Karnataka: ಅರ್ಚಕರಿಗೆ ಭತ್ಯೆ: 77.85 ಕೋಟಿ ರೂ. ಬಿಡುಗಡೆ
- ತಸ್ತೀಕ್ ಭತ್ಯೆಯಡಿ ಮೊದಲ ಕಂತಿನ ಅನುದಾನ
Team Udayavani, Sep 3, 2023, 8:18 PM IST
ಬೆಂಗಳೂರು: ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳ ಅರ್ಚಕರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ.
2023-24ನೇ ಸಾಲಿನ ತಸ್ತೀಕ್ ಭತ್ಯೆ ಅಡಿಯಲ್ಲಿ ಮೊದಲ ಕಂತಿನ ಅನುದಾನ 77.85 ಕೋಟಿ ರೂ.ಬಿಡುಗಡೆ ಮಾಡಿದೆ. ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ತಸ್ತೀಕ್ ಭತ್ಯೆಯಡಿ ಮೊದಲ ಕಂತಿನಲ್ಲಿ 77 ಕೋಟಿ 85 ಲಕ್ಷದ 54 ಸಾವಿರದ 497 ರೂ.ಗಳನ್ನು ಖಜಾನೆ-2 ಮೂಲಕ ಅಪ್ಲೋಡ್ ಮಾಡಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದೆ.
ಸರ್ಕಾರದಿಂದ ಮಂಜೂರಾದ ತಸ್ತೀಕ್ ಮೊತ್ತವನ್ನು ಪ್ರಸ್ತುತ ಆರ್ಥಿಕ ವರ್ಷದಲ್ಲಿ ಯಾವುದೇ ನಿಬಂಧನೆಗಳನ್ನು ವಿಧಿಸದೆ ತುರ್ತಾಗಿ ಸಂಬಂಧಪಟ್ಟ ಸಂಸ್ಥೆ ಇಲ್ಲವೇ ದೇವಾಲಯಗಳ ವಿಳಂಬಕ್ಕೆ ಅವಕಾಶ ಕಲ್ಪಿಸದೆ ಸಂಬಂಧಪಟ್ಟ ತಹಶೀಲ್ದಾರ್ ಅವರು ಆಯಾ ಸಂಸ್ಥೆ/ದೇವಾಲಯಗಳ ಖಾತೆಯಿಂದ ಅರ್ಚಕರ ಖಾತೆಗೆ ನೇರವಾಗಿ ಜಮಾ ಮಾಡುವಂತೆ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಸೂಚಿಸಿದ್ದಾರೆ.
ಈ ಅನುದಾನ ವಿನಿಯೋಗಿಸಿಕೊಂಡ ಬಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯು ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳ ಇಲ್ಲವೆ ಸಿಬ್ಬಂದಿ ಸಂಬಂಧಿಸಿದ ತಹಶೀಲ್ದಾರ್ ಅವರಿಂದ ಕೆಎಫ್ಸಿ ನಮೂನೆ 62 (ಬಿ)ಯಲ್ಲಿ ವೆಚ್ಚದ ತನಿಖೆಯನ್ನು ಪಡೆದು ಧಾರ್ಮಿಕ ದತ್ತಿ ಇಲಾಖೆ ಕಚೇರಿಗೆ ಸಲ್ಲಿಸುವಂತೆ ಸೂಚಿಸಿದ್ದಾರೆ. ತಹಶೀಲ್ದಾರ್ ಬಿಲ್ ತಯಾರಿಸಿ ಮೇಲು ಸಹಿ ಮಾಡಿದ ನಂತರ ಖಜಾನೆಯಿಂದ ಸೆಳೆದು ಧಾರ್ಮಿಕ ಸಂಸ್ಥೆಗಳಿಗೆ ನಿಯಮಾನುಸಾರ ನೀಡಲು ತಾಕೀತು ಮಾಡಿದ್ದಾರೆ.
ಹಲವು ದಿನಗಳಿಂದ ತಸ್ತೀಕ್ ಭತ್ಯೆ ಬಾಕಿಯಿದ್ದು ಸಕಾಲದಲ್ಲಿ ಅರ್ಚಕರಿಗೆ ಹಣ ಸಿಗದೆ ತೊಂದರೆಯಲ್ಲಿದ್ದರು. ಜತೆಗೆ ರಾಜ್ಯದ ದೇವಸ್ಥಾನಗಳ ಪೂಜಾ ಕಾರ್ಯ ಇತ್ಯಾದಿಗಳ ಕೆಲಸಕ್ಕೆಂದು ಸರ್ಕಾರ ಬಿಡುಗಡೆ ಮಾಡುವ “ತಸ್ತೀಕ್’ ಹಣಕ್ಕೂ ಖಜಾನೆ ಅಧಿಕಾರಿಗಳು ಪರ್ಸೆಂಟೇಜ್ ಕೇಳುತ್ತಿದ್ದಾರೆ ಎಂದು ಮುಜರಾಯಿ ಇಲಾಖೆಗೆ ಒಳಪಟ್ಟ ದೇವಸ್ಥಾನಗಳ ಅರ್ಚಕರ ಸಂಘ ಇತ್ತೀಚೆಗೆ ಆರೋಪಿಸಿತ್ತು.
ಈ ಕುರಿತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಇಲಾಖೆಯ ಸಿ ದರ್ಜೆ ದೇವಸ್ಥಾನಗಳ ಅರ್ಚಕರ ಸಂಘ ಪತ್ರ ಬರೆದಿತ್ತು. ಸರ್ಕಾರ ಪ್ರತಿ ವರ್ಷ ದೇವಸ್ಥಾನಗಳಲ್ಲಿ ನಿತ್ಯ ಪೂಜಾ ಕಾರ್ಯ ಇತ್ಯಾದಿ ಸಣ್ಣ ಪುಟ್ಟ ಕೆಲಸಗಳಿಗೆ ತಸ್ತೀಕ್ ಹಣ ಬಿಡುಗಡೆ ಮಾಡುತ್ತಿದೆ. ಈ ಹಣ ಬಿಡುಗಡೆಗೆ ಖಜಾನೆ ಅಧಿಕಾರಿಗಳು ಶೇ.20 ಕಮಿಷನ್ ಕೇಳುತ್ತಿದ್ದಾರೆ. ಕಮಿಷನ್ ಕೊಡದಿದ್ದರೆ ಹಣ ಬಿಡುಗಡೆ ಮಾಡುತ್ತಿಲ್ಲ. ಹಣ ಬಿಡುಗಡೆಗೂ ದಲ್ಲಾಳಿಗಳಿಗೆ ಹಣ ಕೊಡಬೇಕಾಗಿದೆ. ಆದ್ದರಿಂದ ಕಮಿಷನ್ ವ್ಯವಹಾರವನ್ನು ಸರ್ಕಾರ ತಡೆಯಬೇಕು ಎಂದು ಆಗ್ರಹಿಸಿತ್ತು. ಅರ್ಚಕರ ಮನವಿಗೆ ಸ್ಪಂದಿಸಿದ್ದ ಸಚಿವ ರಾಮಲಿಂಗಾರೆಡ್ಡಿ, ಇನ್ಮುಂದೆ ಅರ್ಚಕರ ಖಾತೆಗೆ ನೇರವಾಗಿ ತಸ್ತಿಕ್ ಹಣ ಜಮೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ