀ ಆಕ್ರೋಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ