Sullia ಮೊಬೈಲ್ ರಿಚಾರ್ಜ್ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು
Team Udayavani, May 7, 2024, 7:10 AM IST
ಸುಳ್ಯ: ಗಾಂಧಿನಗರದ ಏರ್ಟೆಲ್ ಮಳಿಗೆಗೆ ಕರೆನ್ಸಿ ರಿಚಾರ್ಚ್ಗೆಂದು ಬಂದ ಯುವತಿಯೊಬ್ಬಳ ಫೋಟೋ ಕ್ಲಿಕ್ಕಿಸಿದ ಅನ್ಯಕೋಮಿನ ಯುವಕನ ಮೇಲೆ ಯುವತಿಯ ಮನೆಯವರು ಪೊಲೀಸ್ಗೆ ದೂರು ನೀಡಿದ ಘಟನೆ ಸೋಮವಾರ ನಡೆದಿದೆ.
ಗಾಂಧಿನಗರದಲ್ಲಿರುವ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಹಿಂದೂ ಯುವತಿ ಮೊಬೈಲ್ ರಿಚಾರ್ಜ್ಗೆ ಬಂದ ಸಂದರ್ಭ ಕುಳಿತುಕೊಳ್ಳುವಂತೆ ಹೇಳಿದ ಯುವಕ ಆಕೆಯ ಅರಿವಿಗೆ ಬಾರದಂತೆ ಫೋಟೋ ಕ್ಲಿಕ್ಕಿಸಿದ್ದನು. ಇದನ್ನು ಗಮನಿಸಿದ ಯುವತಿ ಆಕ್ಷೇಪಿಸಿರುವುದಲ್ಲದೆ ಆತನ ಮೊಬೈಲನ್ನು ಕಸಿದು ನೋಡಿದಾಗ ತನ್ನ ಫೋಟೋ ಇರುವುದನ್ನು ನೋಡಿ ಗಾಬರಿಯಿಂದ ಅದನ್ನು ಡಿಲೀಟ್ ಮಾಡಿದ್ದಾಳೆ. ಬಳಿಕ ಮನೆಗೆ ಬಂದು ವಿಷಯ ತಿಳಿಸಿದಳು. ಮನೆಯವರು ಸುಳ್ಯ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪೋಲಿಸರು ಯುವಕನನ್ನು ಕರೆ ತಂದು ವಿಚಾರಣೆ ನಡೆಸಿದ್ದಾರೆ.
ಘಟನೆಯ ಬಗ್ಗೆ ತಿಳಿದ ಹಿಂದೂ ಸಂಘಟನೆಯ ಕಾರ್ಯಕರ್ತರು ಠಾಣೆಯೆದುರು ಜಮಾಯಿಸಿದ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಖೋಟಾ ನೋಟು ವಿನಿಮಯ ದಂಧೆ ಪ್ರಕರಣ ; ಆರೋಪಿಗಳಿಂದ 506 ಖೋಟಾ ನೋಟುಗಳ ವಶ
Uppinangady ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಸಾವು
ರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್ನಲ್ಲೇ ಹೆಚ್ಚು
Bantwal ಎರಡೂಕಾಲು ಎಕ್ರೆ ವಿಸ್ತೀರ್ಣ; ಅಭಿವೃದ್ಧಿ ಆಗದೇ ಜೀರ್ಣ
Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು